Don't Miss!
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- News ವಾಕಿಂಗ್, ಜಾಗಿಂಗ್ ಮಾಡಲು ಎಂತಹ ಶೂಗಳು ಬೆಸ್ಟ್: ಈ ಅಂಶಗಳ ಬಗ್ಗೆ ಗಮನವಿರಲಿ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯಪಾಲರು ನನ್ನನ್ನು ಮಗಳಂತೆ ಕಂಡರು: ನಟಿ ಕಂಗನಾ ರಣಾವತ್
ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶಿವಸೇನೆ ಜೊತೆಗಿನ ವಾಕ್ಸಮರ ಮತ್ತು ಮುಂಬೈ ಮಹಾನಗರ ಪಾಲಿಕೆ, ಬಾಂದ್ರಾದಲ್ಲಿರುವ ಕಂಗನಾ ಕಚೇರಿಯನ್ನು ಒಡೆದು ಹಾಕಿದ ನಂತರ ಕಂಗನಾ, ರಾಜ್ಯಪಾಲರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ಸರ್ಕಾರದ ಕ್ರಮ ಮತ್ತು ಶಿವಸೇನೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಂಗನಾ ರಾಜ್ಯಪಾಲರಿಗೆ ವಿವರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ನಟಿ ಕಂಗನಾ ರಣಾವತ್ ಗೆ ಸಹೋದರಿ ರಂಗೋಲಿ ಸಾಥ್ ನೀಡಿದ್ದಾರೆ. ನನಗಾದ ಅನ್ಯಾಯದ ಬಗ್ಗೆ ವಿವರಿಸಿದೆ, ರಾಜ್ಯಪಾಲರು ಮಗಳಂತೆ ನನ್ನ ಎಲ್ಲಾ ಮಾತುಗಳನ್ನು ಆಲಿಸಿದರು ಎಂದು ಹೇಳಿದ್ದಾರೆ.
ಡ್ರಗ್ಸ್ ವಿರುದ್ಧ ಸಮರ ಸಾರಿದ್ದ ಕಂಗನಾ ರಣಾವತ್ಗೆ ಸುತ್ತಿಕೊಳ್ತು ಉರುಳು!
ರಾಜ್ಯಪಾಲರನ್ನು ಭೇಟಿಯಾಗಿ ಬಂದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕಂಗನಾ, "ರಾಜ್ಯಪಾಲರನ್ನು ಭೇಟಿಯಾಗಿರುವುದು ನನ್ನ ಸೌಬಾಗ್ಯ. ನನಗಾದ ಅನ್ಯಾಯದ ಬಗ್ಗೆ ವಿವರಿಸಿದೆ. ನ್ಯಾಯ ದೊರಕುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ನನ್ನನ್ನು ಮಗಳಂತೆ ಕಂಡರು. ನನ್ನ ಮಾತುಗಳನ್ನು ಸಮಾಧಾನದಿಂದ ಆಲಿಸಿದರು" ಎಂದು ಹೇಳಿದ್ದಾರೆ.
ಇತ್ತೀಚಿಗೆ ಮುಂಬೈ ಮಹಾನಗರ ಪಾಲಿಕೆ ಕಂಗನಾ ಬಂಗಲೆಯನ್ನು ಒಡೆದು ಹಾಕಿತ್ತು. ಬಳಿಕ ಈ ಪ್ರಕರಣದ ವಿಚಾರಣೆ ನಡೆಸಿದ ಹೈ ಕೋರ್ಟ್ ಒಡೆಯುವ ಪ್ರತಿಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಒಡೆದ ಕಚೇರಿಯಲ್ಲಿಯೇ ಕೆಲಸ ಮಾಡುವುದಾಗಿ ಕಂಗನಾ ಸವಾಲು ಹಾಕಿದ್ದಾರೆ.
Recommended Video
ಸೆಪ್ಟಂಬರ್ 9ರಂದು ಭಾರಿ ಭದ್ರೆತೆಯೊಂದಿಗೆ ಮುಂಬೈಗೆ ಆಗಮಿಸಿರುವ ಕಂಗನಾ ಸೆಪ್ಟಂಬರ್ 14ರಂದು ಹಿಮಾಚಲ ಪ್ರದೇಶಕ್ಕೆ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.