Don't Miss!
- News Heatwave: ಈ ರಾಜ್ಯದ 8 ಜಿಲ್ಲೆಗಳಿಗೆ ಹೀಟ್ವೇವ್ ಎಚ್ಚರಿಕೆ; ಮಳೆ ಸಾಧ್ಯತೆ!
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಗೆ ಚೆಂಗನೆ ನೆಗೆದ ಬೆಳಗಾವಿ ಚಿಗರೆ ಲಕ್ಷ್ಮಿ ರೈ
ಇಷ್ಟು ವರ್ಷಗಳ ಕಾಲ ದಕ್ಷಿಣದಲ್ಲೇ ಸುತ್ತು ಹೊಡೆಯುತ್ತಿದ್ದ ಬೆಳಗಾವಿ ಚೆಲುವೆ ಲಕ್ಷ್ಮಿ ರೈ (ಹೊಸ ಹೆಸರು ರಾಯ್ ಲಕ್ಷ್ಮಿ) ಇದೀಗ ಬಾಲಿವುಡ್ ಗೆ ಚೆಂಗನೆ ನೆಗದಿದ್ದಾರೆ. ಅದರಲ್ಲೂ ಯಶಸ್ವಿ ನಿರ್ದೇಶಕ ಎಂದು ಗುರುತಿಸಿಕೊಂಡಿರುವ ತಮಿಳಿನ ಎ ಆರ್ ಮುರುಗದಾಸ್ ಅವರ ಚಿತ್ರದಲ್ಲಿ ಎಂಬುದು ವಿಶೇಷ.
ಮುರುಗದಾಸ್ ಅವರ 'ಅಕಿರಾ' ಚಿತ್ರದಲ್ಲಿ ರಾಯ್ ಲಕ್ಷ್ಮಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಲಿದ್ದಾರೆ. ಪೂರ್ಣ ಪ್ರಮಾಣದ ನಾಯಕಿಯಾಗಿ ಸೋನಾಕ್ಷಿ ಸಿನ್ಹಾ ಇದ್ದು, ರಾಯ್ ಅತಿಥಿ ಪಾತ್ರಕ್ಕೆ ಸೀಮಿತವಾಗಿದ್ದಾರೆ. ಈ ಬಗ್ಗೆ ಲಕ್ಷ್ಮಿ ರೈ ಅವರಿಗೆ ಬೇಸರವೇನೂ ಇಲ್ಲ. ['ಶೃಂಗಾರ' ತಾರೆ ಲಕ್ಷ್ಮಿ ರೈ ಕುರಿತ ಕೆಲವು ಸಂಗತಿಗಳು]
ಅವರು ಮಾತನಾಡುತ್ತಾ, "ಈ ಚಿತ್ರದ ಅತಿಥಿ ಪಾತ್ರದ ಮೂಲಕ ತಾನು ಬಾಲಿವುಡ್ ಗೆ ಅಡಿಯಿಡುತ್ತಿದ್ದೇನೆ. ಆದರೆ ಬಹಳ ಗಮನಾರ್ಹ ಪಾತ್ರ. ಹಾಗಾಗಿಯೇ ಈ ಪಾತ್ರವನ್ನು ಅಂಗೀಕರಿಸಿದೆ. ಚಿತ್ರದಲ್ಲಿ ಬೋಲ್ಡ್ ಆಗಿ ಕಾಣಿಸುತ್ತಿದ್ದೇನೆ. ಇದುವರೆಗೂ ನಾನು ಮಾಡದಂತಹ ಪಾತ್ರವಿದು" ಎಂದಿದ್ದಾರೆ.
ಕಾಸ್ಟಿಂಗ್ ನಿರ್ದೇಶಕರೊಬ್ಬರು ನನ್ನ ಹೆಸರನ್ನು ಸೂಚಿಸಿದರಂತೆ, ಮುರುಗದಾಸ್ ಅವರಿಂದ ಕರೆಬಂತು. ಅವರ ಚಿತ್ರಗಳಲ್ಲಿ ಅಭಿನಯಿಸಬೇಕು ಎಂಬುದು ಪ್ರತಿಯೊಬ್ಬರ ಕನಸು. ಪಾತ್ರದ ಬಗ್ಗೆ ಅವರು ಹೇಳಿದಾಗ ನಾನು ನೋ ಹೇಳಲು ಸಾಧ್ಯವಾಗಲೇ ಇಲ್ಲ ಎನ್ನುತ್ತಾರೆ ಲಕ್ಷ್ಮಿ. [ಫಿಲ್ಮಿಬೀಟ್ ಕನ್ನಡ ಉಚಿತ ಸುದ್ದಿಸಾರಂಗಿ]
ದಕ್ಷಿಣದ ಚಿತ್ರಗಳಿಗೆ ಹೋಲಿಸಿದರೆ ಬಾಲಿವುಡ್ ಚಿತ್ರಗಳು ಭಿನ್ನವಾಗಿರುತ್ತವೆ ಎನ್ನುವ ರಾಯ್ ಲಕ್ಷ್ಮಿ ಅವರ ಪಾಲಿಗೆ 'ಅಕಿರಾ' ಚಿತ್ರ ಮೊದಲ ಮೆಟ್ಟಿಲು. ಮುಂದೆ ಈ ಚಿತ್ರ ಅವರಿಗೆ ಬಾಲಿವುಡ್ ನಲ್ಲಿ ಒಳ್ಳೆಯ ಆಫರ್ ಗಳನ್ನು ತಂದುಕೊಟ್ಟರೂ ಅಚ್ಚರಿಯಿಲ್ಲ. (ಏಜೆನ್ಸೀಸ್)