Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ಆರಂಭಿಸಿದ ಅಕ್ಷಯ್ ಕುಮಾರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯಿಸುತ್ತಿರುವ 'ರಾಮ್ ಸೇತು' ಸಿನಿಮಾದ ಚಿತ್ರೀಕರಣ ಇಂದಿನಿಂದ (ಮಾರ್ಚ್ 30) ಮುಂಬೈನಲ್ಲಿ ಆರಂಭವಾಗಿದೆ.
'ರಾಮ್ ಸೇತು' ಚಿತ್ರದಲ್ಲಿ ಅಕ್ಷಯ್ ಕುಮಾರ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಫಸ್ಟ್ ಲುಕ್ ಫೋಟೋವನ್ನು ನಟ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅಭಿಮಾನಿಗಳ ಅಭಿಪ್ರಾಯ ಕೇಳಿದ್ದಾರೆ.
ಸಿನಿಮಾ ನಿರ್ಮಾಣಕ್ಕೆ ಕೈಹಾಕಿದ ಅಮೆಜಾನ್: ಅಯೋಧ್ಯೆಗೆ ಹೊರಟ ಅಕ್ಷಯ್
''ಬಹಳ ವಿಶೇಷವಾದ ಸಿನಿಮಾದ ಜರ್ನಿ ಇಂದಿನಿಂದ ಆರಂಭವಾಗಿದೆ. ಚಿತ್ರೀಕರಣ ಮುಂಬೈನಲ್ಲಿ ಶುರುವಾಗಿದೆ. ಪುರಾತತ್ವ ಶಾಸ್ತ್ರಜ್ಞ ಪಾತ್ರದಲ್ಲಿ ನಟಿಸುತ್ತಿದ್ದೇನೆ. ನನ್ನ ಲುಕ್ ಹೇಗಿದೆ ಎಂದು ನಿಮ್ಮಿಂದ ತಿಳಿಯಲು ಬಯಸುತ್ತೇನೆ'' ಎಂದು ಅಕ್ಷಯ್ ಪೋಸ್ಟ್ ಹಾಕಿದ್ದಾರೆ.
ಸ್ವತಃ ಅಕ್ಷಯ್ ಕುಮಾರ್ ಹೇಳಿದಂತೆ ರಾಮ್ ಸೇತು ಸಿನಿಮಾದಲ್ಲಿ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ.
ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಅಕ್ಷಯ್ ಕುಮಾರ್ ಸೇರಿದಂತೆ ಚಿತ್ರತಂಡ ಪಾಲ್ಗೊಂಡಿತ್ತು. ಈ ವೇಳೆ ಮುಹೂರ್ತದ ಫೋಟೋ ಹಂಚಿಕೊಂಡಿದ್ದ ಅಕ್ಷಯ್ ಕುಮಾರ್ ''ಶ್ರೀರಾಮನ ಆಶೀರ್ವಾದಿಂದ ರಾಮ್ ಸೇತು ಸಿನಿಮಾ ಆರಂಭವಾಗಿದೆ. ಜೈ ಶ್ರೀರಾಮ್'' ಎಂದಿದ್ದರು.
Recommended Video
ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.