Just In
Don't Miss!
- News
ಚಿನ್ನದ ಬೆಲೆ ಇಳಿಕೆ: ಜನವರಿ 15ರ ಬೆಲೆ ಹೀಗಿದೆ
- Sports
ಸಯ್ಯದ್ ಮುಷ್ತಾಕ್ ಅಲಿ: ಮುಂಬೈಗೆ ಪಾದಾರ್ಪಣೆ ಮಾಡಿದ ಸಚಿನ್ ಪುತ್ರ
- Automobiles
ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸೂಪರ್ಬ್ ಕಾರ್ ಬಿಡುಗಡೆಗೊಳಿಸಿದ ಸ್ಕೋಡಾ
- Lifestyle
ಕುಂಭ ಮೇಳ ಪ್ರಾರಂಭ: ಕುಂಭ ಮೇಳ ವಿಶೇಷತೆ ಹಾಗೂ ಎಷ್ಟು ದಿನ ಇರುತ್ತದೆ?
- Finance
ಕ್ಯಾಪಿಟಾಲ್ ಹಿಂಸಾಚಾರ ಮುನ್ನ 5 ಲಕ್ಷ USD ಗೂ ಹೆಚ್ಚು ಮೊತ್ತದ ಬಿಟ್ ಕಾಯಿನ್ ವರ್ಗಾವಣೆ
- Education
BECIL Recruitment 2021: 11 ರೇಡಿಯೋಗ್ರಾಫರ್ ಅಥವಾ ಎಕ್ಸ್-ರೇ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿಭಟನೆ ಮಾಡುತ್ತಿರುವ ರೈತರಿಗೆ 1 ಕೋಟಿ ರೂ. ನೀಡಿದ ನಟ ದಿಲ್ಜಿತ್ ದೊಸಾಂಜ್
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತರು ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದ್ದು, ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುತ್ತೀರೋ ಅಥವಾ ಇಲ್ಲವೋ ಎಂಬ ಪ್ರಶ್ನೆಗೆ ಹೌದು ಅಥವಾ ಇಲ್ಲ ಎನ್ನುವ ಸ್ಪಷ್ಟ ಉತ್ತರ ಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ.
ರೈತರ ಪ್ರತಿಭಟನೆಗೆ ಅನೇಕರು ಬೆಂಬಲ ನೀಡಿದ್ದಾರೆ. ಅನೇಕ ಸಿನಿಮಾ ಮತ್ತು ಕ್ರೀಡಾ ತಾರೆಯರು ರೈತರ ಬೆನ್ನಿಗೆ ನಿಂತಿದ್ದಾರೆ. ನಟ ದಿಲ್ಜಿತ್ ದೊಸಾಂಜ್ ಪ್ರತಿಭಟನಾ ನಿರತ ರೈತರಿಗೆ 1 ಕೋಟಿ ರೂಪಾಯಿ ನೀಡಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ಕಂಗನಾ ಜೊತೆ ಜಗಳವಾಡಿ 4 ಲಕ್ಷ ಜನರನ್ನು ಸಂಪಾದಿಸಿದ ದಿಲ್ಜೀತ್!
ಪ್ರತಿಭಟನಾ ರೈತರಿಗೆ ಬೆಚ್ಚಗಿನ ಬಟ್ಟೆ ಮತ್ತು ಅಗತ್ಯ ವಸ್ತುಗಳನ್ನು ನೀಡಲು ದಿಲ್ಜಿತ್ 1 ಕೋಟಿ ನೀಡಿದ್ದಾರಂತೆ. ಪಂಜಾಬ್ ಮೂಲಕ ನಟ ಮತ್ತು ಗಾಯಕ ದಿಲ್ಜಿತ್ ಆರಂಭದಿಂದನೂ ರೈತರ ಬೆಂಬಲಕ್ಕೆ ನಿಂತಿದ್ದಾರೆ. ದೆಹಲಿಯಲ್ಲಿ ಸಿಕ್ಕಾಪಟ್ಟೆ ಚಳಿ ಇದೆ. ಚಳಿಯ ಮಧ್ಯೆಯೂ ಸರ್ಕಾರದ ವಿರುದ್ಧ ರಸ್ತೆಯಲ್ಲೇ ಪ್ರತಿಭಟನೆಗೆ ಮುಂದಾಗಿರುವ ಲಕ್ಷಾಂತರ ಮಂದಿ ರೈತರಿಗೆ ಬೆಚ್ಚಗಿನ ವಸ್ತ್ರ, ಬೆಡ್ ಶೀಟ್ ಕೊಳ್ಳಲು 1 ಕೋಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚಿಗೆ ನಟಿ ಕಂಗನಾ ವಿರುದ್ದ ದಿಲ್ಜಿತ್ ಸಿಡಿದೆದ್ದಿದ್ದರು. ರೈತರ ಪ್ರತಿಭಟನೆಯ ಬಗ್ಗೆ ಕಂಗನಾ ನೆಗೆಟಿವ್ ಟ್ವೀಟ್ ಮಾಡಿ, ಪ್ರತಿಭಟನಾಗಾರ್ತಿ ಮಹಿಂದರ್ ಕೌರ್ ಕುರಿತಂತೆ ಈಕೆ 100 ರೂಪಾಯಿಗೆ ಎಲ್ಲರಿಗೂ ಲಭ್ಯವಾಗುತ್ತಾಳೆ ಎಂದು ಹೇಳಿಕೆ ನೀಡಿದ್ದರು.
ಕಂಗನಾ ಹೇಳಿಕೆ ವಿರುದ್ಧ ಕಿಡಿಕಾರಿದ್ದ ದಿಲ್ಜಿತ್, ಪ್ರತಿಭಟನಾಗಾರ್ತಿ ಮಹಿಂದರ್ ಕೌರ್ ಸಂದರ್ಶನದ ವಿಡಿಯೋ ಶೇರ್ ಮಾಡಿ, ಇಲ್ಲಿದೆ ನೋಡು ಸಾಕ್ಷಿ, ಇಷ್ಟೊಂದು ಕುರುಡಿ ಆಗಬಾರದು' ಎಂದು ಕಂಗನಾಗೆ ತಿರುಗೇಟು ನೀಡಿದ್ದರು.