Don't Miss!
- News Rain: ಬರದಿಂದ ತತ್ತರಿಸಿದ ಮಲೆನಾಡು: ಕೊಪ್ಪ ಮೇರುತಿ ಶಿಖರದಲ್ಲಿ ವರುಣನಿಗೆ ಹೋಮ-ಹವನ
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುಪಿ ಸಿಎಂ ಭೇಟಿ ಮಾಡಿದ ಅಕ್ಷಯ್: ಅಯೋಧ್ಯೆಯಲ್ಲಿ ಶೂಟಿಂಗ್ಗೆ ಗ್ರೀನ್ ಸಿಗ್ನಲ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ ಭೇಟಿ ಮಾಡಿದ್ದರು. ಈ ಭೇಟಿ ಹಿಂದಿನ ನಿಜವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲವಾದರೂ ಹಲವು ಕಥೆಗಳು ಹುಟ್ಟಿಕೊಂಡಿದೆ.
ಆದ್ರೆ, ಈ ಭೇಟಿಯಲ್ಲಿ ಅಕ್ಷಯ್ ಕುಮಾರ್ ತಮ್ಮ ಮುಂದಿನ ಚಿತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ನಟ ಅಕ್ಷಯ್ ಕುಮಾರ್; ಕಾರಣವೇನು?
ಹೌದು, ದೀಪಾವಳಿ ಹಬ್ಬದ ಪ್ರಯುಕ್ತ ಘೋಷಣೆಯಾದ 'ರಾಮ್ ಸೇತು' ಚಿತ್ರದ ಚಿತ್ರೀಕರಣವನ್ನು ಅಯೋಧ್ಯೆಯಲ್ಲಿ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ ಅಕ್ಷಯ್ ಕುಮಾರ್ ಯುಪಿ ಸಿಎಂ ಅವರಿಂದ ಅನುಮತಿ ಪಡೆದುಕೊಂಡಿದ್ದಾರಂತೆ.
2021ರ ಮಧ್ಯದಿಂದ 'ರಾಮ್ ಸೇತು' ಚಿತ್ರದ ಶೂಟಿಂಗ್ ಶುರು ಮಾಡಲು ಪ್ಲಾನ್ ಮಾಡಿದ್ದು, ರಾಮನ ಜನ್ಮಭೂಮಿಯಲ್ಲಿ ಚಿತ್ರೀಕರಣ ಮಾಡುವ ಕುರಿತು ನಿರ್ದೇಶಕ ಅಭಿಷೇಕ್ ಶರ್ಮಾ ಯೋಜನೆ ಹಾಕಿಕೊಂಡಿದ್ದಾರೆ.
ಅಂದ್ಹಾಗೆ, ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಬಹುದೊಡ್ಡ ಫಿಲಂ ಸಿಟಿ ನಿರ್ಮಾಣ ಮಾಡುತ್ತಿದೆ. ಈ ಹಿನ್ನೆಲೆ ಬಾಲಿವುಡ್ ನಟರ ಜೊತೆ ಯೋಗಿ ಆದಿತ್ಯನಾಥ್ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಕೊನೆಯದಾಗಿ ಅಕ್ಷಯ್ ಕುಮಾರ್ ನಟನೆಯಲ್ಲಿ 'ಲಕ್ಷ್ಮಿ' ಸಿನಿಮಾ ಬಿಡುಗಡೆಯಾಗಿತ್ತು. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನು ಜನವರಿಯಲ್ಲಿ 'ಬಚ್ಚನ್ ಪಾಂಡೆ' ಸಿನಿಮಾ ಆರಂಭಿಸಲಿದ್ದಾರೆ.
Recommended Video
ಅಕ್ಷಯ್ ಕುಮಾರ್ ನಟಿಸಿರುವ ಸೂರ್ಯವಂಶಿ ರಿಲೀಸ್ ಸಜ್ಜಾಗಿದೆ. ಧನುಶ್, ಸಾರಾ ಅಲಿ ಖಾನ್ ಹಾಗೂ ಅಕ್ಷಯ್ ಕುಮಾರ್ ಕಾಣಿಸಿಕೊಂಡಿರುವ ಅತ್ರಾಂಗಿ ರೇ ಚಿತ್ರೀಕರಣ ಮುಗಿಸಿದೆ. ಬೆಲ್ ಬಾಟಂ ಸಹ ಚಿತ್ರೀಕರಣ ಮಾಡುತ್ತಿದೆ.