ಉತ್ತರಾಖಂಡ ಹಿಮನದಿ ಸ್ಫೋಟ: ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಅಕ್ಷಯ್, ಅಜಯ್, ಕರೀನಾ ಪ್ರಾರ್ಥನೆ

ಉತ್ತರಾಖಂಡದ ಚಮೋಲಿ ಜಿಲ್ಲಿಯ ಜೋಶಿಮಠದಲ್ಲಿ ಸಂಭವಿಸಿದ ಹಿಮನದಿ ಸ್ಫೋಟದಿಂದ 7 ಮಂದಿ ಮೃಪಟ್ಟಿದ್ದು, 125ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಕಣ್ಮರೆಯಾದವರನ್ನು ಪತ್ತೆ ಹಚ್ಚಲು ಶೋಧಕಾರ್ಯ ನಡೆಯುತ್ತಿದೆ.

ನೈಸರ್ಗಿಕ ವಿಪತ್ತಿಗೆ ಸಿಲುಕಿ ಬಳಲುತ್ತಿರುವವರಿಗೆ ಅನೇಕರು ಪ್ರಾರ್ಥನೆ ಮಾಡುತ್ತಿದ್ದಾರೆ. ಬೇರೆ ಬೇರೆ ಕ್ಷೇತ್ರದ ಗಣ್ಯರು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅನೇಕರು ವಿಪತ್ತು ನಿರ್ವಹಣಾ ಅಧಿಕಾರಿಗಳ ಸಂಪರ್ಕ ಸಂಖ್ಯೆ ಮತ್ತು ಇತರ ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಬಾಲಿವುಡ್ ನಟಿ ಕರೀನಾ ಕಪೂರ್ ಸಹ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರಿನಾ, ಉತ್ತರಾಖಂಡದಲ್ಲಿ ಭೀಕರ ದುರಂತದಿಂದ ಬಳಲುತ್ತಿರುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆ ಎಂದು ಹೇಳಿದ್ದಾರೆ.

 Akshay kumar, Kareena Kapoor, Ajay Devgan and others send prayers to Affected by Uttarakhand glacier burst

ಅನೇಕರು ಟ್ವೀಟ್ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ದುರಂತದಲ್ಲಿ ಬಲಿಯಾದವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ದುರಂತದಲ್ಲಿ ಸಿಲುಕಿದವರು ಸುರಕ್ಷತೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅಕ್ಷಯ್ ಕುಮಾರ್, ಅಜಯ್ ದೇವಗನ್, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್, ತಮನ್ನಾ ಭಾಟಿಯಾ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಹಿಮನದಿ ಸ್ಫೋಟದಿಂದ ಬಾರಿ ದುರಂತ ಸಂಭವಿಸಿದ್ದು, ವಿದ್ಯುತ್ ಯೋಜನೆಯ ಅಣೆಕಟ್ಟೆಯೂ ಈ ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಹಲವು ಕಾರ್ಮಿಕರು ಕೊಚ್ಚಿಹೋಗಿದ್ದಾರೆ.

Recommended Video

ಸಲಾರ್ ಗೆ ಎಂಟ್ರಿ ಕೊಟ್ಟ ಕನ್ನಡದ ಸ್ಟಾರ್ ವಿಲನ್ | Filmibeat Kannada

More from Filmibeat

English summary
Bollywood Actors Akshay kumar, Kareena Kapoor, Ajay Devgan and others send prayers for safety and well being of those Affected by Uttarakhand glacier burst.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X