Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಲೆಬ್ರಿಟಿ ಆಗಿರುವುದಕ್ಕೆ ತೆರುತ್ತಿರುವ ಬೆಲೆ ಇದು: ಐಟಿ ದಾಳಿ ಬಗ್ಗೆ ತಾಪ್ಸಿ ಪನ್ನು ಮಾತು
ಬಾಲಿವುಡ್ ನಟಿ ತಾಪ್ಸಿ ಪನ್ನು ಹಾಗೂ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಮಾರ್ಚ್ 3 ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ದಾಳಿಯು ಉದ್ದೇಶಪೂರ್ವಕ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಐಟಿ ದಾಳಿಯ ಬಗ್ಗೆ ಕೆಲವು ದಿನಗಳ ಹಿಂದೆ ವ್ಯಂಗ್ಯದ ಟ್ವೀಟ್ ಮಾಡಿದ್ದ ನಟಿ ತಾಪ್ಸಿ ಪನ್ನು ಇದೀಗ, ಮಾಧ್ಯಮಗಳ ಬಳಿ ಇದೇ ವಿಷಯದ ಕುರಿತು ಮಾತನಾಡಿದ್ದಾರೆ.
ಐಟಿ ಅಧಿಕಾರಿಗಳು ನನ್ನ ಮನೆಯಲ್ಲಿ ಮೂರು ವಸ್ತುಗಳಿಗಾಗಿ ಹುಡುಕಾಡಿದರು: ತಾಪ್ಸಿ
'ನಾನು ತಪ್ಪು ಮಾಡಿದ್ದಲ್ಲಿ ಶಿಕ್ಷೆ ಅನುಭವಿಸಲು ತಯಾರಾಗಿದ್ದೇನೆ. ಇದು ಆದಾಯ ತೆರಿಗೆ ದಾಳಿ, ಇಲ್ಲಿ ಎಲ್ಲವೂ ನಿಯಮದಂತೆ ನಡೆಯುತ್ತದೆ. ಇದೀಗ ಅವರು ನಿಯಮದಂತೆ ದಾಳಿ ಮಾಡಿದ್ದಾರೆ, ಮುಂದಿನ ಪ್ರಕ್ರಿಯೆಗಳು ಹಾಗೆಯೇ ನಡೆಯುವ ವಿಶ್ವಾಸವಿದೆ' ಎಂದು ಖಾಸಗಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ ತಾಪ್ಸಿ.
'ನಾನು ಏನೂ ಮುಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ದಾಳಿಯ ವೇಳೆ ಎಲ್ಲವನ್ನೂ ಪರಿಶೀಲನೆ ಮಾಡಿದ್ದಾರೆ. ನಾನು ಮೋಸ ಮಾಡಿದ್ದರೆ, ಸರ್ಕಾರದಿಂದ ಏನಾದರೂ ಮುಚ್ಚಿಟ್ಟಿದ್ದರೆ ಅದೆಲ್ಲವೂ ಬಹಿರಂಗವಾಗಲಿದೆ. ಒಂದೊಮ್ಮೆ ನಾನು ತಪ್ಪು ಮಾಡಿರುವುದು ಸಾಬೀತಾದಲ್ಲಿ ಶಿಕ್ಷೆ ಅನುಭವಿಸಲು ತಯಾರಿದ್ದೇನೆ' ಎಂದಿದ್ದಾರೆ ತಾಪ್ಸಿ.
'ಇದು ಸಾಮಾನ್ಯ ಐಟಿ ದಾಳಿ ಅಷ್ಟೆ ಇದನ್ನು ಉದ್ರಿಕ್ತಗೊಳಿಸಿ ತೋರಿಸುವ ಅಗತ್ಯವಿಲ್ಲ' ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಾತಿಗೆ ತಾಪ್ಸಿ ಪನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
'ನನ್ನ ದೆಹಲಿ, ಮುಂಬೈ ಮನೆಗಳ ಮೇಲೆ ದಾಳಿ ಮಾಡಿದ್ದರು. ಕಚೇರಿಗಳು, ನನ್ನ ವ್ಯವಸ್ಥಾಪಕನ ಕಚೇರಿ ಹಾಗೂ ಮನೆಯ ಮೇಲೂ ದಾಳಿ ಮಾಡಲಾಗಿದೆ. ನಾನು ಇದನ್ನು ನಿರೀಕ್ಷಿಸಿರಲಿಲ್ಲ. ನನ್ನ ಕುಟುಂಬದವರಿಗಂತೂ ಇದು ತೀವ್ರ ಆತಂಕ ತಂದಿತ್ತು. ಆದರೆ ಸಾವರಿಸಿಕೊಂಡು ನಾವೆಲ್ಲರೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸಹಕಾರ ನೀಡಿದೆವು' ಎಂದಿದ್ದಾರೆ ತಾಪ್ಸಿ.
'ಜೀವನದಲ್ಲಿ ಏನು ಬೇಕಾದರೂ ಆಗಬಹುದು ಎಂಬುದನ್ನು ಕೆಲವು ತಿಂಗಳಿನಿಂದ ಅರಿತುಕೊಂಡಿದ್ದೇನೆ. ಸೆಲೆಬ್ರಿಟಿ ಆಗಿರುವುದಕ್ಕೆ, ಸತ್ಯ ಮಾತನಾಡುವುದಕ್ಕೆ ತೆರಬೇಕಾದ ದಂಡ ಇದು ಎನಿಸುತ್ತದೆ. ನಾನಂತೂ ಧೈರ್ಯವಾಗಿದ್ದೇನೆ. ತಪ್ಪು ಮಾಡಿದವರಿಗಷ್ಟೆ ಹೆದರಿಕೆ ಇರುತ್ತದೆ' ಎಂದಿದ್ದಾರೆ ತಾಪ್ಸಿ ಪನ್ನು.
Recommended Video
ತಾಪ್ಸಿ ಪನ್ನು ಹಾಗೂ ಅನುರಾಗ್ ಕಶ್ಯಪ್ ಅವರುಗಳ ಮನೆಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ಮುಗಿದ ಮರು ದಿನವೇ ಇಬ್ಬರೂ ತಮ್ಮ ಹೊಸ ಸಿನಿಮಾ 'ದೊಬಾರಾ' ದ ಚಿತ್ರೀಕರಣದಲ್ಲಿ ಭಾಗಿಯಾದರು.