Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಖ್ಯಾತ ನಟ ಚಂದ್ರಶೇಖರ್ ವೈದ್ಯ ನಿಧನ
ಹಿಂದಿ ಚಿತ್ರರಂಗದ ಖ್ಯಾತ ಕಲಾವಿದ, ಸಾಮಾಜಿಕ ಹೋರಾಟಗಾರ ಚಂದ್ರಶೇಖರ್ ವೈದ್ಯ ಬುಧವಾರ (ಜೂನ್ 16) ಬೆಳಗ್ಗೆ 7 ಗಂಟೆಗೆ ಮುಂಬೈನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
98 ವರ್ಷದ ಚಂದ್ರಶೇಖರ್ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈನ ವಿಲೇ ಪಾರ್ಲೆ ಶವಾಗಾರದಲ್ಲಿ ನಡೆಯಲಿದೆ ಎಂದು ಪುತ್ರ ಅಶೋಕ್ ಚಂದ್ರಶೇಖರ್ ಮಾಹಿತಿ ನೀಡಿದರು. ಅಂದ್ಹಾಗೆ, ಹಿರಿಯ ನಟ ಚಂದ್ರಶೇಕರ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದರು.
ದಿಗ್ಗಜ ಸಂಗೀತ ನಿರ್ದೇಶಕ ಘಂಟಸಾಲರ ಮಗ ರತ್ನಕುಮಾರ್ ನಿಧನ
ಚಂದ್ರಶೇಖರ್ ವೈದ್ಯ 1950 ರ ದಶಕದ ಜನಪ್ರಿಯ ನಟರಾಗಿದ್ದರು. ಕಾಳಿ ಟೋಪಿ ಲಾಲ್ ರುಮಾಲ್, ಬಾರದಾರಿ, ಸ್ಟ್ರೀಟ್ ಸಿಂಗರ್ ಮತ್ತು ರುಸ್ತೋಮ್ ಇ ಬಾಗ್ದಾದ್ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ.
1954ರಲ್ಲಿ ವಿ ಶಾಂತಾರಾಮ್ ನಿರ್ದೇಶನದ 'ಔರತ್ ಥೇರಿ ಯೆಹಿ ಕಹಾನಿ' ಚಿತ್ರದ ಮೂಲಕ ಸಿನಿಮಾ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿದರು. ಬಳಿಕ ಚಿತ್ರರಂಗದಲ್ಲಿ ಸಕ್ರಿಯರಾದ ಚಂದ್ರಶೇಖರ್ ಸುಮಾರು 112ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ರಾಮಾನಂದ್ ಸಾಗರ್ ಅವರ ರಾಮಾಯಣ ಟಿವಿ ಸರಣಿಯಲ್ಲೂ ಚಂದ್ರ ಭಾಗವಾಗಿದ್ದರು.
Recommended Video
ಇನ್ನು ಚಂದ್ರಶೇಖರ್ ವೈದ್ಯರ ಅವರ ಮಗಳ ಮಗ ಶಕ್ತಿ ಆರೋರ ಸಹ ಚಿತ್ರರಂಗದಲ್ಲಿದ್ದಾರೆ. ಅಜ್ಜನ ಸಾವಿಗೆ ಸಂತಾಪ ಸೂಚಿಸಿರುವ ಶಕ್ತಿ ಆರೋರ ಹಳೆಯ ಫೋಟೋ ಶೇರ್ ಮಾಡಿ ನೆನಪು ಮೆಲುಕು ಹಾಕಿದ್ದಾರೆ.