Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಶ್ರೀದೇವಿ ಪುಣ್ಯತಿಥಿ: ಅಮ್ಮನ ನೆನೆದು ಭಾವುಕರಾದ ಮಗಳು ಜಾಹ್ನವಿ
ಬಾಲಿವುಡ್ ನ ಎವರ್ ಗ್ರೀನ್ ನಟಿ ಶ್ರೀದೇವಿ ನಿಧನ ಹೊಂದಿ ಇಂದಿಗೆ ಎರಡು ವರ್ಷಗಳು ಕಳೆದಿದೆ. ಪತಿ ಬೋನಿ ಕಪೂರ್ ಮತ್ತು ಮುದ್ದಾದ ಮಕ್ಕಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿದ ಶ್ರೀದೇವಿ ನೆನೆಪು ಇಂದಿಗೂ ಹಸಿರಾಗೆ ಇದೆ.
ಎರಡನೆ ವರ್ಷದ ಪುಣ್ಯ ತಿಥಿಯ ದಿನ ಮಗಳು ಜಾಹ್ನವಿ ಕಪೂರ್ ಅಮ್ಮನ ಬಗ್ಗೆ ಭಾವುಕ ಟ್ವೀಟ್ ಮಾಡಿದ್ದಾರೆ. ಅಮ್ಮನನ್ನು ಅಪ್ಪಿಕೊಂಡಿರುವ ಪುಟ್ಟ ಜಾಹ್ನವಿ ಫೋಟೋ ಶೇರ್ ಮಾಡಿದ್ದು, ಈ ಪೋಟೋ ಈಗ ವೈರಲ್ ಆಗಿದೆ. ಫೋಟೋ ಜೊತೆಗೆ "ಪ್ರತಿದಿನ ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೀನಿ" ಎಂದು ಬರೆದುಕೊಂಡಿದ್ದಾರೆ.
ಬರಿಗಾಲಿನಲ್ಲಿ ತಿರುಪತಿ ಬೆಟ್ಟ ಹತ್ತಿ ತಿಮ್ಮಪ್ಪನ ದರ್ಶನ ಪಡೆದ ಶ್ರೀದೇವಿ ಪುತ್ರಿ.!
2018 ಫೆಬ್ರವರಿ 24ರಂದು ಅತಿಲೋಕ ಸುಂದರಿ ಶ್ರೀದೇವಿ ದುಬೈನಲ್ಲಿ ಬಾತ್ ಟಬ್ ಗೆ ನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಎವರ್ ಗ್ರೀನ್ ನಟಿಯ ಸಾವು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇಂದಿಗೂ ಶ್ರೀದೇವಿ ಸಾವು ಅನೇಕರಿಗೆ ನುಂಗಲಾರದ ಕಹಿ ಸತ್ಯವಾಗಿದೆ.
ಜಾಹ್ನವಿ ಆಗಾಗ ಅಮ್ಮನ ನೆನಪುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಮ್ಮನ ಬಗ್ಗೆ ಮಾತನಾಡುವಾಗಲೆಲ್ಲ ಜಾಹ್ನವಿ ಭಾವುಕರಾಗುತ್ತಾರೆ. ಮಗಳ ಮೊದಲ ಸಿನಿಮಾ ನೋಡಬೇಕೆನ್ನುವ ದೊಡ್ಡ ಆಸೆಯಿಟ್ಟುಕೊಂಡಿದ್ದ ಶ್ರೀದೇವಿ ಕನಸು ಅವರ ಜೊತೆಯೆ ಮಣ್ಣಾಗಿದೆ. ಆದರೆ ಅಮ್ಮನ ಆಸೆಯಂತೆ ಮಗಳು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.
ಜಾಹ್ನವಿ ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಧಡಕ್ ಸಿನಿಮಾದ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸಿರುವ ಜಾಹ್ನವಿ ಬಳಿ ಸದ್ಯ ಗುಂಜನ್ ಸಕ್ಸೇನಾ, ಥಕ್ತ್ ಸೇರಿದಂತೆ ಸಾಕಷ್ಟು ಸಿನಿಮಾಗಳಿವೆ.