Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಗಾಯಕನ ವಿವಾಹ: ಮೋದಿ-ಅಮಿತಾಬ್ ಗೆ ಆಹ್ವಾನ
ಹಿರಿಯ ಗಾಯಕ, ಸಹೃದಯಿ ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ವಿವಾಹ ನಿಶ್ಚಯವಾಗಿದ್ದು, ಭಾರಿ ಅದ್ಧೂರಿಯಾಗಿ ಮದುವೆ ಮಾಡಲು ಉದಿತ್ ನಾರಾಯಣ್ ಸಜ್ಜಾಗಿದ್ದಾರೆ.
ಆದಿತ್ಯ ನಾರಾಯಣ್ ಹಾಗೂ ಶ್ವೇತ ಅಗರ್ವಾಲ್ ವಿವಾಹ ಮುಂಬರುವ ಮಂಗಳವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಸೇರಿದಂತೆ ಹಲವಾರು ಗಣ್ಯರನ್ನು ವಿವಾಹಕ್ಕೆ ಆಹ್ವಾನಿಸಿದ್ದಾರೆ ಉದಿತ್ ನಾರಾಯಣ್.
ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನ
ಸಂದರ್ಶನವೊಂದರಲ್ಲಿ ಮಾತನಾಡಿರುವ ಉದಿತ್ ನಾರಾಯಣ್, ಹಲವು ವರ್ಷಗಳಿಂದಲೂ ನಾನು ಬಾಲಿವುಡ್ನಲ್ಲದ್ದೇನೆ, ಹಲವಾರು ಸ್ನೇಹಿತರು ಇಲ್ಲಿದ್ದಾರೆ ಅವರನ್ನೆಲ್ಲಾ ಮದುವೆಗೆ ಕರೆಯದೇ ಇರಲಾಗದು ಎಂದಿದ್ದಾರೆ ಉದಿತ್ ನಾರಾಯಣ್.
ಅಮಿತಾಬ್ ಬಚ್ಚನ್, ನರೇಂದ್ರ ಮೋದಿ ಇನ್ನೂ ಹಲವರು ಖ್ಯಾತನಾಮರನ್ನು ಆಹ್ವಾನಿಸಿರುವುದಾಗಿ ಹೇಳಿರುವ ಉದಿತ್ ನಾರಾಯಣ್, ಕೋವಿಡ್ ಕಾರಣದಿಂದ ಖ್ಯಾತ ನಟರು, ನಾಯಕರು ಮದುವೆಗೆ ಬರದೇ ಇರಬಹುದು ಎಂದು ಸಹ ಹೇಳಿದ್ದಾರೆ.
ಉದಿತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಸಹ ಗಾಯಕರೇ ಆಗಿದ್ದು, ಶೋ ಒಂದರ ನಿರೂಪಕರಾಗಿಯೂ ಕೆಲಸ ಮಾಡಿದ್ದಾರೆ. ಆದಿತ್ಯ ಮದುವೆ ನೇಹಾ ಕಕ್ಕರ್ ಜೊತೆ ಆಗಲಿದೆ ಎನ್ನಲಾಗಿತ್ತು, ಆದರೆ ನೇಹಾ ಕಕ್ಕರ್ ಪಂಜಾಬಿ ಗಾಯಕರೊಬ್ಬರೊಂದಿಗೆ ಮದುವೆಯಾದರು, ಈಗ ಆದಿತ್ಯ ನಾರಾಯಣ್, ಶ್ವೇತಾ ಜೊತೆಗೆ ವಿವಾಹವಾಗುತ್ತಿದ್ದಾರೆ.