Don't Miss!
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದೃಶ್ಯಂ-2' ಹಿಂದಿ ರಿಮೇಕ್ ಗೆ ಸಿದ್ಧತೆ: ಮೋಹನ್ ಲಾಲ್-ಮೀನಾ ಪಾತ್ರದಲ್ಲಿ ಯಾರು ನಟಿಸುತ್ತಾರೆ?
ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ದೃಶ್ಯಂ-2 ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. 2013ರಲ್ಲಿ ರಿಲೀಸ್ ಆಗಿದ್ದ ದೃಶ್ಯಂ ಸಿನಿಮಾದ ಮುಂದುವರೆದ ಭಾಗ ಇದಾಗಿದ್ದು, ಜಾರ್ಜ್ ಕುಟ್ಟಿಯ ಚಾಕಚಕ್ಯತೆಗೆ ಅಭಿಮಾನಿಗಳು ಮನಸೋತಿದ್ದಾರೆ.
ದೃಶ್ಯಂ -2 ರಿಲೀಸ್ ಆಗುತ್ತಿದ್ದಂತೆ ಬೇರೆ ಬೇರೆ ಭಾಷೆಯಲ್ಲಿ ರಿಮೇಕ್ ಮಾಡುವ ಪ್ಲಾನ್ ನಡೆಯುತ್ತಿದೆ. ಈಗಾಗಲೇ ತೆಲುಗಿನಲ್ಲಿ ದೃಶ್ಯಂ-2 ರಿಮೇಕ್ ಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೆ ಹಿಂದಿಯಲ್ಲೂ ರಿಮೇಕ್ ಮಾಡುವ ಬಗ್ಗೆ ಯೋಚನೆ ಮಾಡಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ದೃಶ್ಯಂ-2 ಸಕ್ಸಸ್: ಪಾರ್ಟ್-3ಗೆ ಸಜ್ಜಾದ ನಟ ಮೋಹನ್ ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್
ದೃಶ್ಯಂ ಹಿಂದಿ ರಿಮೇಕ್ ನಲ್ಲಿ ಅಜಯ್ ದೇವಗನ್ ಮತ್ತು ಶ್ರೀಯಾ ಶರಣ್ ಕಾಣಿಸಿಕೊಂಡಿದ್ದರು. ಇನ್ನು ಪ್ರಮುಖ ಪಾತ್ರದಲ್ಲಿ ನಟಿ ಟಬು ಮಿಂಚಿದ್ದರು. ಇದೀಗ ದೃಶ್ಯಂ-2 ರಿಮೇಕ್ ಮಾಡುವ ಬಗ್ಗೆ ಮಾತುಕತೆ ನಡೆದಿದ್ದು, ಅಜಯ್ ದೇವಗನ್ ಮತ್ತು ಟಬು ಇಬ್ಬರು ಗ್ರೀನ್ ಸಿಗ್ನಲ್ ನೀಡಿದ್ದಾರಂತೆ.
ದೃಶ್ಯಂ ಮಾಡಿದ ಸಿನಿಮಾತಂಡವೇ ಪಾರ್ಟ್ ಮಾಡುವ ಬಗ್ಗೆ ಎಲ್ಲಾ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಾರಿ ಶ್ರೀಯಾ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ. ಮಲಯಾಳಂನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ದೃಶ್ಯಂ-2 ಸಿನಿಮಾ ಬೇರೆ ಬೇರೆ ಭಾಷೆಯಲ್ಲೂ ಯಶಸ್ಸು ಕಾಣುತ್ತಾ ಎಂದು ಕಾದು ನೋಡಬೇಕು.
Recommended Video
ಪಾರ್ಟ್-2ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ನಿರ್ದೇಶಕ ಜೀತು ಜೋಸೆಫ್ ಮತ್ತು ಮೋಹನ್ ಲಾಲ್ ಇಬ್ಬರು ಪಾರ್ಟ್-3 ಮಾಡುವ ಬಗ್ಗೆ ಪ್ಲಾನ್ ಮಾಡುತ್ತಿದ್ದಾರೆ. ಪಾರ್ಟ್-3 ಮಾಡುವ ಬಗ್ಗೆ ನಿರ್ಮಾಪಕ ಆಂಟೋನಿ ಪೆರುಂಬವೂರ್ ಸುಳಿವು ಬಿಟ್ಟುಕೊಟ್ಟಿದ್ದಾರೆ. ಈಗಾಗಲೇ ಪ್ಲಾನ್ ನಡೆಯುತ್ತಿದೆ ಎಂದು ಹೇಳಿದ್ದಾರೆ.