Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಸಿರಾಟದ ಸಮಸ್ಯೆ, ಸಂಜಯ್ ದತ್ ಆಸ್ಪತ್ರೆಗೆ ದಾಖಲು
ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಉಸಿರಾಟದ ಸಮಸ್ಯೆ ಎದುರಿಸಿದ್ದು ಶನಿವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಜಯ್ ದತ್ ಅವರಿಗೆ ಕೊರೊನಾ ಸೋಂಕು ತಗುಲಿರಬಹುದೆಂಬ ಅನುಮಾನದ ಮೇಲೆ ಕೋವಿಡ್ ರ್ಯಾಪಿಡ್ ಟೆಸ್ಟ್ ನಡೆಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಬಂದಿದೆ.
ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಬಿಗ್ ಬಿ ಅಮಿತಾಬ್ ಬಚ್ಚನ್
ಶನಿವಾರ ಸಂಜೆ ವೇಳೆಗೆ ಸಂಜಯ್ ದತ್ಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಕೂಡಲೇ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಆರೋಗ್ಯದಿಂದಿದ್ದಾರೆ ಎನ್ನಲಾಗಿದೆ.
ಮಾಹಿತಿ ನೀಡಿದ ಸಂಜಯ್ ದತ್ ವೈದ್ಯರು
ಸಂಜಯ್ ದತ್ ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಜಲಿಲ್ ಪರ್ಕಾರ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಸಂಜಯ್ ದತ್ ಗೆ ಇನ್ನೂ ಕೆಲವು ವೈದ್ಯಕೀಯ ಪರೀಕ್ಷೆಗಳು ಮಾಡಬೇಕಿದೆ. ಅವರ ದೇಹದಲ್ಲಿ ಆಮ್ಲಜನಕ ಪ್ರಮಾಣ ಏಕೆ ಕಡಿಮೆ ಆಯಿತು ಎಂಬುದನ್ನು ಪತ್ತೆ ಮಾಡಬೇಕಿದೆ' ಎಂದಿದ್ದಾರೆ.
ಸಂಜಯ್ ದತ್ ಸಹೋದರಿ ಪ್ರಿಯಾ ದತ್ ನೀಡಿದ ಮಾಹಿತಿ
ಸಂಜಯ್ ದತ್ ಸಹೋದರಿ ಪ್ರಿಯಾ ದತ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, 'ಇನ್ನೂ ಕೆಲವು ದಿನಗಳ ಕಾಲ ಸಂಜಯ್ ದತ್ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಎಲ್ಲಾ ಅವಶ್ಯಕತ ಪರೀಕ್ಷೆಗಳಿಗೂ ಅವರು ಒಳಗಾಗಲಿದ್ದಾರೆ. ಪ್ರಸ್ತುತ ಕೊರೊನಾ ವರದಿ ನೆಗೆಟಿವ್ ಬಂದಿದೆ' ಎಂದು ಹೇಳಿದ್ದಾರೆ.
ಕೋವಿಡ್ ಗೆದ್ದ ಸಂಭ್ರಮದಲ್ಲಿ ನಟ ಅಭಿಷೇಕ್ ಬಚ್ಚನ್
ಆರೋಗ್ಯದ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್
ತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ದತ್, 'ನಾನು ಸುಧಾರಿಸಿಕೊಳ್ಳುತ್ತಿದ್ದೇನೆ. ನನ್ನನ್ನು ವೈದ್ಯಕೀಯ ನಿಗಾದಲ್ಲಿ ಇಡಲಾಗಿದೆ. ನನ್ನ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಲೀಲಾವತಿ ಆಸ್ಪತ್ರೆಯ ವೈದ್ಯರು, ದಾದಿಯರು ಇನ್ನಿತರೆ ಸಿಬ್ಬಂದಿ ನೆರವಿನಿಂದ ಇನ್ನೆರಡು-ಮೂರು ದಿನಗಳಲ್ಲಿ ಗುಣವಾಗಿ ಮನೆಗೆ ಮರಳುತ್ತೇನೆ' ಎಂದಿದ್ದಾರೆ.
ಅಮಿತಾಬ್ ಕುಟುಂಬ ಕೊರೊನಾ ಗೆ ತುತ್ತಾಗಿತ್ತು
ಬಾಲಿವುಡ್ನಲ್ಲಿ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅಮಿತಾಬ್ ಬಚ್ಚನ್ ಕುಟುಂಬ ಕೊರೊನಾ ವೈರಸ್ಗೆ ತುತ್ತಾಗಿತ್ತು. ಐಶ್ವರ್ಯಾ ರೈ, ಆರಾಧ್ಯ, ಅಮಿತಾಬ್ ಬಚ್ಚನ್ , ಅಭಿಷೇಕ್ ಬಚ್ಚನ್ ಕೊರೊನಾ ವೈರಸ್ಗೆ ತುತ್ತಾಗಿ ಈಗ ಎಲ್ಲರೂ ಚೇತರಿಸಿಕೊಂಡಿದ್ದಾರೆ.