Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ತಾಯಿ ಇಲ್ಲದೆ ಇದ್ದರೆ ನನ್ನ ಸ್ಥಿತಿ ಏನಾಗುತ್ತಿತ್ತೋ..? ಖಿನ್ನತೆ ಬಗ್ಗೆ ದೀಪಿಕಾ ಪಡುಕೋಣೆ ಮಾತು!
ಬಾಲಿವುಡ್ನ ಬಹುಬೇಡಿಕೆಯ ನಟಿ ದೀಪಿಕಾ ಪಡುಕೋಣೆ ನಟನೆಯ ಜೊತೆಗೆ ಸದ್ಯ ಜನರಿಗೆ ಸಹಾಯವಾಗುವ ಕೆಲಸಗಳನ್ನು ಸಹ ಮಾಡುತ್ತಿದ್ದಾರೆ. ಮಾನಸಿಕ ಖಿನ್ನತೆಯ ನೋವು ಖಂಡಿರುವ ದೀಪಿಕಾ ಪಡುಕೋಣೆ ಸದ್ಯ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಈ ಹಿಂದೆ ಮಾನಸಿಕ ಖಿನ್ನತೆಯ ವಿರುದ್ಧ ಹೋರಾಡಿ ಗೆದ್ದು ಬಂದಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಗ್ರಾಮೀಣ ಸಮುದಾಯದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ಮುಂದುವರಿಸಿದ್ದಾರೆ. ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನದಂದು ತಮ್ಮ ಲಿವ್ ಲವ್ ಲಾಫ್ ಸಂಸ್ಥೆಯ ಮೂಲಕ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ದೀಪಿಕಾ ಪಡುಕೋಣೆ ಮಾನಸಿಕ ಖಿನ್ನತೆಯ ಸಂಧರ್ಭದಲ್ಲಿ ತಮ್ಮನ್ನು ಆರೈಕೆ ಮಾಡುವವರ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಜೊತೆಗೆ ಸ್ವತಃ ತಾವು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಗ ನನ್ನ ತಾಯಿ ಅದನ್ನು ಗುರುತಿಸದೇ ಇದ್ದಿದ್ದರೆ, ತನ್ನ ಸ್ಥಿತಿ ಹೇಗಿರುತ್ತಿತ್ತೋ ಎಂದು ಊಹಿಸಲು ಅಸಾಧ್ಯ ಎಂದಿದ್ದಾರೆ.
"ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಗ ಅವರನ್ನು ಆರೈಕೆ ಮಾಡುವವರ ಪಾತ್ರವು ಅತ್ಯಂತ ಮಹತ್ವದ್ದಾಗಿದೆ. ನನ್ನ ವಿಚಾರದಲ್ಲಿ ನನ್ನ ತಾಯಿ ಹಾಗೂ ಸಹೋದರಿಯ ಪಾತ್ರ ತುಂಬಾ ದೊಡ್ಡದು. ಇಲ್ಲಿ ನಾನು ಕಂಡುಕೊಂಡ ಬಹುಮುಖ್ಯ ಅಂಶವೆಂದರೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಗ ಆರೈಕೆ ಮಾಡುವವರ ಭಾವನಾತ್ಮಕ ಯೋಗಕ್ಷೇಮವು, ಖಿನ್ನತೆಗೊಳಗಾದ ವ್ಯಕ್ತಿಯ ಭಾವನಾತ್ಮಕ ಯೋಗಕ್ಷೇಮದಷ್ಟೇ ಮುಖ್ಯ" ಎಂದಿದ್ದಾರೆ ದೀಪಿಕಾ ಪಡುಕೋಣೆ.
ಉದಾಹರಣೆಗೆ ನಾನು ಮಾನಸಿಕ ಖಿನ್ನತೆಗೊಳಗಾದಾಗ ನನ್ನ ತಾಯಿ ಅದನ್ನು ಗುರುತಿಸದೇ ಇದ್ದಿದ್ದರೆ ಹಾಗೂ ನನ್ನಲ್ಲಿರುವ ದುರ್ಬಲತೆಯನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡದೇ ಇದ್ದಿದ್ದರೆ ಇಂದು ನನ್ನ ಸ್ಥಿತಿ ಯಾವ ಹಂತಕ್ಕೆ ತಲುಪುತ್ತಿತ್ತೋ ಎಂದು ದೀಪಿಕಾ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಸದ್ಯ ನಾನು ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದೇನೆ. ನನ್ನ ಚಿಕಿತ್ಸೆ ಸಂದರ್ಭದಲ್ಲಿ ನನ್ನ ಹಾಗೂ ಡಾಕ್ಟರ್ ನಡುವಿನ ಸಮಾಲೋಚನೆ ಸಹ ಉತ್ತಮವಾಗಿತ್ತು. ಹಾಗಾಗಿ ಬೇಗ ಚೇತರಿಸಿಕೊಂಡೆ. ಯಾವುದೇ ಕಾಯಿಲೆ ಆಗಿರಲಿ ಅದರ ಚೇತರಿಕೆ ಆರೈಕೆದಾರರನ ಮೇಲಿರುತ್ತದೆ ಎಂದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೇಳಿಕೊಂಡಿದ್ದಾರೆ.
ಬಾಲಿವುಡ್ನಲ್ಲಿ ಬ್ಯುಸಿ ನಟಿಯಾಗಿರುವ ದೀಪಿಕಾ ಪಡುಕೋಣೆ ಕಳೆದ ಕೆಲ ವರ್ಷಗಳ ಹಿಂದೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಬಳಿಕ ಸೂಕ್ತ ಚಿಕಿತ್ಸೆಗೊಳಗಾದ ಅವರು 2015 ರಲ್ಲಿ ತಮ್ಮ ಮಾನಸಿಕ ಖಿನ್ನತೆಯಿಂದ ಹೊರಬಂದರು. ಈ ಬಗ್ಗೆ ಸ್ವತಃ ನಟಿ ಹೇಳಿಕೊಂಡಿದ್ದರು.
ಮಾನಸಿಕ ಖಿನ್ನತೆಯ ನೋವು ಕಂಡಿದ್ದ ದೀಪಿಕಾ ಪಡುಕೋಣೆ ಬಳಿಕ ಲಿವ್ ಲವ್ ಲಾಫ್ ಸಂಸ್ಥೆಯನ್ನು ಸ್ಥಾಪಿಸಿದರು. ಈ ಮೂಲಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರ ನೆರವಿಗೆ ನಿಂತರು. ಮಾನಸಿಕ ಖಿನ್ನತೆಯಿಂದ ಹೊರಬರಲು ಲಿವ್ ಲವ್ ಲಾಫ್ ನೆರವಾಗುತ್ತಿದ್ದು, ಎಷ್ಟೋ ಜನರಿಗೆ ಹೊಸ ಬದುಕು ಜೀವನ ಆರಂಭಿಸಲು ನೆರವಾಗುತ್ತಿದ್ದಾರೆ.
ಸದ್ಯ ದೀಪಿಕಾ ಪಡುಕೋಣೆ ಜನವರಿ 25 ರಂದು ಬಿಡುಗಡೆಯಾಗಲಿರುವ ಶಾರುಖ್ ಖಾನ್ ನಟನೆಯ 'ಪಠಾನ್' ಚಿತ್ರದಲ್ಲಿ ನಟಿಸುತ್ತಿದ್ದು ,ಹೃತಿಕ್ ರೋಷನ್ ಅವರ 'ಫೈಟರ್' ಚಿತ್ರದಲ್ಲಿ ಸಹ ಕಾಣಿಸಿಕೊಳ್ಳಲಿದ್ದಾರೆ.