Don't Miss!
- News
ಅರ್ಧಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳನ್ನು ಮುಚ್ಚಿಟ್ಟ ತೆಲಂಗಾಣ ಸರ್ಕಾರ
- Automobiles
50 ವರ್ಷದ ಸಂಭ್ರಮದಲ್ಲಿ ವಿಶ್ವದ ಮೊದಲ ಸೂಪರ್ ಕಾರು
- Finance
ಭಾರೀ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇಂದು ಕುಸಿತ: ಬೆಳ್ಳಿ ಬೆಲೆ ಇಳಿಕೆ
- Sports
ಈ ಐಪಿಎಲ್ನ 'ಮ್ಯಾನ್ ಆಫ್ ದ ಟೂರ್ನಿ' ಹೆಸರಿಸಿದ ಮೈಕಲ್ ವಾನ್
- Lifestyle
ಕೊರೊನಾ 2ನೇ ಡೋಸ್ ಪಡೆದ ಬಳಿಕ ರೋಗ ನಿರೋಧಕ ಶಕ್ತಿ ಹೆಚ್ಚಲು ಎಷ್ಟು ದಿನ ಬೇಕು?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಉತ್ತರಾಖಂಡ ಹಿಮನದಿ ಸ್ಫೋಟ: ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಅಕ್ಷಯ್, ಅಜಯ್, ಕರೀನಾ ಪ್ರಾರ್ಥನೆ
ಉತ್ತರಾಖಂಡದ ಚಮೋಲಿ ಜಿಲ್ಲಿಯ ಜೋಶಿಮಠದಲ್ಲಿ ಸಂಭವಿಸಿದ ಹಿಮನದಿ ಸ್ಫೋಟದಿಂದ 7 ಮಂದಿ ಮೃಪಟ್ಟಿದ್ದು, 125ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಕಣ್ಮರೆಯಾದವರನ್ನು ಪತ್ತೆ ಹಚ್ಚಲು ಶೋಧಕಾರ್ಯ ನಡೆಯುತ್ತಿದೆ.
ನೈಸರ್ಗಿಕ ವಿಪತ್ತಿಗೆ ಸಿಲುಕಿ ಬಳಲುತ್ತಿರುವವರಿಗೆ ಅನೇಕರು ಪ್ರಾರ್ಥನೆ ಮಾಡುತ್ತಿದ್ದಾರೆ. ಬೇರೆ ಬೇರೆ ಕ್ಷೇತ್ರದ ಗಣ್ಯರು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅನೇಕರು ವಿಪತ್ತು ನಿರ್ವಹಣಾ ಅಧಿಕಾರಿಗಳ ಸಂಪರ್ಕ ಸಂಖ್ಯೆ ಮತ್ತು ಇತರ ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.
'ವಿದೇಶಿ ಪ್ರಜೆ ಅಕ್ಷಯ್ ಕುಮಾರ್ ಭಾರತದ ಆಂತರಿಕ ವಿಷಯದಲ್ಲಿ ಮೂಗುತೂರಿಸುವುದೇಕೆ'
ಬಾಲಿವುಡ್ ನಟಿ ಕರೀನಾ ಕಪೂರ್ ಸಹ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರಿನಾ, ಉತ್ತರಾಖಂಡದಲ್ಲಿ ಭೀಕರ ದುರಂತದಿಂದ ಬಳಲುತ್ತಿರುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆ ಎಂದು ಹೇಳಿದ್ದಾರೆ.
ಅನೇಕರು ಟ್ವೀಟ್ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ದುರಂತದಲ್ಲಿ ಬಲಿಯಾದವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ದುರಂತದಲ್ಲಿ ಸಿಲುಕಿದವರು ಸುರಕ್ಷತೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅಕ್ಷಯ್ ಕುಮಾರ್, ಅಜಯ್ ದೇವಗನ್, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್, ತಮನ್ನಾ ಭಾಟಿಯಾ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಹಿಮನದಿ ಸ್ಫೋಟದಿಂದ ಬಾರಿ ದುರಂತ ಸಂಭವಿಸಿದ್ದು, ವಿದ್ಯುತ್ ಯೋಜನೆಯ ಅಣೆಕಟ್ಟೆಯೂ ಈ ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಹಲವು ಕಾರ್ಮಿಕರು ಕೊಚ್ಚಿಹೋಗಿದ್ದಾರೆ.