Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಹಾರ ಮೂಲದ ನಟ ಮುಂಬೈನಲ್ಲಿ ಆತ್ಮಹತ್ಯೆ: ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ
ಸುಶಾಂತ್ ಸಿಂಗ್ ಸಾವಿನ ಪ್ರಕರಣವೇ ಗೋಜಲಾಗಿರುವಾಗ, ಮತ್ತೊಬ್ಬ ಬಿಹಾರ ಮೂಲದ ನಟ, ಮುಂಬೈ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಹಾರದಿಂದ ನಟನೆ ಅವಕಾಶ ಅರಸಿ ಮುಂಬೈಗೆ ಬಂದು ಇಲ್ಲಿಯೇ ನೆಲೆಸಿದ್ದ ನಟ ಅಕ್ಷತ್ ಉತ್ಪರ್ಷ್ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಭಾನುವಾರ ನಟ ಅಕ್ಷತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಭಾನುವಾರ ರಾತ್ರಿ 11:30 ರ ವೇಳೆಗೆ ಆತನ ರೂಂ ಮೇಟ್ ಅಕ್ಷತ್ ನಿವಾಸಕ್ಕೆ ಬಂದಾಗ ಆತ್ಮಹತ್ಯೆ ವಿಷಯ ಗೊತ್ತಾಗಿದೆ. ಇಂದು ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಅಕ್ಷತ್ನದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಅಕ್ಷತ್ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಭಾನುವಾರ ಅಕ್ಷತ್ ನಮಗೆ ಕರೆ ಮಾಡಿ ಮಾತನಾಡಿದ್ದಾನೆ, ಅಂದು ಆತ ಸಾಮಾನ್ಯವಾಗಿಯೇ ನಮ್ಮೊಂದಿಗೆ ಮಾತನಾಡಿದ ಎಂದಿದೆ ಅಕ್ಷತ್ ಕುಟುಂಬ.
Recommended Video
ಅಕ್ಷತ್ ಕೆಲವು ಭೋಜಪುರಿ ಸಿನಿಮಾಗಳು ಹಾಗೂ ಧಾರಾವಾಹಿಗಳನ್ನು ನಟಿಸಿದ್ದಾರೆ. ಅಕ್ಷತ್ ಸಾವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಸುಶಾಂತ್ ಸಿಂಗ್ ಸಾವಿಗೆ ಹೋಲಿಸುತ್ತಿದ್ದಾರೆ.