Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗು ಜನರ ಜೊತೆ ನಿಂತ ಪ್ರಿಯಾಂಕಾ ಉಪೇಂದ್ರ
Recommended Video
ಪ್ರವಾಹದಿಂದ ಕಷ್ಟದ ದಿನಗಳನ್ನು ಎದುರಿಸುತ್ತಿರುವ ಕೊಡಗು ಜನತೆಯನ್ನು ಇಡೀ ಕರುನಾಡು ಕಾಪಾಡುತ್ತಿದೆ. ಸಿನಿಮಾ ನಟ, ನಟಿಯರು ಸಹ ತಾವೇ ಕೊಡಗುಗೆ ಭೇಟಿ ನೀಡಿ ಅಲ್ಲಿನ ಕಷ್ಟಗಳನ್ನು ಆಲಿಸುತ್ತಿದ್ದಾರೆ.
ಸದ್ಯ ಪ್ರಿಯಾಂಕಾ ಉಪೇಂದ್ರ ಕೂಡ ಕೊಡಗುಗೆ ಹೋಗಿದ್ದಾರೆ. ಕೊಡಗಿನ ಅನೇಕ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಉಪ್ಪಿ ಫೊಂಡೆಷನ್ ಅಡಿಯಲ್ಲಿ ಆ ಜನರಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿದ್ದಾರೆ.
ಕೊಡಗಿನ ಸದ್ಯದ ಪರಿಸ್ಥಿತಿಯ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರಿಯಾಂಕಾ ವಿವರ ನೀಡಿದ್ದಾರೆ. "ಇಲ್ಲಿನ ಜನರು ಮನೆ, ಆಸ್ತಿ, ಕೆಲಸ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ನಿಮ್ಮ ಸಹಾಯ ಬೇಕಿದೆ. ಮತ್ತೆ ಅವರ ಹೊಸ ಜೀವನ ಶುರು ಆಗಲು ಎಲ್ಲರೂ ಸಹಾಯ ಮಾಡಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಹಿಂದೆ ಕೊಡಗಿನ ಸ್ಥಿತಿಯ ಬಗ್ಗೆ ಮಾತಾನಾಡಿದ್ದ ಉಪೇಂದ್ರ "ಈ ರೀತಿಯ ಪರಿಸ್ಥಿತಿ ಬಂದಾಗ ಸರ್ಕಾರ ಎಲ್ಲ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಅವರಿಗೆ ಮನೆ ಮಾಡಿ ಅವರ ಜೀವನ ಮತ್ತೆ ಸರಿಯಾಗುವ ತನಕ ಸರ್ಕಾರ ಅವರ ಜೊತೆಗೆ ಇರಬೇಕು. ನನ್ನ ಪ್ರಕಾರ ಪ್ರಕೃತಿ ವಿಕೋಪದ ಬಗ್ಗೆಯೇ ಒಬ್ಬ ಸಚಿವ ಇರಬೇಕು. ಅವರು ಯಾವಾಗಲೂ ಸರ್ವ ಸಿದ್ಧರಾಗಿರಬೇಕು." ಎಂಬ ಸಲಹೆ ನೀಡಿದ್ದರು.