Don't Miss!
- News Lok Sabha Election 2024: ಚುನಾವಣೆಯಲ್ಲಿ ಸ್ಪರ್ಧಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಹಣ ಇಲ್ವಂತೆ!
- Sports SRH vs MI: IPL ಇತಿಹಾಸದಲ್ಲೇ ಗರಿಷ್ಠ ರನ್ ಕಲೆ ಹಾಕಿದ ಹೈದರಾಬಾದ್: ಎಸ್ಆರ್ಎಚ್ ಆಟಕ್ಕೆ ಮಕಾಡೆ ಮಲಗಿದ MI
- Lifestyle 11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಮಹಿಳೆ..! ಮಣಿ ಅಮ್ಮ ಎಂಬ ಧೀರ ಮಹಿಳೆ ಕಥೆ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಖ್ಯಾತ ನಟ ಚಂದ್ರಶೇಖರ್ ವೈದ್ಯ ನಿಧನ
ಹಿಂದಿ ಚಿತ್ರರಂಗದ ಖ್ಯಾತ ಕಲಾವಿದ, ಸಾಮಾಜಿಕ ಹೋರಾಟಗಾರ ಚಂದ್ರಶೇಖರ್ ವೈದ್ಯ ಬುಧವಾರ (ಜೂನ್ 16) ಬೆಳಗ್ಗೆ 7 ಗಂಟೆಗೆ ಮುಂಬೈನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
98 ವರ್ಷದ ಚಂದ್ರಶೇಖರ್ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈನ ವಿಲೇ ಪಾರ್ಲೆ ಶವಾಗಾರದಲ್ಲಿ ನಡೆಯಲಿದೆ ಎಂದು ಪುತ್ರ ಅಶೋಕ್ ಚಂದ್ರಶೇಖರ್ ಮಾಹಿತಿ ನೀಡಿದರು. ಅಂದ್ಹಾಗೆ, ಹಿರಿಯ ನಟ ಚಂದ್ರಶೇಕರ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದರು.
ದಿಗ್ಗಜ ಸಂಗೀತ ನಿರ್ದೇಶಕ ಘಂಟಸಾಲರ ಮಗ ರತ್ನಕುಮಾರ್ ನಿಧನ
ಚಂದ್ರಶೇಖರ್ ವೈದ್ಯ 1950 ರ ದಶಕದ ಜನಪ್ರಿಯ ನಟರಾಗಿದ್ದರು. ಕಾಳಿ ಟೋಪಿ ಲಾಲ್ ರುಮಾಲ್, ಬಾರದಾರಿ, ಸ್ಟ್ರೀಟ್ ಸಿಂಗರ್ ಮತ್ತು ರುಸ್ತೋಮ್ ಇ ಬಾಗ್ದಾದ್ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ.
1954ರಲ್ಲಿ ವಿ ಶಾಂತಾರಾಮ್ ನಿರ್ದೇಶನದ 'ಔರತ್ ಥೇರಿ ಯೆಹಿ ಕಹಾನಿ' ಚಿತ್ರದ ಮೂಲಕ ಸಿನಿಮಾ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿದರು. ಬಳಿಕ ಚಿತ್ರರಂಗದಲ್ಲಿ ಸಕ್ರಿಯರಾದ ಚಂದ್ರಶೇಖರ್ ಸುಮಾರು 112ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ರಾಮಾನಂದ್ ಸಾಗರ್ ಅವರ ರಾಮಾಯಣ ಟಿವಿ ಸರಣಿಯಲ್ಲೂ ಚಂದ್ರ ಭಾಗವಾಗಿದ್ದರು.
Recommended Video
ಇನ್ನು ಚಂದ್ರಶೇಖರ್ ವೈದ್ಯರ ಅವರ ಮಗಳ ಮಗ ಶಕ್ತಿ ಆರೋರ ಸಹ ಚಿತ್ರರಂಗದಲ್ಲಿದ್ದಾರೆ. ಅಜ್ಜನ ಸಾವಿಗೆ ಸಂತಾಪ ಸೂಚಿಸಿರುವ ಶಕ್ತಿ ಆರೋರ ಹಳೆಯ ಫೋಟೋ ಶೇರ್ ಮಾಡಿ ನೆನಪು ಮೆಲುಕು ಹಾಕಿದ್ದಾರೆ.