Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೀಮೇಕ್ ಸಿನಿಮಾದಲ್ಲಿ ಅಮೀರ್ ಖಾನ್: ಪಾತ್ರಕ್ಕಾಗಿ 20 ಕೆ.ಜಿ ಇಳಿಸಿಕೊಂಡ ನಟ
'ಥಗ್ಸ್ ಆಫ್ ಹಿಂದೂಸ್ತಾನ್' ಚಿತ್ರದ ನಂತರ ಅಮೀರ್ ಖಾನ್ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಯಾಕೆಂದರೆ ಅಮೀರ್ ಸಿನಿಮಾ ಅಂದ್ರೆನೇ ಸಿನಿಪ್ರೇಕ್ಷಕರಲ್ಲಿ ವಿಶೇಷವಾದ ಕುತೂಹಲ ಮತ್ತು ನಿರೀಕ್ಷೆ ಸ್ವಲ್ಪ ಜಾಸ್ತಿ ಇರುತ್ತೆ. ವರ್ಷಕ್ಕೆ ಒಂದೇ ಸಿನಿಮಾ ಮಾಡಿದ್ರು ಪ್ರೇಕ್ಷಕರನ್ನು ಮತ್ತೆ ಮತ್ತೆ ಕಾಡುವಂತಹ ಸಿನಿಮಾಗಳಾಗಿರುತ್ತೆ.
ಹೀರೋಯಿಸಂ, ಡೈಲಾಗ್ ಗಳ ಅಬ್ಬರ, ಅತಿಯಾದ ಆಕ್ಷನ್ ಗಳಿಲ್ಲದೇ ಬಾಲಿವುಡ್ ನಲ್ಲಿ ಸ್ಟಾರ್ ನಟನಾಗಿ ಮೆರೆಯುತ್ತಿರುವ ಅಮೀರ್ ತಮ್ಮ ಮುಂದಿನ ಸಿನಿಮಾ ಘೋಷಿಸಿದ್ದಾರೆ. ಸದಾ ಹೊಸತನದ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ಅಮೀರ್ ಈಗ ರೀಮೇಕ್ ಚಿತ್ರಕ್ಕೆ ಸೈ ಎಂದಿದ್ದಾರೆ. ಅನೇಕ ವರ್ಷಗಳ ಬಳಿಕ ಅಮೀರ್, ರೀಮೇಕ್ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಅಚ್ಚರಿ ಮೂಡಿಸಿದೆ.
1000 ಕೋಟಿಯ 'ಮಹಾಭಾರತ'ಕ್ಕೆ ಅಮೀರ್ ಖಾನ್ ಹಾಕಿದ್ರು ಬ್ರೇಕ್.!
ಹೌದು, ಆಸ್ಕರ್ ಗೆದ್ದ ಹಾಲಿವುಡ್ ನ 'ಫಾರೆಸ್ಟ್ ಗಂಪ್' ಸಿನಿಮಾ ಚಿತ್ರವನ್ನ ಹಿಂದಿಯಲ್ಲಿ ಮಾಡುತ್ತಿದ್ದಾರೆ. 1994ರಲ್ಲಿ ರೀಲೀಸ್ ಆಗಿದ್ದ 'ಫಾರೆಸ್ಟ್ ಗಂಪ್' ಅಮೀರ್ ಖಾನ್ ಅವರನ್ನ ತುಂಬಾ ಕಾಡಿದ ಚಿತ್ರವಂತೆ. ಹಾಗಾಗಿ ಈ ಚಿತ್ರದಲ್ಲಿ ನಟಿಸಲು ಆಸಕ್ತಿ ತೋರಿದ್ದಾರಂತೆ.
ಮೀಟೂ ಅಭಿಯಾನಕ್ಕೆ ಮೊದಲ ಜಯ: 'ಮೊಘಲ್' ಚಿತ್ರದ ನಿರ್ದೇಶಕ ಕಿಕ್ ಔಟ್.!
ಇನ್ನು ಚಿತ್ರಕ್ಕೆ 'ಲಾಲ್ ಸಿಂಗ್ ಚಡ್ಡಾ' ಅಂತ ಟೈಟಲ್ ಇಡಲಾಗಿದೆ. 'ಲಾಲ್ ಸಿಂಗ್ ಚಡ್ಡಾ' ಚಿತ್ರದ ಪಾತ್ರಕ್ಕಾಗಿ ಅಮೀರ್ 20 ಕೆಜಿ ತೂಕ ಇಳಿಸಿಕೊಳ್ಳಬೇಕಂತೆ. ಹಾಗಾಗಿ ಚಿತ್ರದ ಪಾತ್ರಕ್ಕೆ ಸಾಕಷ್ಟು ತಯಾರಿ ನಡೆಸಿಕೊಳ್ಳಬೇಕಾಗಿರುವ ಕಾರಣ 6 ತಿಂಗಳು ಸಮಯ ತೆಗೆದುಕೊಂಡಿದ್ದಾರಂತೆ. ಅಮೀರ್ ಖಾನ್ ಸಂಪೂರ್ಣ ತಯಾರಿ ಬಳಿಕ 'ಲಾಲ್ ಸಿಂಗ್ ಚಡ್ಡಾ' ಚಿತ್ರ ಸೆಟ್ಟೇರಲಿದೆ. ಈ ಹಿಂದೆ 'ಸೂಪರ್ ಸೀಕ್ರೆಟ್ ಸ್ಟಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಅದ್ವೈತ್ ಚಂದನ್ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ.