Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ರಾಜಕಾರಣಿ ವಿರುದ್ಧ ಪೋಸ್ಟ್: ನಟಿ ಬಂಧನ
ಹಿರಿಯ ರಾಜಕಾರಣಿಯೊಬ್ಬರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಮರಾಠಿ ನಟಿಯೊಬ್ಬರನ್ನು ಬಂಧಿಸಿ ಜೈಲಿಗೆ ಕಳಿಸಲಾಗಿದೆ.
ಮರಾಠಿ ನಟಿ ಕೇತಕಿ ಚಿತಾಲೆ, ಮಹರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಹಾಗಾಗಿ ನಟಿಯ ವಿರುದ್ಧ ದೂರು ದಾಖಲಾಗಿತ್ತು, ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ನಟಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನಟಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನಟಿ ಕೇತಕಿ ಚಿತಾಲೆ, ಕೆಲವು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಎನ್ಸಿಪಿ ಪಕ್ಷದ ಹಿರಿಯ ಮುಖಂಡ ಶರದ್ ಪವಾರ್ ಬಗ್ಗೆ ಅವಹೇಳನಕಾರಿ ಕವಿತೆಯೊಂದನ್ನು ಪ್ರಕಟಿಸಿದ್ದರು. ನಟಿಯ ವಿರುದ್ಧ ರಾಜ್ಯದ ಹಲವೆಡೆ ಎನ್ಸಿಪಿ ಕಾರ್ಯಕರ್ತರು ದೂರು ನೀಡಿದ್ದರು. ಹಾಗಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದ ಥಾಣೆ ಪೊಲೀಸರು ಮೇ 15 ರಂದು ನಟಿಯನ್ನು ಬಂಧಿಸಿದ್ದರು.
ನಟಿಯ ವಿರುದ್ಧ ಐಪಿಸಿ ಸೆಕ್ಷನ್ 500, 501 ಹಾಗೂ 153 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಟಿಗೆ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಗೊರೆಗಾಂವ್ ಪೊಲಿಸ್ ಅಧಿಕಾರಿಗಳು, ನಟಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ. ಹಾಗಾಗಿ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಇನ್ನಷ್ಟು ವಿಸ್ತಾರವಾಗುವ ಸಾಧ್ಯತೆ ಇದೆ.
ನಟಿ ಕೇತಕಿ, ಎನ್ಸಿಪಿ ಮುಖಂಡ ಶರದ್ ಪವಾರ್ ವಿರುದ್ಧ ಮಾಡಿರುವ ಪೋಸ್ಟ್ನಲ್ಲಿ ಸಂತ ತುಕಾರಾಮ್ ಹೆಸರನ್ನು ಅವಹೇಳನಕಾರಿಯಾಗಿ ಬಳಸಿದ ಬಗ್ಗೆಯೂ ಪ್ರತ್ಯೇಕ ದೂರುಗಳು ದಾಖಲಾಗಿವೆ. ವರ್ಕರಿ ಸಮುದಾಯದ ನಿತಿನ್ ಮೋರೆ ಎಂಬುವರು ನಟಿ ಕೇತಕಿ ವಿರುದ್ಧ ದೂರು ನೀಡಿದ್ದಾರೆ. ಸಂತ ತುಕಾರಾಂ ದೇಹು ಸಂತಾನಂನ ಮುಖ್ಯಸ್ಥರೊಬ್ಬರು ಸಹ ನಟಿಯ ವಿರುದ್ಧ ದೂರು ಸಲ್ಲಿಸಿದ್ದಾರೆ.
ಶರದ್ ಪವಾರ್ ಬಗ್ಗೆ ಬರೆದಿರುವ ಅವಹೇಳನಕಾರಿ ಕವಿತೆಯ ಕೊನೆಯಲ್ಲಿ 'ತುಕಾ ಮಹಾನೆ' ಎಂದು ಕೇತಕಿ ಬಳಸಿದ್ದಾರಂತೆ. ಸಂತ ತುಕಾರಾಮರು ತಮ್ಮ ದೋಹೆಗಳ ಕೊನೆಯಲ್ಲಿ ಹೀಗೆ ತುಕಾ ಮಹಾನೆ ಎಂದು ಬರೆದಿದ್ದಾರೆ. ಅವಹೇಳನಕಾರಿ ಕವಿತೆಗೆ ತುಕಾರಾಮರ ಸಾಲನ್ನು ಬಳಸಿದ್ದರ ಬಗ್ಗೆ ದೂರು ನೀಡಲಾಗಿದೆ.
ಶರದ್ ಪವಾರ್, ಮಹರಾಷ್ಟ್ರದ ಹಿರಿಯ ರಾಜಕಾರಣಿ ಆಗಿದ್ದು ಮಹರಾಷ್ಟ್ರದ ಮಾಜಿ ಸಿಎಂ ಸಹ ಆಗಿದ್ದರು. ಜೊತೆಗೆ ಕೇಂದ್ರದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಮಹರಾಷ್ಟ್ರ ರಾಜ್ಯ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.