Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗು ಜನರ ಜೊತೆ ನಿಂತ ಪ್ರಿಯಾಂಕಾ ಉಪೇಂದ್ರ
Recommended Video
ಪ್ರವಾಹದಿಂದ ಕಷ್ಟದ ದಿನಗಳನ್ನು ಎದುರಿಸುತ್ತಿರುವ ಕೊಡಗು ಜನತೆಯನ್ನು ಇಡೀ ಕರುನಾಡು ಕಾಪಾಡುತ್ತಿದೆ. ಸಿನಿಮಾ ನಟ, ನಟಿಯರು ಸಹ ತಾವೇ ಕೊಡಗುಗೆ ಭೇಟಿ ನೀಡಿ ಅಲ್ಲಿನ ಕಷ್ಟಗಳನ್ನು ಆಲಿಸುತ್ತಿದ್ದಾರೆ.
ಸದ್ಯ ಪ್ರಿಯಾಂಕಾ ಉಪೇಂದ್ರ ಕೂಡ ಕೊಡಗುಗೆ ಹೋಗಿದ್ದಾರೆ. ಕೊಡಗಿನ ಅನೇಕ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಉಪ್ಪಿ ಫೊಂಡೆಷನ್ ಅಡಿಯಲ್ಲಿ ಆ ಜನರಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿದ್ದಾರೆ.
ಕೊಡಗಿನ ಸದ್ಯದ ಪರಿಸ್ಥಿತಿಯ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರಿಯಾಂಕಾ ವಿವರ ನೀಡಿದ್ದಾರೆ. "ಇಲ್ಲಿನ ಜನರು ಮನೆ, ಆಸ್ತಿ, ಕೆಲಸ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ನಿಮ್ಮ ಸಹಾಯ ಬೇಕಿದೆ. ಮತ್ತೆ ಅವರ ಹೊಸ ಜೀವನ ಶುರು ಆಗಲು ಎಲ್ಲರೂ ಸಹಾಯ ಮಾಡಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಹಿಂದೆ ಕೊಡಗಿನ ಸ್ಥಿತಿಯ ಬಗ್ಗೆ ಮಾತಾನಾಡಿದ್ದ ಉಪೇಂದ್ರ "ಈ ರೀತಿಯ ಪರಿಸ್ಥಿತಿ ಬಂದಾಗ ಸರ್ಕಾರ ಎಲ್ಲ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಅವರಿಗೆ ಮನೆ ಮಾಡಿ ಅವರ ಜೀವನ ಮತ್ತೆ ಸರಿಯಾಗುವ ತನಕ ಸರ್ಕಾರ ಅವರ ಜೊತೆಗೆ ಇರಬೇಕು. ನನ್ನ ಪ್ರಕಾರ ಪ್ರಕೃತಿ ವಿಕೋಪದ ಬಗ್ಗೆಯೇ ಒಬ್ಬ ಸಚಿವ ಇರಬೇಕು. ಅವರು ಯಾವಾಗಲೂ ಸರ್ವ ಸಿದ್ಧರಾಗಿರಬೇಕು." ಎಂಬ ಸಲಹೆ ನೀಡಿದ್ದರು.