Don't Miss!
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲಿಕೆ ಹಿಡಿದು ತೋಟದ ಕೆಲಸಕ್ಕೆ ಇಳಿದ ಕೆಜಿಎಫ್ ಸುಂದರಿ
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಮಂದಿ ನಟರು ಹಳ್ಳಿಗಳಿಗೆ, ತಮ್ಮ ಫಾರಂ ಹೌಸ್ಗಳಿಗೆ ತಮ್ಮ ವಾಸ್ತವ್ಯ ಬದಲಾಯಿಸಿಕೊಂಡು, 'ಸಾಂಧರ್ಭಿಕ ಕೃಷಿ'ಯಲ್ಲಿ ತೊಡಗಿದ್ದಾರೆ.
ಆದರೆ ನಟಿಯರು ಹೀಗೆ ಕೃಷಿಗೆ ಇಳಿದಿರುವುದು ಕಡಿಮೆ. ಕನ್ನಡದಲ್ಲಿಯೂ ನಟಿಸಿರುವ ಬಾಲಿವುಡ್ ನಟಿ ರವೀನಾ ಟಂಡನ್ ಈ ಲಾಕ್ಡೌನ್ ಅವಧಿಯಲ್ಲಿ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ನಟಿ ರವೀನಾ ಟಂಡನ್ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ವಿಡಿಯೋದಲ್ಲಿ ರವೀನಾ ಸಲಿಕೆ ಹಿಡಿದು ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ.
ವಿಡಿಯೋ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ರವೀನಾ ಟಂಡನ್, 'ತೋಟದಲ್ಲಿ ಕೆಲಸಗಾರರು ಉಳಿಸಿ ಹೋಗಿದ್ದ ಪ್ಲಾಸ್ಟಿಕ್ ಅನ್ನು ಹೆಕ್ಕಿ ತೆಗೆಯುವ ಕಾರ್ಯ ಮಾಡಿದೆ. ನನ್ನ ತೋಟದಲ್ಲಿ ಮಾತ್ರವಲ್ಲದೆ ಅಕ್ಕ-ಪಕ್ಕದ ಜಮೀನಿನಲ್ಲಿಯೂ ಇದ್ದ ಪ್ಲಾಸ್ಟಿಕ್ ಅನ್ನು ಆಯ್ದು ಸ್ವಚ್ಛತೆ ಕಾರ್ಯ ಮಾಡಿದೆವು. ಈ ವೀಕೆಂಡ್ ಹೀಗೆ ಉತ್ತಮ ಕಾರ್ಯದೊಂದಿಗೆ ಸಮಾಪ್ತಿಯಾಯಿತು' ಎಂದಿದ್ದಾರೆ ರವೀನಾ ಟಂಡನ್.
ರವೀನಾ ಮಾಡಿರುವ ಕಾರ್ಯಕ್ಕೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು 'ನಿಜವಾಗಿಯೂ ನೀವು ತೋಟದಲ್ಲಿ ಕೆಲಸ ಮಾಡಿದಿರಾ?' ಎಂದು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.
ನಟಿ ರವೀನಾ ಟಂಡನ್ ಕೊರೊನಾ ಸಂಕಷ್ಟದ ಸಮಯದಲ್ಲಿ ಅಗತ್ಯದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಉಚಿತ ಆಹಾರ, ದಿನಸಿ ವಿತರಣೆ ಜೊತೆಗೆ ಮುಂಬೈ ಮತ್ತು ದೆಹಲಿಗಳಲ್ಲಿ ಉಚಿತ ಆಮ್ಲಜನಕ ಸಿಲಿಂಡರ್ಗಳನ್ನು ಸಹ ಒದಗಿಸಿದ್ದರು.
Recommended Video
ಕನ್ನಡದಲ್ಲಿ ಪ್ರೀತ್ಸೆ, ಉಪೇಂದ್ರ ಸಿನಿಮಾಗಳಲ್ಲಿ ನಟಿಸಿದ್ದ ರವೀನಾ ಟಂಡನ್ ಇದೀಗ 'ಕೆಜಿಎಫ್ 2' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಖಡಕ್ ರಾಜಕಾರಣಿ ಪಾತ್ರದಲ್ಲಿ ರವೀನಾ ಕಾಣಿಸಿಕೊಳ್ಳಲಿದ್ದಾರೆ.