Don't Miss!
- News Rain Alert: ಹುಬ್ಬಳ್ಳಿ-ಧಾರವಾಡ ಸೇರಿ ವಿವಿಧೆಡೆ ವ್ಯಾಪಕ ಮಳೆ ಆರ್ಭಟ
- Automobiles ಅತ್ಯಾಧುನಿಕ ಅಡಾಸ್ನೊಂದಿಗೆ ಬರಲಿದೆ ಈ ಕಿಯಾ ಕಾರು: ಟಾಟಾ ಪಂಚ್ಗೆ ಇನ್ನು ದೇವರೇ ಗತಿ!
- Technology ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- Lifestyle ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೆಂಗಳೂರಿಗರೇ ಆತಂಕ ಬೇಡ, ನಿಮಗಾಗಿ ಸೋನು ಸೂದ್ ಇದ್ದೇನೆ'
ಬಾಲಿವುಡ್ ನಟ ಸೋನು ಸೋದ್ ಮಾನವೀಯತೆಯ ಕಾರ್ಯ ಮುಂದುವರಿದಿದೆ. ಸಿನಿಮಾ ನಟನ ಜೊತೆ ಹಲವು ಎನ್ಜಿಓ ಸಂಸ್ಥೆಗಳು ಕೈ ಜೋಡಿಸಿ ಸಾರ್ವಜನಿಕರ ಸಹಾಯಕ್ಕೆ ನಿಂತಿವೆ.
ಕೊರೊನಾ ವೈರಸ್ ಎರಡನೇ ಅಲೆಗೆ ಸಿಲುಕಿರುವ ಬೆಂಗಳೂರಿಗೆ ಸೋನು ಸೂದ್ ಅಭಯಹಸ್ತ ಚಾಚಿದ್ದಾರೆ. ಕೊರೊನಾ ಹಾಟ್ಸ್ಪಾಟ್ ಎನಿಸಿಕೊಂಡಿರುವ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಭಾರಿ ಏರಿಕೆ ಕಂಡಿದೆ.
'ಮುಂದಿನ ಪ್ರಧಾನಿ' ಎಂದವರಿಗೆ ಸೋನು ಸೂದ್ ಕೊಟ್ಟ ಉತ್ತರ ಹೀಗಿದೆ
ಪ್ರಮುಖವಾಗಿ ಆಕ್ಸಿಜನ್ ಕೊರತೆ ಉಂಟಾಗಿ ಬೆಂಗಳೂರಿನಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಸೋನು ಸೂದ್ ಆಕ್ಸಿಜನ್ ನೆರವು ಘೋಷಿಸಿದ್ದಾರೆ. ಅಗತ್ಯವಿರುವವರು ಮಾತ್ರ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್ ''ಬೆಂಗಳೂರಿಗರೇ ನೀವು ಉಸಿರಾಡಲು ನಾನು ಸಹಾಯ ಮಾಡುತ್ತೇನೆ, ತುರ್ತು ಸಮಸ್ಯೆಯಿದ್ದರೆ ಮಾತ್ರ ಸಂಪರ್ಕಿಸಿ'' ಎಂದು ವಾಟ್ಸಾಪ್ ನಂಬರ್ ಹಂಚಿಕೊಂಡಿದ್ದಾರೆ.
ಈಗಾಗಲೇ ಬೆಂಗಳೂರಿನ ಹಲವು ಕಡೆ ಸೋನು ಸೋದ್ ಫೌಂಡೇಶನ್ ಕಡೆಯಿಂದ ಆಕ್ಸಿಜನ್ ವ್ಯವಸ್ಥೆ, ಐಸಿಯು ಬೆಡ್ ವ್ಯವಸ್ಥೆ ಸೇರಿದಂತೆ ಹಲವರು ರೀತಿ ಸಹಾಯ ಮಾಡಲಾಗಿದೆ.