Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕ್ಷಯ್ ಕುಮಾರ್ ಸಿನಿಮಾ ಬಗ್ಗೆ 'ಶಕ್ತಿಮಾನ್' ಅಸಮಾಧಾನ
ನಟ ಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ ಬಾಂಬ್' ಸಿನಿಮಾ ಒಟಿಟಿಯಲ್ಲಿ ನವೆಂಬರ್ 7 ಕ್ಕೆ ಬಿಡುಗಡೆ ಆಗಲಿದೆ. ಬಿಡುಗಡೆಗೆ ಮುನ್ನಾ ಕೆಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದೆ ಈ ಸಿನಿಮಾ.
ಸಿನಿಮಾವು 'ಲವ್ ಜಿಹಾದ್'ಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಸಿನಿಮಾದಲ್ಲಿ ನಾಯಕ ಮುಸ್ಲಿಂ ಧರ್ಮೀಯನಾಗಿದ್ದು, ಹಿಂದು ಧರ್ಮೀಯ ಯುವತಿಯನ್ನು ಪ್ರೀತಿಸುತ್ತಾನೆ, ಇದು ಕೆಲವರಿಗೆ ಸಹ್ಯವಾಗಿಲ್ಲ, ಅವರು ಸಿನಿಮಾವನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿದರು.
'ಲಕ್ಷ್ಮೀ ಬಾಂಬ್' ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಹಿಂದೂ ಸೇನಾ ಎಚ್ಚರಿಕೆ
ನಂತರ ಈಗ ಮತ್ತೊಂದು ವಿವಾದ ಎದ್ದಿದ್ದು, ಸಿನಿಮಾದ ಹೆಸರು ಸೂಕ್ತವಾಗಿಲ್ಲ, ಸಿನಿಮಾದ ಹೆಸರು ಹಿಂದು ದೇವತೆ ಲಕ್ಷ್ಮಿಗೆ ಅಪಮಾನ ಮಾಡುವಂತಿದೆ ಎಂಬ ವಿವಾದ ಎದ್ದಿದೆ. ವಿಶೇಷವೆಂದರೆ ಹಿರಿಯ ನಟರೊಬ್ಬರು ಸಹ ಇದಕ್ಕೆ ದನಿ ಗೂಡಿಸಿದ್ದಾರೆ.
ಲಕ್ಷ್ಮಿ ಬಾಂಬ್ ಸಿನಿಮಾದ ಬಗ್ಗೆ ಮುಖೇಶ್ ಆಕ್ಷೇಪ
ಶಕ್ತಿಮಾನ್ ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಮುಖೇಶ್ ಖನ್ನಾ ಅವರೂ ಸಹ ಸಿನಿಮಾದ ಹೆಸರಿನ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಸಿನಿಮಾದ ಹೆಸರು ಸರಿಯಿಲ್ಲ, ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ಸುದೀರ್ಘ ಲೇಖನ ಸಹ ಬರೆದಿದ್ದಾರೆ.
'ಅಲ್ಲಾ ಬಾಂಬ್, ಬದ್ಮಾಶ್ ಜೀಸಸ್ ಎಂದು ಹೆಸರಿಡಿ ನೋಡೋಣ'
'ನೀವು ಅಲ್ಲಾ ಬಾಂಬ್, ಬದ್ಮಾಶ್ ಜೀಸಸ್ ಎಂದು ಸಿನಿಮಾಕ್ಕೆ ಹೆಸರಿಡಲು ಒಪ್ಪುತ್ತೀರಾ? ಎಂದು ಚಿತ್ರತಂಡವನ್ನು ಪ್ರಶ್ನೆ ಮಾಡಿದ್ದಾರೆ ಮುಖೇಶ್ ಖನ್ನಾ. ಲಕ್ಷ್ಮಿ ಹೆಸರಿನ ಮುಂದೆ ಬಾಂಬ್ ಸೆರಿಸಿರುವುದು ಕಿಡಿಗೇಡಿತನ ಅದನ್ನು ಖಂಡಿತ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ಅಕ್ಷಯ್ ಕುಮಾರ್ ಗೆ 'ದುಡ್ಡು ಎಣಿಸುವ ಯಂತ್ರ' ಗಿಫ್ಟ್ ಕೊಟ್ಟಿದ್ದೇಕೆ ಕಪಿಲ್ ಶರ್ಮಾ?
ಇವರಿಗೆ ಹಿಂದುಗಳೆಂದರೆ ಭಯವಿಲ್ಲ: ಮುಖೇಶ್
ಈ ರೀತಿಯ ಹೆಸರನ್ನು ವಾಣಿಜ್ಯ ಉದ್ದೇಶಕ್ಕಾಗಿ ಇಡಲಾಗಿದೆ. ಚಿತ್ರ ನಿರ್ಮಿಸಿದವರಿಗೆ ಗೊತ್ತು, ಸಿನಿಮಾದ ಹೆಸರು ವಿವಾದ ಸೃಷ್ಟಿಸುತ್ತದೆ, ಅಷ್ಟೇ ಬೇಗ ವಿವಾದ ತಣ್ಣಗಾಗುತ್ತದೆ ಎಂದು. ಆದರೆ ವಿವಾದದಿಂದ ಸಿನಿಮಾಕ್ಕೆ ಪ್ರಚಾರ ಸಿಗುತ್ತದೆ ಎಂಬ ಕಾರಣಕ್ಕೆ ಇಂಥಹಾ ಹೆಸರಿಟ್ಟಿದ್ದಾರೆ. ಅವರಿಗೆ ಹಿಂದುಗಳ ಬಗ್ಗೆ ಭಯವಿಲ್ಲ, ಬೇರೆ ಧರ್ಮದ ಹೆಸರುಗಳನ್ನು ಸಿನಿಮಾಕ್ಕೆ ಇಡಲಿ ನೋಡೋಣ ಎಂದಿದ್ದಾರೆ ಮುಖೇಶ್.
Recommended Video
ಪ್ರೇಕ್ಷಕರೇ ಸಿನಿಮಾ ತಂಡಕ್ಕೆ ಬುದ್ಧಿಕಲಿಸಬೇಕು: ಮುಖೇಶ್
ಈ ಸಿನಿಮಾಕ್ಕೆ ಪ್ರೇಕ್ಷಕರೇ ಬುದ್ಧಿ ಕಲಿಸಬೇಕು, ಸಿನಿಮಾವನ್ನು ಬ್ಯಾನ್ ಮಾಡಬಾರದು, ಅದು ಬಿಡುಗಡೆ ಆಗಬೇಕು, ಆದರೆ ಯಾರೂ ಸಹ ಸಿನಿಮಾವನ್ನು ನೋಡಬಾರದು. ಹೆಸರು ಬದಲಾಯಿಸಿದರೆ ಮಾತ್ರವೇ ಸಿನಿಮಾ ನೋಡುವುದಾಗಿ ಒತ್ತಾಯ ಹೇರಬೇಕು ಎಂದಿದ್ದಾರೆ ಅವರು.
ಅಕ್ಷಯ್ ಕುಮಾರ್ 'ಲಕ್ಷ್ಮೀ ಬಾಂಬ್' ಸಿನಿಮಾದ ವಿರುದ್ಧ ಲವ್ ಜಿಹಾದ್ ಆರೋಪ: #ShameonuAkshayKumar ಟ್ರೆಂಡ್