Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ನಟ ಅಕ್ಷಯ್ ಕುಮಾರ್; ಕಾರಣವೇನು?
ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಇತ್ತೀಚಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ಅಕ್ಷಯ್ ಕುಮಾರ್ ಮತ್ತು ಆದಿತ್ಯನಾಥ್ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಮುಂಬೈನ ಟ್ರಿಡೆಂಟ್ ಹೋಟೆಲ್ ನಲ್ಲಿ ಬುಧವಾರ ಇಬ್ಬರು ಭೇಟಿಯಾಗಿದ್ದು, ಫಿಲ್ಮ್ ಸಿಟಿ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಕ್ಷಯ್ ಕುಮಾರ್ ಮತ್ತು ಸಿಎಂ ಮಾತುಕತೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನೋಯ್ಡಾದಲ್ಲಿ ಹೈಟೆಕ್ ಫಿಲ್ಮ್ ಸಿಟಿ ನಿರ್ಮಾಣವಾಗುತ್ತಿದ್ದು, ಈ ವಿಚಾರವಾಗಿ ಅಕ್ಷಯ್ ಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಅಕ್ಷಯ್ ಕುಮಾರ್ ಮಾತ್ರವಲ್ಲದೆ ಬಾಲಿವುಡ್ ನ ಖ್ಯಾತ ಕಲಾವಿದರ ಜೊತೆ ಮಾತುಕತೆ ನಡೆಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರಂತೆ.
ಅಕ್ಷಯ್ ಕುಮಾರ್ 'ಬಚ್ಚನ್ ಪಾಂಡೆ' ತಂಡ ಸೇರಿದ ಮತ್ತೊಬ್ಬ ಸ್ಟಾರ್ ನಟಿ
ಫಿಲ್ಮ್ ಸಿಟಿ ಯೋಜನೆಗೆ ಆಕಾರ ನೀಡುವಂತೆ ಬಾಲಿವುಡ್ ಖ್ಯಾತ ನಾಮರು ಮತ್ತು ಉದ್ಯಮಿಗಳನ್ನು ಭೇಟಿಯಾಗುತ್ತಿದ್ದಾರೆ. ಈಗಾಗಲೇ ಫಿಲ್ಮ್ ಸಿಟಿ ಯೋಜನೆ ಪ್ರಾರಂಭ ಮಾಡಿರುವ ಸಿಎಂ, ಈ ವಿಚಾರವಾಗಿ ಅನೇಕರ ಜೊತೆ ಸಭೆ ಶುರು ಮಾಡಿದ್ದಾರೆ.
ಆದಿತ್ಯನಾಥ್ ಭೇಟಿಗೆ ತೆರಳಿದ ಅಕ್ಷಯ್ ಕುಮಾರ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಭದ್ರತಾ ಸಿಬ್ಬಂದಿಯೊಂದಿಗೆ ಹೋಟೆಲ್ ಒಳಗೆ ಪ್ರವೇಶ ಮಾಡುತ್ತಿರುವುದು ಮತ್ತು ಆದಿತ್ಯನಾಥ್ ಜೊತೆ ಮಾತುಕತೆ ನಡೆಸುತ್ತಿರುವ ಅಕ್ಷಯ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಅಕ್ಷಯ್ ಕುಮಾರ್ ಬಳಿಕ ಯಾವೆಲ್ಲ ಸ್ಟಾರ್ ನಟರನ್ನು ಭೇಟಿಯಾಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಬಾಲಿವುಡ್ ನಿಂದ ಒಟ್ಟು 41 ಖ್ಯಾತನಾಮರ ಜೊತೆ ಮಾತುಕತೆ ನಡೆಸಲು ಪಟ್ಟಿಸಿದ್ಧವಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
Recommended Video
ಅಂದಹಾಗೆ ಅಕ್ಷಯ್ ಇತ್ತೀಚಿಗೆ ಲಕ್ಷ್ಮೀ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ಬೆಲ್ ಬಾಟಮ್ ಮತ್ತು ಸೂರ್ಯವಂಶಿ ಸಿನಿಮಾಗಳ ಶೂಟಿಂಗ್ ಮುಗಿಸಿರುವ ಅಕ್ಷಯ್, ಪೃಥ್ವಿರಾಜ್, ಬಚ್ಚನ್ ಪಾಂಡೆ, ಅತ್ರಂಗಿ ರೇ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.