Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಿವಾರ ಧರಿಸುವ ಮನೆಯಲ್ಲಿ ಶಿಲುಬೆ ಯಾಕೆ? ಗರಂ ಆದ ನೆಟ್ಟಿಗರಿಗೆ ಮಾಧವನ್ ಖಡಕ್ ಉತ್ತರ
ಬಹುಭಾಷ ನಟ ಮಾಧವನ್ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಕಾರಣ ಇತ್ತೀಚಿಗೆ ಮಾಧವನ್ ಮಗ ಮತ್ತು ತಂದೆಯ ಜೊತೆ ಕುಳಿತು ಉಪಕರ್ಮ ಆಚರಿಸಿಕೊಳ್ಳುತ್ತಿರುವ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
2 ವರ್ಷಗಳ ಬಳಿಕ ಈ ಪಾತ್ರಕ್ಕಾಗಿ ಶೇವ್ ಮಾಡಿದ ಮಾಧವನ್
ಜೊತೆಗ ರಕ್ಷಾಬಂಧನ ಆಚರಿಸಿಕೊಳ್ಳುವ ಫೊಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅವರು ಶೇರ್ ಮಾಡಿರುವ ಫೊಟೋದ ಹಿಂದೆ ಏಸುವಿನ ಶಿಲುಬೆ ಕಾಣಿಸುತ್ತಿದೆ. ಹಾಗಾಗಿ ಜನಿವಾರ ಧರಿಸುವ ನಿಮ್ಮ ಮನೆಯ ದೇವರ ಮನೆಯಲ್ಲಿ ಏಸುವಿನ ಶಿಲುಬೆ ಯಾಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಹಿಂಬಾಲಕರ ಪ್ರಶ್ನೆಗೆ ಮಾಧವನ್ ಖಡಕ್ ಉತ್ತರ ನೀಡಿದ್ದಾರೆ.
ಮಾಧವನ್ ಗೆ ನೆಟ್ಟಿಗರ ಪ್ರಶ್ನೆ
"ನೀವು ಬ್ರಾಹ್ಮಣರು. ಹಿಂದೀ ಎಂದ ಮೇಲೆ ನಿಮ್ಮ ಮನೆಯ ಪೂಜಾ ಕೋಣೆಯಲ್ಲಿ ಏಸುವಿನ ಶಿಲುಬೆಯಾಕಿದೆ. ಚರ್ಚ್ ಗಳಲ್ಲಿ ಹಿಂದೂ ದೇವರ ಮೂರ್ತಿಯಾಗಲಿ, ಫೊಟೋ ಆಗಲಿ ಇರುತ್ತದೆಯಾ. ನಿಮ್ಮ ಮೇಲಿನ ಗೌರವ ಕಳೆದುಹೋಯಿತು. ನಕಲಿ ಮುಖವನ್ನು ಯಾಕೆ ತೋರಿಸುತ್ತೀರಿ" ಎಂದು ನೆಟ್ಟಿಗರು ರೊಚ್ಚಿಗೆದ್ದಿದ್ದರು.
ನೆಟ್ಟಿಗರ ಪ್ರಶ್ನೆಗೆ ಮಾಧವನ್ ಖಡಕ್ ಉತ್ತರ
"ನಿಮ್ಮಂತವರಿಂದ ಗೌರವ ತೆಗೆದುಕೊಳ್ಳಬೇಕೆಂದು ನನಗನಿಸುವುದಿಲ್ಲ. ನನ್ನ ಮನೆಯಲ್ಲಿರುವವರು ಎಲ್ಲಾ ಧರ್ಮದ ಮಲೆ ನಂಬಿಕೆಯನ್ನು ಇಟ್ಟವರು. ಎಲ್ಲಾ ಜಾತಿ ಧರ್ಮದ ಮೇಲೆ ಗೌರವವಿದೆ. ನಿಮ್ಮ ರೋಗಗ್ರಸ್ತ ಮನಸ್ಥಿಗೆ ಶೀಘ್ರವೇ ಪರಿಹಾರ ಸಿಗಲಿ" ಎಂದು ಮಾಧವನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪಾತ್ರಕ್ಕಾಗಿ ಈ ರೀತಿ ಬದಲಾದ ನಟ ಯಾರೆಂದು ಗುರುತಿಸಿ
ಸಿಖ್ ಧರ್ಮಕ್ಕೆ ಮತಾಂತರಗೊಂಡಿದ್ದೀರಾ ಎಂದು ಕೇಳಿಲ್ಲವಲ್ಲಾ?
"ನಾನು ದರ್ಗಾಕ್ಕೂ ಹೋಗುತ್ತೇನೆ, ಚರ್ಚಿಗೂ ಹೋಗುತ್ತೇನೆ, ಗುರುದ್ವಾರಕ್ಕೂ ಹೋಗುತ್ತೇನೆ. ನನ್ನ ಪೂಜಾ ಕೋಣೆಯಲ್ಲಿ ಗೋಲ್ಡನ್ ಟೆಂಪಲ್ ಕೂಡ ಇದೆ. ಅದನ್ನು ನೋಡಿ ಸಿಖ್ ಧರ್ಮಕ್ಕೆ ಮತಾಂತರ ಗೊಂಡಿದ್ದೀರಾ ಎಂದು ಕೇಳಲ್ಲವಲ್ಲಾ?" ಎಂದು ಕೇಳಿದ್ದಾರೆ
ಬೇರೆಯವರ ಆಚರಣೆ, ನಂಬಿಕೆಗಳಿಗೆ ಗೌರವಕೊಡಿ
"ನನ್ನ ಅಸ್ಮಿತೆ ಬಗ್ಗೆ ಹೆಮ್ಮೆ ಪಡುತ್ತಾ, ಅದನ್ನು ಆಚರಿಸುತ್ತಾ ಬೇರೆಯವರ ಆಚರಣೆ, ನಂಬಿಕೆಗಳಿಗೆ ಗೌರವ ಕೊಡುವಂತೆ ನಮ್ಮ ಹಿರಿಯರು ಹೇಳಿಕೊಂಡಿದ್ದಾರೆ. ನನ್ನ ಮಗನಿಗೂ ಅದನ್ನೇ ಪಾಲಿಸುವಂತೆ ಹೇಳಿಕೊಟ್ಟಿದ್ದೇನೆ. ಪಾಲಿಸುತ್ತಿದ್ದಾನೆ. ನಂಬಿಕೆ, ಆಚರಣೆ, ಸಂಪ್ರದಾಯ ಇವೆಲ್ಲಾ ಅವರವರ ವೈಯಕ್ತಿಕ ಅಭಿಪ್ರಾಯ. ನಮ್ಮ ಅಸ್ಮಿತೆಯನ್ನು ಉಳಿಸಿಕೊಂಡು ಬೇರೆಯವರ ನಂಬಿಕೆ, ಆಚರಣೆಗಳನ್ನು ಗೌರವಿಸುವುದೆ ನಿಜವಾದ ಧರ್ಮ" ಎಂದು ಖಾರವಾಗಿ ಉತ್ತರಿಸಿದ್ದಾರೆ.