Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗಿಣಿ ಅವತಾರ ತಾಳಿದ ಬಾಲಿವುಡ್ ನಟಿ ಶ್ರದ್ಧಾ ಕಪೂರ್
ಬಾಲಿವುಡ್ ನಟಿ ಶ್ರದ್ಧಾ ಕಪೂರ್ ನಾಗಿಣಿಯ ಅವತಾರದಲ್ಲಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಹೌದು, ಈಗಾಗಲೇ ಬಾಲಿವುಡ್ ನಲ್ಲಿ ಮೂಡಿ ಬಂದಿರುವ ನಾಗಿಣಿ ಚಿತ್ರಗಳನ್ನೇ ಹೋಲುವ ಮತ್ತೊಂದು ರೀತಿಯ ನಾಗಿಣಿ ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ನಟಿ ಶ್ರದ್ಧಾ ಕಪೂರ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿಂದೆ ನಟಿ ರೇಖಾ, ಶ್ರೀದೇವಿ, ರೀನಾ ರಾಯ್ ನಾಗಿಣಿಯಾಗಿ ಮಿಂಚಿದ್ದರು. ಇದೀಗ ಶ್ರದ್ಧಾ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶ್ರದ್ಧಾ, 'ತೆರೆಮೇಲೆ ನಾಗಿನ್ ಆಗಿ ಕಾಣಿಸಿಕೊಳ್ಳುತ್ತಿರುವುದು ಸಂಪೂರ್ಣ ಸಂತೋಷವಾಗಿದೆ. ನಾನು ಶ್ರೀದೇವಿ ಮೇಡಮ್ ಅವರ ನಾಗಿನಾ ಮತ್ತು ನಿಗಾಹೇನ್ ಚಿತ್ರಗಳನ್ನು ನೋಡಿ ಬೆಳೆದವಳು. ಭಾರತೀಯ ಸಂಪ್ರದಾಯಿಕ ಜಾನಪದ ಕಥೆಗಳ ಪಾತ್ರಗಳಲ್ಲಿ ನಟಿಸಲು ನಾನು ಯಾವಾಗಲು ಬಯಸುತ್ತೇನೆ' ಎಂದು ಬರೆದುಕೊಂಡಿದ್ದಾರೆ.
ಹೊಸ ಮೈಲುಗಲ್ಲು ತಲುಪಿದ ಸಾಧನೆ ಮಾಡಿದ ನಟಿ ಶ್ರದ್ಧಾ ಕಪೂರ್
ಅಂದ್ಹಾಗೆ ಶ್ರದ್ಧಾ ಕಪೂರ್ ಅಭಿನಯದ ನಾಗಿನ್ ಸಿನಿಮಾಗೆ ವಿಶಾಲ್ ಫ್ಯೂರಿಯಾ ನಿರ್ದೇಶನ ಮಾಡುತ್ತಿದ್ದಾರೆ. ನಿಖಿಲ್ ದ್ವಿವೇದಿ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಅನೌನ್ಸ್ ಮಾಡಿರುವ ಚಿತ್ರತಂಡ ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರದ ಹೆಚ್ಚನ ಭಾಗ ಗ್ರಾಫಿಕ್ಸ್ ತಂತ್ರಗಾರಿಕೆ ಇರಲಿದೆಯಂತೆ.
Recommended Video
ನಟಿ ಶ್ರದ್ಧಾ ಕಪೂರ್ ಲಾಕ್ ಡೌನ್ ಬಳಿಕ ಇನ್ನೂ ಚಿತ್ರೀಕರಣಕ್ಕೆ ಹೊರಟಿಲ್ಲ. ಶ್ರದ್ಧಾ ಕೊನೆಯದಾಗಿ ಬಾಗಿ-3 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಇದೀಗ ಲಾಕ್ ಡೌನ್ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿದ್ದು, ಸದ್ಯದಲ್ಲೇ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.