ಅಯ್ಯೋ ಅಮೀರ್ ಖಾನ್ ಬಗ್ಗೆ ಹಬ್ಬಿದ್ದ ಸುದ್ದಿ ಸುಳ್ಳಾ?
ಬಾಲಿವುಡ್ ನಟ ಅಮೀರ್ ಅವರು ಮಹಾರಾಷ್ಟ್ರದ ಬರಪೀಡಿತ ಪ್ರದೇಶದ 'ತಾಲ್' ಮತ್ತು 'ಕೋರೆಗಾಂವ್' ಎಂಬ ಎರಡು ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ ಅಂತ ಈ ಹಿಂದೆ ಎಲ್ಲೆಡೆ ಸುದ್ದಿಯಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟಾ ಆಗಿದ್ದು, ಅಮೀರ್ ಅವರು ಯಾವುದೇ ಹಳ್ಳಿಗಳನ್ನು ದತ್ತು ತೆಗೆದುಕೊಂಡಿಲ್ಲ ಅಂತ ಸುದ್ದಿ ಹರಿದಾಡುತ್ತಿದೆ.
ಸದ್ಯಕ್ಕೆ ಹರಡಿರುವ ಮಾಹಿತಿ ಪ್ರಕಾರ ಅಮೀರ್ ಖಾನ್ ಅವರು ಯಾವುದೇ ಗ್ರಾಮಗಳನ್ನು ದತ್ತು ಪಡೆದುಕೊಂಡಿಲ್ಲ. ಆದರೆ ಅವರು 'ಪಾನಿ' ಫೌಂಡೇಶನ್ ಎಂಬ ಎನ್.ಜಿ.ಓ ಜೊತೆ ಸೇರಿ ಮಹಾರಾಷ್ಟ್ರದ ಸುಮಾರು 120 ಬರಪೀಡಿತ ಗ್ರಾಮಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಮಾಡಲಾಗಿದೆ.[ಅಂತೂ ಈ ಬಾರಿ ಒಳ್ಳೆ ಕೆಲಸ ಮಾಡಿದ್ದಾರೆ ಆಮಿರ್ ಖಾನ್]

ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ್ದ ನಟ ಅಮೀರ್ ಖಾನ್ ಅವರು ಅಲ್ಲಿನ ಜನರಿಗೆ ಜಲ ಸಂರಕ್ಷಣೆ ಹೇಗೆ ಮಾಡೋದು?, ಹಾಗೂ ನೀರಿನ ಮಹತ್ವ ಮುಂತಾದವುಗಳ ಬಗ್ಗೆ ತಿಳುವಳಿಕೆ ನೀಡಿದ್ದರ ಜೊತೆಗೆ ಎರಡು ಹಳ್ಳಿ ದತ್ತು ಪಡೆದುಕೊಂಡಿದ್ದರು ಎಂಬ ವದಂತಿ ಎಲ್ಲಾ ಕಡೆ ಹರಡಿತ್ತು.[ಅಮೀರ್ ವಿರುದ್ಧ ಟ್ವಿಟ್ಟರ್ ನಲ್ಲಿ ರೊಚ್ಚಿಗೆದ್ದ ಸ್ಯಾಂಡಲ್ ವುಡ್ ಸ್ಟಾರ್ಸ್]

ಆದರೆ ಇದೀಗ ಹೊಸದಾಗಿ ಸುದ್ದಿಯಾಗಿರುವ ಪ್ರಕಾರ ಅಮೀರ್ ಅವರು ಯಾವುದೇ ಗ್ರಾಮಗಳನ್ನು ದತ್ತು ತೆಗೆದುಕೊಂಡಿಲ್ಲ. ಆದರೆ ಎನ್.ಜಿ.ಓ ಜೊತೆ ಸೇರಿ ಪರಿಹಾರದ ಜೊತೆಗೆ ಹಳ್ಳಿಗಳಲ್ಲಿ ನೀರಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


Click it and Unblock the Notifications











