Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೆಗೆಲಸದವರಿಗೆ ಕೊರೊನಾ ಸೋಂಕು: ಕ್ವಾರಂಟೈನ್ ನಲ್ಲಿ ನಟಿ ಜಾಹ್ನವಿ ಕಪೂರ್ ಕುಟುಂಬ
ಮನಗೆಲಸದವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನಲೆ, ಬಾಲಿವುಡ್ ನಟಿ ಶ್ರೀದೇವಿ ಕುಟುಂಬ ಈಗ ಕ್ವಾರಂಟೈನ್ ಗೆ ಒಳಗಾಗಿದೆ. ಶ್ರೀದೇವಿ ಪುತ್ರಿಯರಾದ ಜಾಹ್ನವಿ, ಖುಷಿ ಹಾಗೂ ಪತಿ ಬೋನಿ ಕಪೂರ್ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಈ ಬಗ್ಗೆ ನಟಿ ಬೋನಿ ಕಪೂರ್ ಬಹಿರಂಗ ಪಡಿಸಿದ್ದು, ಜಾಹ್ನವಿ ಮತ್ತು ಖುಷಿ ಸೇರಿದಂತೆ ಮನೆಯವರೆಲ್ಲರು ಸುರಕ್ಷಿತರಾಗಿರುವುದಾಗಿ ಹೇಳಿದ್ದಾರೆ. ಮನೆಯವರ್ಯಾರಿಗೂ ಕೊರೊನಾ ಸೋಂಕಿನ ಯಾವುದೆ ಲಕ್ಷಣ ಕಂಡುಬಂದಿಲ್ಲ ಎಂದಿದ್ದಾರೆ. ಮುಂದೆ ಓದಿ...
ನಾಯಕಿಯರಿಗೆ ಹೆಚ್ಚು ಪ್ರಾಮುಖ್ಯತೆ ಇರಲ್ಲ ಎಂದು ತೆಲುಗು ಸಿನಿಮಾ ತಿರಸ್ಕರಿಸಿದ ನಟಿ ಜಾಹ್ನವಿ
ಆತಂಕದಲ್ಲಿ ಬೋನಿ ಕಪೂರ್ ಕುಟುಂಬ
ಮನೆಗೆಲಸದವರಿಗೆ ಸೋಂಕು ಕಾಣಿಸಿಕೊಂಡ ಕಾರಣ ಬೋನಿ ಕಪೂರ್ ಕುಟುಂಬ ಆತಂಕಕ್ಕೆ ಒಳಗಾಗಿತ್ತು. ಕುಟುಂಬದವರೆಲ್ಲರು ಮನೆಲ್ಲಿರುವ ಕಾರಣ ಕೆಲಸಗಾರನ ಸಂಪರ್ಕ ಮಾಡಿರುವ ಸಾಧ್ಯತೆ ಹೆಚ್ಚಾಗಿರುತ್ತೆ. ಎಲ್ಲರೂ ಸೇಫ್ ಆಗಿದ್ದೀವಿ ಎಂದು ಬೋನಿ ಕಪೂರ್ ತಿಳಿಸಿದ್ದಾರೆ.
ಶ್ರೀದೇವಿ ಪುತ್ರಿಯ ಹಾಟ್ ಲುಕ್ಗೆ ಪಡ್ಡೆ ಹುಡುಗರು ಫಿದಾ
ಬೋನಿ ಕಪೂರ್ ಬರೆದ ಪತ್ರದಲ್ಲೇನಿದೆ
ಈ ಬಗ್ಗೆ ಬೋನಿ ಕಪೂರ್ ಬರೆದ ಪತ್ರವನ್ನು ಮಗಳು ಜಾಹ್ನವಿ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. "ಮನೆಯಲ್ಲಿ 23 ವರ್ಷದ ಕೆಲಸದವರೊಬ್ಬರಿಗೆ ಕೊರೊನಾ ಸೋಂಕು ಕಂಡುಬಂದಿದೆ. ಶನಿವಾರ ಅವರಿಗೆ ಹುಷಾರಿರಲಿಲ್ಲ. ಪರೀಕ್ಷೆಗೆ ಒಳಪಡಿಸಿ, ಪ್ರತ್ಯೇಕವಾಗಿ ಇರಿಸಲಾಗಿತ್ತು, ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನಂತರ ಪಾಲಿಗೆ ಸಿಬ್ಬಂದಿ ಬಂದು ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ" ಎಂದಿದ್ದಾರೆ.
ಬರಿಗಾಲಿನಲ್ಲಿ ತಿರುಪತಿ ಬೆಟ್ಟ ಹತ್ತಿ ತಿಮ್ಮಪ್ಪನ ದರ್ಶನ ಪಡೆದ ಶ್ರೀದೇವಿ ಪುತ್ರಿ.!
ಕ್ವಾರಂಟೈನ್ ನಲ್ಲಿ ಶ್ರೀದೇವಿ ಕುಟುಂಬ
"ನಮ್ಮ ಮನೆಯಲ್ಲಿ ಯಾರಿಗೂ ರೋಗ ಲಕ್ಷಣ ಕಂಡುಬಂದಿಲ್ಲ. ಲಾಕ್ ಡೌನ್ ಶುರುವಾದಾಗಿನಿಂದ ನಾವ್ಯಾರು ಮನೆಬಿಟ್ಟು ಹೊರಗೆ ಹೋಗಿಲ್ಲ. ಆದ್ರೂ ಮುಂದಿನ 14 ದಿನಗಳು ಕ್ವಾರಂಟೈನ್ ಗೆ ಒಳಗಾಗುತ್ತೇವೆ. ವೈದ್ಯರು ನೀಡಿರುವ ಸೂಚನೆಯನ್ನು ಪಾಲಿಸುತ್ತೇವೆ. ತಕ್ಷಣ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದಗಳು" ಎಂದು ಬರೆದುಕೊಂಡಿದ್ದಾರೆ.
ಯಾವುದೇ ರೀತಿಯ ವದಂತಿ ಹರಡಿಸಬೇಡಿ
"ಯಾವುದೆ ರೀತಿಯ ವದಂತಿ ಹರಡಬಾರದೆಂದು ಮಾಹಿತಿ ತಿಳಿಸುತ್ತಿದ್ದೇವೆ. ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ. ಕೊರೊನಾ ಒಳಗಾಗಿರೋ ಕೆಲಸಗಾರ ಬೇಗ ಗುಣಮುಖರಾಗಿ ವಾಪಸ್ ಬರುತ್ತಾನೆ." ಎಂದು ದೀರ್ಘವಾಗಿ ಬರೆದುಕೊಂಡಿದ್ದಾರೆ.