Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಧಾಕಡ್' ರಿಲೀಸ್ಗೂ ಮುನ್ನವೇ ತಿಮ್ಮಪ್ಪನ ದರ್ಶನ ಪಡೆದ ಕಂಗನಾ ರನೌತ್
ಬಾಲಿವುಡ್ ಕ್ಷೀನ್ ಕಂಗನಾ ರನೌತ್ ನಟಿಸಿರುವ ಬಹುನೀರಿಕ್ಷಿತ ಸಿನಿಮಾ 'ಧಾಕಡ್' ಮೇ 20 ರಂದು ವಿಶ್ವದಾದ್ಯಂತ ರಿಲೀಸ್ ಆಗಲಿದೆ. ಈ ಹಿನ್ನಲೆ ಕಂಗನಾ ರನೌತ್ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಸಿನಿಮಾದ ಹಾಡು, ಟ್ರೈಲರ್ಗಳು ಪ್ರೇಕ್ಷಕರ ಗಮನ ಸೆಳೆದಿದ್ದು, ಸಿನಿಮಾ ಬಿಡುಗಡೆಯಾಗಬೇಕಿದೆ.
ಇಂದು (ಮೇ 16 ) ಬುದ್ದ ಪೂರ್ಣಿಮೆ ಇರುವ ಹಿನ್ನಲೆ ನಟಿ ಕಂಗನಾ ರನೌತ್ ಆಂಧ್ರಪ್ರದೇಶದ ಪ್ರತಿಷ್ಟಿತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬಸ್ಥರು ಹಾಗೂ 'ಧಾಕಡ್' ಸಿನಿಮಾದ ನಿರ್ಮಾಪಕರಾದ ದೀಪಕ್ ಮುಕುಟ್, ಪತ್ನಿ ಕೃಷ್ಣ ಮುಕಟ್ ಕೂಡ ದೇಗುಲಕ್ಕೆ ಆಗಮಿಸಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.
'ಧಾಕಡ್' ಸಿನಿಮಾದ ಮೇಲೆ ಕಂಗನಾ ಹೆಚ್ಚಿನ ನೀರಿಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಹೀಗಾಗಿ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಿನಿಮಾದಲ್ಲಿ ಆಕ್ಷನ್ ದೃಶ್ಯಗಳಲ್ಲಿ ಮಿಂಚಿರುವ ನಟಿ ಕಂಗನಾ ಈಗಾಗಲೇ ಟ್ರೈಲರ್ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.
'ಧಾಕಡ್' ಸಿನಿಮಾ ಇನ್ನು ಎರಡೂ ಮೂರು ದಿನಗಳಲ್ಲಿ ಥಿಯೇಟರ್ನಲ್ಲಿ ಅಬ್ಬರಿಸಲಿದೆ. ಈ ಹಿನ್ನಲೆ ಕಂಗನಾ ಪ್ರಚಾರದ ನಡವೆಯೂ ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದಾರೆ. ನಟಿ ಕಂಗನಾ ದೇಗುಲಕ್ಕೆ ಆಗಮಿಸುವ ಹಿನ್ನಲೆ ದೇಗುಲದ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿತ್ತು. ಕುಟುಂಬ ಸಮೇತರಾಗಿ ಬಂದು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಸದ್ಯ ಬಾಲಿವುಡ್ ನಟಿ ಕಂಗನಾ ತಿಮ್ಮಪ್ಪನ ಸನ್ನಿಧಾನಕ್ಕೆ ಅಗಮಿಸಿರುವ ಪೋಟೊಗಳು ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಇತ್ತೀಚಿಗಷ್ಟೇ 'ಧಾಕಡ್' ಸಿನಿಮಾದ ಟ್ರೈಲರ್ ರಿಲೀಸ್ ಆಗಿತ್ತು. ಈ ಟ್ರೈಲರ್ ನೋಡಿದ ಸಲ್ಮಾನ್ ಖಾನ್ ಚಿತ್ರತಂಡಕ್ಕೆ ಶುಭಕೋರಿದ್ದರು. ಅಲ್ಲದೆ ಟ್ರೈಲರ್ನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇನ್ನು ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡ 'ಧಾಕಡ್' ಚಿತ್ರದ ಹಾಡು ನೋಡಿ ಟ್ವೀಟರ್ನಲ್ಲಿ ಚಿತ್ರತಂಡಕ್ಕೆ ವಿಶ್ ಮಾಡಿದ್ದರೂ ತದ ನಂತರ ಆ ಟ್ವೀಟ್ನ್ನು ಡಿಲೀಟ್ ಮಾಡಿದ್ದರು. ಈ ಬಗ್ಗೆ ಕಂಗನಾ ಕೂಡ ಬೇಸರ ವ್ಯಕ್ತಪಡಿಸಿದ್ದರು. ಒಟ್ಟಿನಲ್ಲಿ ಇತ್ತೀಚಿಗೆ ದಕ್ಷಿಣ ಭಾರತದ ಸಿನಿಮಾಗಳ ಆರ್ಭಟದಿಂದ ಬಾಲಿವುಡ್ ಕಂಗಲಾಗಿದೆ. ಬಾಲಿವುಡ್ನ ಯಾವುದೇ ಸಿನಿಮಾಗಳು ಕಲೆಕ್ಷನ್ ಮಾಡುತ್ತಿಲ್ಲ. ಹೀಗಾಗಿ ನಟಿ ಕಂಗನಾ ಅಭಿನಯಿಸಿರುವ 'ಧಾಕಡ್' ಸಿನಿಮಾವಾದರೂ ಹೆಚ್ಚಿನ ಕಲೆಕ್ಷನ್ ಮಾಡುತ್ತಾ ಅಂತ ಕಾದು ನೋಡಬೇಕಿದೆ.