Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
26/11 ಮುಂಬೈ ದಾಳಿ ಕೃತ್ಯಕ್ಕೆ 12 ವರ್ಷ; ಹುತಾತ್ಮ ಯೋಧರಿಗೆ ಅಕ್ಷಯ್ ಕುಮಾರ್ ಗೌರವ ನಮನ
ನವೆಂಬರ್ 26 ಭಾರತೀಯರು ಮರೆಯಲಾಗದ ದಿನವಿದು. ಇವತ್ತಿಗೆ ಸರಿಯಾಗಿ 12ವರ್ಷಗಳ ಹಿಂದೆ ಮುಂಬೈನ ಹಲವಾರು ಪ್ರದೇಶಗಳ ಮೇಲೆ ಭಯೋತ್ಪಾದಕರು ಏಕಕಾಲಕ್ಕೆ ಬಾಂಬ್ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಗುರುವಾರ ಗೌರವ ನಮನ ಸಲ್ಲಿಸಲಾಗುತ್ತಿದೆ.
2008ರ ನವೆಂಬರ್ 26ರಂದು ನಡೆದ ಘಟನೆಯಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಹುತಾತ್ಮರಾಗಿದ್ದ ಯೋಧರು, ಪೊಲೀಸ್ ಸಿಬ್ಬಂದಿಯ ತ್ಯಾಗವನ್ನು ಸ್ಮರಿಸಿ ಹಲವು ಪ್ರಮುಖಕರು ನುಡಿನಮನ ಸಲ್ಲಿಸಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಅಕ್ಷಯ್ ಕುಮಾರ್ ಗೆ ಕಾನೂನು ಕ್ರಮದ ಬೆದರಿಕೆ ಹಾಕಿದ ಯೂಟ್ಯೂಬರ್
ಈ ಬಗ್ಗೆ ಟ್ವೀಟ್ ಮಾಡಿರುವ ಅಕ್ಷಯ್ ಕುಮಾರ್ '26/11 ದಿನವನ್ನು ಮುಂಬೈಯಿಗರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮುಂಬೈ ಭಯೋತ್ಪಾದಕರ ದಾಳಿಯಲ್ಲಿ ಹೋರಾಡಿ ಹುತಾತ್ಮರಾದ ಯೋಧರಿಗೆ ನನ್ನ ಗೌರವ. ಧೈರ್ಯಶಾಲಿ ಯೋಧರ ತ್ಯಾಗಕ್ಕೆ ನಾವು ಶಾಶ್ವತವಾಗಿ ಚಿರಋಣಿಯಾಗಿರುತ್ತೇವೆ' ಎಂದು ಟ್ವೀಟ್ ಮಾಡಿದ್ದಾರೆ.
Recommended Video
12 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಸಮುದ್ರ ಮಾರ್ಗದಲ್ಲಿ ಬಂದಿದ್ದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರರು ಮುಂಬೈಮೇಲೆ ದಾಳಿ ಮಾಡಿದ್ದರು. ಸುಮಾರು 60 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಲಾಗಿತ್ತು. 18 ಭದ್ರತಾ ಸಿಬ್ಬಂದಿ ಸೇರಿ 166 ಜನರು ಮೃತಪಟ್ಟಿದ್ದರು.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ಒಬೆರಾಯ್ ಟ್ರಿಡೆಂಟ್ ತಾರಾ ಹೋಟೆಲ್, ಲಿಯೋಪೋಲ್ಡ್ ಕೆಫೆ, ನಾರಿ ಮನ್ ಹೌಸ್ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ ಜೀವಂತವಾಗಿ ಸಿಕ್ಕಿಬಿದ್ದ ಉಗ್ರ ಅಜ್ಮಲ್ ಕಸಬ್ ನನ್ನು 2012ರಲ್ಲಿ ನವೆಂಬರ್ 21ರಂದು ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿತ್ತು.