Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕ್ಷಯ್ ಕುಮಾರ್ ಬಳಿಕ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಕೊರೊನಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ.
ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ.
ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ಆರಂಭಿಸಿದ ಅಕ್ಷಯ್ ಕುಮಾರ್
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.
Recommended Video
ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.