Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಗಾಯಕನ ವಿವಾಹ: ಮೋದಿ-ಅಮಿತಾಬ್ ಗೆ ಆಹ್ವಾನ
ಹಿರಿಯ ಗಾಯಕ, ಸಹೃದಯಿ ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ವಿವಾಹ ನಿಶ್ಚಯವಾಗಿದ್ದು, ಭಾರಿ ಅದ್ಧೂರಿಯಾಗಿ ಮದುವೆ ಮಾಡಲು ಉದಿತ್ ನಾರಾಯಣ್ ಸಜ್ಜಾಗಿದ್ದಾರೆ.
ಆದಿತ್ಯ ನಾರಾಯಣ್ ಹಾಗೂ ಶ್ವೇತ ಅಗರ್ವಾಲ್ ವಿವಾಹ ಮುಂಬರುವ ಮಂಗಳವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಸೇರಿದಂತೆ ಹಲವಾರು ಗಣ್ಯರನ್ನು ವಿವಾಹಕ್ಕೆ ಆಹ್ವಾನಿಸಿದ್ದಾರೆ ಉದಿತ್ ನಾರಾಯಣ್.
ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನ
ಸಂದರ್ಶನವೊಂದರಲ್ಲಿ ಮಾತನಾಡಿರುವ ಉದಿತ್ ನಾರಾಯಣ್, ಹಲವು ವರ್ಷಗಳಿಂದಲೂ ನಾನು ಬಾಲಿವುಡ್ನಲ್ಲದ್ದೇನೆ, ಹಲವಾರು ಸ್ನೇಹಿತರು ಇಲ್ಲಿದ್ದಾರೆ ಅವರನ್ನೆಲ್ಲಾ ಮದುವೆಗೆ ಕರೆಯದೇ ಇರಲಾಗದು ಎಂದಿದ್ದಾರೆ ಉದಿತ್ ನಾರಾಯಣ್.
ಅಮಿತಾಬ್ ಬಚ್ಚನ್, ನರೇಂದ್ರ ಮೋದಿ ಇನ್ನೂ ಹಲವರು ಖ್ಯಾತನಾಮರನ್ನು ಆಹ್ವಾನಿಸಿರುವುದಾಗಿ ಹೇಳಿರುವ ಉದಿತ್ ನಾರಾಯಣ್, ಕೋವಿಡ್ ಕಾರಣದಿಂದ ಖ್ಯಾತ ನಟರು, ನಾಯಕರು ಮದುವೆಗೆ ಬರದೇ ಇರಬಹುದು ಎಂದು ಸಹ ಹೇಳಿದ್ದಾರೆ.
ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಸಹ ಗಾಯಕರೇ ಆಗಿದ್ದು, ಶೋ ಒಂದರ ನಿರೂಪಕರಾಗಿಯೂ ಕೆಲಸ ಮಾಡಿದ್ದಾರೆ. ಆದಿತ್ಯ ಮದುವೆ ನೇಹಾ ಕಕ್ಕರ್ ಜೊತೆ ಆಗಲಿದೆ ಎನ್ನಲಾಗಿತ್ತು, ಆದರೆ ನೇಹಾ ಕಕ್ಕರ್ ಪಂಜಾಬಿ ಗಾಯಕರೊಬ್ಬರೊಂದಿಗೆ ಮದುವೆಯಾದರು, ಈಗ ಆದಿತ್ಯ ನಾರಾಯಣ್, ಶ್ವೇತಾ ಜೊತೆಗೆ ವಿವಾಹವಾಗುತ್ತಿದ್ದಾರೆ.