Don't Miss!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- News 'ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ'- ನರೇಗಾ ಯೋಜನೆಯಡಿ ಲಕ್ಷಾಂತರ ನಿರುದ್ಯೋಗಿಗಳಿಗೆ ಉದ್ಯೋಗ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೈಂಗಿಕ ಕಿರುಕುಳ ಆರೋಪ: 'ಸ್ಲಮ್ ಡಾಗ್ ಮಿಲಿಯನೇರ್' ನಟ ಮಧುರ್ ಮಿತ್ತಲ್ ಗೆ ಜಾಮೀನು
ಮಾಜಿ ಗರ್ಲ್ ಫ್ರೆಂಡ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಆಸ್ಕರ್ ಪ್ರಶಸ್ತಿ ಪುರಸ್ಕೃತ ಚಿತ್ರ ಸ್ಲಂ ಡಾಗ್ ಮಿಲಿಯನೇರ್ ಖ್ಯಾತಿಯ ನಟ ಮಧುರ್ ಮಿತ್ತಲ್ ಗೆ ಮುಂಬೈ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಮಧುರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಮಾಜಿ ಗೆಳತಿ, ಮಧುರ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪ ಮಾಡಿ ದೂರು ನೀಡಿದ್ದರು.
ಕಂಗನಾ ರನೌತ್ ವಿರುದ್ಧ ಮತ್ತೊಂದು ದೂರು ದಾಖಲು
ಜಾಮೀನು ಅರ್ಜಿಯ ಪ್ರಕಾರ, ಡಿಸೆಂಬರ್ ನಲ್ಲಿ ಮಾಜಿ ಗೆಳತಿ ಜೊತೆ ಗೋವಾಗೆ ಭೇಟಿ ನೀಡಿದ್ದ ಮಧುರ್, ಪ್ರಪೋಸ್ ಮಾಡಿದ್ದರು. ಬಳಿಕ ಮುಂಬೈಗೆ ಬಂದ ನಂತರ ಗೆಳತಿ, ಮಧುರ್ ಮತ್ತು ಕುಟುಂಬದವರ ಜೊತೆ 4 ದಿನಗಳು ಮಧುರ್ ಮನೆಯಲ್ಲೇ ಕಾಲಕಳೆದಿದ್ದಾರೆ. ಬಳಿಕ ಮನೆಯವರ ಜೊತೆ ಕಿತ್ತಾಡಿಕೊಂಡು ಮನೆಯಿಂದ ಹೊರಹೋಗಿದ್ದಾಳೆ ಎಂದು ಮಧುರ್ ಹೇಳಿದ್ದಾರೆ.
ಕುಟುಂಬದವರನ್ನು ಬಿಟ್ಟು ಬರುವಂತೆ ಒತ್ತಾಯ ಮಾಡಿದ್ದಲ್ಲದೆ, ಇಬ್ಬರು ಪ್ರತ್ಯೇಕವಾಗಿ ಇರಲು ಅಪಾರ್ಟ್ಮೆಂಟ್ ಅನ್ನು ಬಾಡಿಗೆ ಪಡೆದು ಒಟ್ಟಿಗೆ ಇರುವಂತೆ ಒತ್ತಡ ಹೇರುತ್ತಿದ್ದರು ಎಂದು ಮಧುರ್ ಆರೋಪಿಸಿದ್ದಾರೆ. ಜೊತೆಗೆ ಆರ್ಥಿಕ ಲಾಭವನ್ನು ತನ್ನ ಕುಟುಂಬಕ್ಕೆ ನೀಡದಂತೆ ಒತ್ತಡ ಹೇರುತ್ತಿದ್ದಳು ಎಂದು ಮಧುರ್ ಹೇಳಿದ್ದಾರೆ.
ಫೆಬ್ರವರಿಯಲ್ಲಿ ಜೈಪುರದಲ್ಲಿ ಚಿತ್ರೀಕರಣದಲ್ಲಿದ್ದ ಸಮಯದಲ್ಲಿ ಮಾಜಿ ಗೆಳತಿ ಮಧುರ್ ಗೆ ಬೆದರಿಕೆ ಹಾಕಿ, ಸಂಬಂಧ ಕಡಿದುಕೊಳ್ಳುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ ಎಂದಿದ್ದಾರೆ. ಬಳಿಕ ಮಧುರ್ ಮುಂಬೈಗೆ ಮರಳಿದ ನಂತರ ಮಾಜಿ ಗೆಳತಿ ಮತ್ತು ಮಧುರ್ ನಡುವೆ ಜಗಳವಾಗಿದೆ. ಜಗಳದ ನಂತರ ದೂರ ಆಗಿದ್ದಾಳೆ ಎಂದು ಮಧುರ್ ಹೇಳಿದ್ದಾರೆ.
ಇಬ್ಬರು ದೂರ ಆಗಿ 10 ದಿನಗಳಲ್ಲೇ ಮಧರ್ ವಿರುದ್ಧ ಮುಂಬೈನ ಖಾರ್ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ್ದಾರೆ. ಆದರೆ ಆಕೆಯನ್ನು ಮದುವೆಯಾಗಲು ತಯಾರಾಗಿದ್ದೆ ಎಂದು ಮಧುರ್ ಹೇಳಿದ್ದಾರೆ.
Recommended Video
ಎರಡು ಕಡೆ ವಾದ ಆಲಿಸಿದ ನ್ಯಾಯಾಧೀಶರು ಮಾರ್ಚ್ 26, 2021ರ ವರೆಗೂ ಬಂಧನದಿಂದ ಮುಕ್ತಿ ನೀಡಿ, ಆದೇಶವನ್ನು ಕಾಯ್ದಿರಿಸಿದ್ದಾರೆ.