Don't Miss!
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- News ‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀವಕ್ಕೆ ಬೆದರಿಕೆ ಇದೆ, ಭದ್ರತೆ ಕೊಡಿ ಎಂದ ನಟಿ ಪಾಯಲ್ ಘೋಷ್
ನನ್ನ ಜೀವಕ್ಕೆ ಬೆದರಿಕೆ ಇದೆ, ನನಗೆ Y+ ಭದ್ರತೆ ಕೊಡಿ ಎಂದು ನಟಿ ಪಾಯಲ್ ಘೋಷ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟಿ ಪಾಯಲ್ ಘೋಷ್ ಇತ್ತೀಚೆಗಷ್ಟೆ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಯತ್ನ ದೂರು ದಾಖಲಿಸಿದ್ದಾರೆ. ಅನುರಾಗ್ ಕಶ್ಯಪ್ ಅನ್ನು ಬಂಧಿಸುವಂತೆ ಒತ್ತಾಯ ಹೇರಿದ್ದಾರೆ.
ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಿಸಿರುವ ಕಾರಣ ಕೆಲವರು ತಮಗೆ ಬೆದರಿಕೆ ಹಾಕಿದ್ದು, ಆ ಕಾರಣ ಕಂಗನಾ ರಣೌತ್ ಗೆ ನೀಡಿದಂತೆ ತಮಗೂ ವೈ + ಭದ್ರತೆ ನೀಡಬೇಕು ಎಂದು ಪಾಯಲ್ ಘೋಷ್ ಒತ್ತಾಯಿಸಿದ್ದಾರೆ.
ಇಂದು ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿದ ಪಾಯಲ್ ಘೋಷ್, ರಾಜ್ಯಪಾಲರ ಬಳಿಯೇ ಭದ್ರತೆಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಮೀಟೂ ಆರೋಪವ್ನು ಪಾಯಲ್ ಘೋಷ್ ಮಾಡಿದ್ದಾರೆ. ಅನುರಾಗ್ ಕಶ್ಯಪ್ ತಮ್ಮನ್ನು ಅತ್ಯಾಚಾರ ಮಾಡಲು ಯತ್ನಿಸಿದ್ದರು ಎಂದು ಪಾಯಲ್ ಘೋಷ್ ಆರೋಪಿಸಿದ್ದಾರೆ. ಅನುರಾಗ್ ಕಶ್ಯಪ್ ಅವರನ್ನು ಬಂಧಿಸದಿದ್ದರೆ ತಾವು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಹ ಪಾಯಲ್ ಘೋಷ್ ಹೇಳಿದ್ದರು.
Recommended Video
ನಟಿ ಕಂಗನಾ ರಣೌತ್ ಗೆ ಕೇಂದ್ರ ಸರ್ಕಾರವು Y+ ಭದ್ರತೆ ನೀಡಿತ್ತು. ಕಂಗನಾ ರಣೌತ್, ಶಿವಸೇನಾ ಮುಖಂಡರಿಗೆ, ತಾವು ಮುಂಬೈ ಗೆ ಬರುವುದಾಗಿ ಸವಾಲು ಎಸೆದು ಮುಂಬೈಗೆ ಬಂದಾಗಿ ಅವರ ಭದ್ರತೆಗಾಗಿ Y+ ಸೆಕ್ಯೂರಿಟಿ ಒದಗಿಸಲಾಗಿತ್ತು. ಇದೇ ಮಾದರಿಯ ಭದ್ರತೆ ತಮಗೆ ಬೇಕೆಂದು ಪಾಯಲ್ ಘೋಷ್ ಮನವಿ ಮಾಡಿದ್ದಾರೆ.
-
ರೈಲಿನಲ್ಲಿ.. ವಿದೇಶದಲ್ಲಿ.. ಆಫ್ರಿಕಾದ ಕಾಡಿನಲ್ಲಿ ಮೊದಲು ಚಿತ್ರೀಕರಣ ಮಾಡಿದ್ದೇ ದ್ವಾರಕೀಶ್; ಕುಳ್ಳನ ಪ್ರಯೋಗಗಳೇನು?
-
6 ತಿಂಗಳು ಕಾಲ್ಶೀಟ್ ಸಿಗದ ಕಿಶೋರ್ ಕುಮಾರ್ ಬಳಿ ದ್ವಾರಕೀಶ್ ಕನ್ನಡ ಹಾಡು ಹಾಡಿಸಿದ್ದೇಗೆ? ಈ ಕಥೆಯೇ ರೋಚಕ
-
ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್