Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೆಂಗಳೂರಿಗರೇ ಆತಂಕ ಬೇಡ, ನಿಮಗಾಗಿ ಸೋನು ಸೂದ್ ಇದ್ದೇನೆ'
ಬಾಲಿವುಡ್ ನಟ ಸೋನು ಸೋದ್ ಮಾನವೀಯತೆಯ ಕಾರ್ಯ ಮುಂದುವರಿದಿದೆ. ಸಿನಿಮಾ ನಟನ ಜೊತೆ ಹಲವು ಎನ್ಜಿಓ ಸಂಸ್ಥೆಗಳು ಕೈ ಜೋಡಿಸಿ ಸಾರ್ವಜನಿಕರ ಸಹಾಯಕ್ಕೆ ನಿಂತಿವೆ.
ಕೊರೊನಾ ವೈರಸ್ ಎರಡನೇ ಅಲೆಗೆ ಸಿಲುಕಿರುವ ಬೆಂಗಳೂರಿಗೆ ಸೋನು ಸೂದ್ ಅಭಯಹಸ್ತ ಚಾಚಿದ್ದಾರೆ. ಕೊರೊನಾ ಹಾಟ್ಸ್ಪಾಟ್ ಎನಿಸಿಕೊಂಡಿರುವ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಭಾರಿ ಏರಿಕೆ ಕಂಡಿದೆ.
'ಮುಂದಿನ ಪ್ರಧಾನಿ' ಎಂದವರಿಗೆ ಸೋನು ಸೂದ್ ಕೊಟ್ಟ ಉತ್ತರ ಹೀಗಿದೆ
ಪ್ರಮುಖವಾಗಿ ಆಕ್ಸಿಜನ್ ಕೊರತೆ ಉಂಟಾಗಿ ಬೆಂಗಳೂರಿನಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಸೋನು ಸೂದ್ ಆಕ್ಸಿಜನ್ ನೆರವು ಘೋಷಿಸಿದ್ದಾರೆ. ಅಗತ್ಯವಿರುವವರು ಮಾತ್ರ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್ ''ಬೆಂಗಳೂರಿಗರೇ ನೀವು ಉಸಿರಾಡಲು ನಾನು ಸಹಾಯ ಮಾಡುತ್ತೇನೆ, ತುರ್ತು ಸಮಸ್ಯೆಯಿದ್ದರೆ ಮಾತ್ರ ಸಂಪರ್ಕಿಸಿ'' ಎಂದು ವಾಟ್ಸಾಪ್ ನಂಬರ್ ಹಂಚಿಕೊಂಡಿದ್ದಾರೆ.
ಈಗಾಗಲೇ ಬೆಂಗಳೂರಿನ ಹಲವು ಕಡೆ ಸೋನು ಸೋದ್ ಫೌಂಡೇಶನ್ ಕಡೆಯಿಂದ ಆಕ್ಸಿಜನ್ ವ್ಯವಸ್ಥೆ, ಐಸಿಯು ಬೆಡ್ ವ್ಯವಸ್ಥೆ ಸೇರಿದಂತೆ ಹಲವರು ರೀತಿ ಸಹಾಯ ಮಾಡಲಾಗಿದೆ.