Don't Miss!
- News ಲೋಕಸಭಾ ಚುನಾವಣೆ 2024: ಹಾಸನದಲ್ಲಿ ಪುತ್ರನ ಪರ ಮತಯಾಚನೆಗಿಳಿದ ಭವಾನಿ ರೇವಣ್ಣ
- Lifestyle ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
- Sports ಕಮಿನ್ಸ್ ಟೆನ್ಷನ್ ಹೆಚ್ಚಿಸಿದ ಸ್ಟಾರ್ ಪ್ಲೇಯರ್ ನಿರ್ಧಾರ: ಎಸ್ಆರ್ಎಚ್ ತಂಡಕ್ಕೆ ಆರಂಭದಲ್ಲೇ ಪೆಟ್ಟು
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಗೆದ್ದ ಸಂಭ್ರಮದಲ್ಲಿ ನಟ ಅಭಿಷೇಕ್ ಬಚ್ಚನ್
ಕೊರೊನಾ ವೈರಸ್ ಸೋಂಕು ದೃಢಪಟ್ಟ ಕಾರಣ ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಲ್ಲಿ ಕೊನೆಗೂ ವೈರಸ್ ನೆಗೆಟಿವ್ ಬಂದಿದೆ. ಜುಲೈ 11ರಂದು ಅಭಿಷೇಕ್ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
Recommended Video
ಸುಮಾರು ಒಂದು ತಿಂಗಳು ಚಿಕಿತ್ಸೆ ಪಡೆದ ಅವರು ಕೊನೆಗೂ ವೈರಸ್ ಕಾಟದಿಂದ ಹೊರಬಂದಿದ್ದಾರೆ. ಈ ಸಂಗತಿಯನ್ನು ಅವರು ಶನಿವಾರ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಆಸ್ಪತ್ರೆಯೊಳಗಿನ ಐಸೋಲೇಷನ್ ವಾರ್ಡ್ನ ತಮ್ಮ ಆರೋಗ್ಯ ಫಲಕವನ್ನು ಅಭಿಷೇಕ್ ಶೇರ್ ಮಾಡಿದ್ದಾರೆ.
ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಬಿಗ್ ಬಿ ಅಮಿತಾಬ್ ಬಚ್ಚನ್
ಈ ಮಧ್ಯಾಹ್ನ ಬಂದ ನನ್ನ ಕೋವಿಡ್ 19 ವರದಿಯಲ್ಲಿ ನೆಗೆಟಿವ್ ಬಂದಿದೆ. ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು. ಮನೆಗೆ ಮರಳಲು ಸಾಧ್ಯವಾಗುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಅಮಿತಾಬ್ ಬಚ್ಚನ್ ಕೂಡ ಮಗ ಮನೆಗೆ ವಾಪಸ್ ಬರುತ್ತಿರುವ ಸಂತಸ ಹಂಚಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಅವರಲ್ಲಿ ಕೊರೊನಾ ನೆಗೆಟಿವ್ ಬಂದಿರುವುದರಿಂದ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳುತ್ತಿದ್ದಾರೆ ಎಂದಿದ್ದಾರೆ.
'ಕೊರೊನಾದಿಂದ ಸತ್ತು ಹೋಗಿ' ಎಂದು ಟ್ರೋಲ್ ಮಾಡಿದವರಿಗೆ ಅಮಿತಾಬ್ ಬಚ್ಚನ್ ಕ್ಲಾಸ್
ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರಲ್ಲಿ ಕೊರೊನಾವೈರಸ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಜುಲೈ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಳಲ್ಲಿ ಕೊರೊನಾ ವೈರಸ್ ಇರುವುದು ಮರುದಿನ ಖಚಿತವಾದರೂ ಅವರು ಜುಲೈ 17ರವರೆಗೂ ಮನೆಯಲ್ಲಿಯೇ ಐಸೋಲೇಷನ್ನಲ್ಲಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿ ಜುಲೈ 27ರಂದು ಬಿಡುಗಡೆಯಾಗಿದ್ದರು. ಅಮಿತಾಬ್ ಬಚ್ಚನ್ ಆಗಸ್ಟ್ 2ರಂದು ಮನೆಗೆ ಮರಳಿದ್ದರು. ಆದರೆ ತಮ್ಮ ಆರೋಗ್ಯ ವರದಿಯಲ್ಲಿ ಕೋವಿಡ್ 19 ಪಾಸಿಟಿವ್ ಬರುತ್ತಿದ್ದ ಕಾರಣ ಅಭಿಷೇಕ್ ಆಸ್ಪತ್ರೆಯಲ್ಲಿಯೇ ಇದ್ದರು.