Don't Miss!
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಹಾರ ಮೂಲದ ನಟ ಮುಂಬೈನಲ್ಲಿ ಆತ್ಮಹತ್ಯೆ: ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ
ಸುಶಾಂತ್ ಸಿಂಗ್ ಸಾವಿನ ಪ್ರಕರಣವೇ ಗೋಜಲಾಗಿರುವಾಗ, ಮತ್ತೊಬ್ಬ ಬಿಹಾರ ಮೂಲದ ನಟ, ಮುಂಬೈ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಹಾರದಿಂದ ನಟನೆ ಅವಕಾಶ ಅರಸಿ ಮುಂಬೈಗೆ ಬಂದು ಇಲ್ಲಿಯೇ ನೆಲೆಸಿದ್ದ ನಟ ಅಕ್ಷತ್ ಉತ್ಪರ್ಷ್ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಭಾನುವಾರ ನಟ ಅಕ್ಷತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಭಾನುವಾರ ರಾತ್ರಿ 11:30 ರ ವೇಳೆಗೆ ಆತನ ರೂಂ ಮೇಟ್ ಅಕ್ಷತ್ ನಿವಾಸಕ್ಕೆ ಬಂದಾಗ ಆತ್ಮಹತ್ಯೆ ವಿಷಯ ಗೊತ್ತಾಗಿದೆ. ಇಂದು ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಅಕ್ಷತ್ನದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಅಕ್ಷತ್ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಭಾನುವಾರ ಅಕ್ಷತ್ ನಮಗೆ ಕರೆ ಮಾಡಿ ಮಾತನಾಡಿದ್ದಾನೆ, ಅಂದು ಆತ ಸಾಮಾನ್ಯವಾಗಿಯೇ ನಮ್ಮೊಂದಿಗೆ ಮಾತನಾಡಿದ ಎಂದಿದೆ ಅಕ್ಷತ್ ಕುಟುಂಬ.
Recommended Video
ಅಕ್ಷತ್ ಕೆಲವು ಭೋಜಪುರಿ ಸಿನಿಮಾಗಳು ಹಾಗೂ ಧಾರಾವಾಹಿಗಳನ್ನು ನಟಿಸಿದ್ದಾರೆ. ಅಕ್ಷತ್ ಸಾವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಸುಶಾಂತ್ ಸಿಂಗ್ ಸಾವಿಗೆ ಹೋಲಿಸುತ್ತಿದ್ದಾರೆ.