Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆದಿಪುರುಷ್': ಸೀತೆಯ ಉಡುಪಿನ ಬಗ್ಗೆ ಆಕ್ಷೇಪ, ಸೆನ್ಸಾರ್ ಬೋರ್ಡ್ಗೆ ನೊಟೀಸ್ ನೀಡಿದ ನ್ಯಾಯಾಲಯ
ಪ್ರಭಾಸ್ ನಟಿಸಿರುವ 'ಆದಿಪುರುಷ್' ಸಿನಿಮಾ ಬಿಡುಗಡೆಗೆ ಮುನ್ನವೇ ಪ್ರೇಕ್ಷಕರಿಗೆ ಟೀಕೆಗೊಳಗಾಗಿದೆ. ಇದರ ಬೆನ್ನಲ್ಲೆ ಈಗ ಸಿನಿಮಾಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ರಾಮಾಯಣ ಕತೆಯುಳ್ಳ 'ಆದಿಪುರುಷ್' ಸಿನಿಮಾದ ಮೇಕಿಂಗ್, ಪೌರಾಣಿಕ ಪಾತ್ರಗಳನ್ನು ಪ್ರಸ್ತುತ ಪಡಿಸಿರುವ ರೀತಿ, ಪಾತ್ರಗಳ ತಿರುಚುವಿಕೆ, ಕಳಪೆ ವಿಎಫ್ಎಕ್ಸ್ ಇನ್ನೂ ಕೆಲವು ಕಾರಣಗಳಿಗೆ ಈಗಾಗಲೇ ಚಿತ್ರತಂಡ ತೀವ್ರ ಟೀಕೆಗೆ ಒಳಗಾಗಿದೆ.
ಇದರ ಬೆನ್ನಲ್ಲೆ ಅಲಹಾಬಾದ್ ನ್ಯಾಯಾಲವು 'ಆದಿಪುರುಷ್' ಸಿನಿಮಾಕ್ಕೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಗೆ ನೊಟೀಸ್ ಜಾರಿ ಮಾಡಿದ್ದು ಸ್ಪಷ್ಟನೆ ನೀಡುವಂತೆ ಕೋರಿದೆ.
ಕುಲದೀಪ್ ತಿವಾರಿ ಎಂಬುವರು 'ಆದಿಪುರುಷ್' ಸಿನಿಮಾ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಸಿನಿಮಾದಲ್ಲಿ ರಾಮಾಯಣದ ಪಾತ್ರಗಳನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್ ಸೆನ್ಸಾರ್ ಬೋರ್ಡ್ಗೆ ನೊಟೀಸ್ ನೀಡಿದ್ದು, ಉತ್ತರಿಸುವಂತೆ ಸೂಚಿಸಿದೆ.
'ಸೆನ್ಸಾರ್ ಬೋರ್ಡ್ನ ಅನುಮತಿಯೊಂದಿಗೆ ಬಿಡುಗಡೆ ಮಾಡಿರುವ 'ಆದಿಪುರುಷ್' ಪ್ರೋಮೋನಲ್ಲಿ ಸೀತೆ ಪಾತ್ರಧಾರಿಯ ಉಡುಪು ಆಕ್ಷೇಪಾರ್ಹವಾಗಿದೆ. ಅಲ್ಲದೆ, ಪ್ರೋಮೋನಲ್ಲಿ ಶ್ರೀರಾಮ ಹಾಗೂ ಸೀತಾ ಮಾತೆಯ ಧಾರ್ಮಿಕ ನಂಬಿಕೆಯ ವಿರುದ್ಧ ರೀತಿಯಲ್ಲಿ ಪ್ರದರ್ಶಿಸಲಾಗಿದೆ. ಹಾಗೂ ರಾವಣನ ಪಾತ್ರವನ್ನು ಸಹ ಪ್ರಶ್ನಾರ್ಹವಾಗಿ ಚಿತ್ರಿಸಲಾಗಿದೆ'' ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 21 ಕ್ಕೆ ಮುಂದೂಡಲಾಗಿದ್ದು, ಆ ಒಳಗೆ ಸೆನ್ಸಾರ್ ಬೋರ್ಡ್ ಹಾಗೂ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕರು ನ್ಯಾಯಾಲಯಕ್ಕೆ ಉತ್ತರ ಸಲ್ಲಿಸಬೇಕಿದೆ.
'ಆದಿಪುರುಷ್' ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸಿದ್ದು, ಸೀತೆಯ ಪಾತ್ರದಲ್ಲಿ ಕೃತಿ ಸೆನನ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ರಾವಣನಾಗಿ ನಟಿಸಿದ್ದಾರೆ. ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಓಂ ರಾವತ್ ನಿರ್ದೇಶಿಸಿದ್ದಾರೆ ನಿರ್ಮಾಣ ಮಾಡಿರುವುದು ಟಿ ಸೀರೀಸ್ನ ಭೂಷಣ್ ಕುಮಾರ್.