Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಳಿಲು, ವಾನರರಾಗೋಣ: ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿ ಎಂದ ಅಕ್ಷಯ್
ಸುಪ್ರೀಂಕೋರ್ಟ್ ಮಹತ್ವದ ತೀರ್ಪಿನ ನಂತರ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಸಲುವಾಗಿ 'ಸಮರ್ಪಣಾ ಅಭಿಯಾನ' ದೇಶದಾದ್ಯಂತ ನಡೆಯುತ್ತಿದ್ದು, ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಸಹ ದೇಣಿಗೆ ನೀಡುತ್ತಿದ್ದಾರೆ.
ಅಗಲಿದ ತಾಯಿಗಾಗಿ ಗುಡಿ ಕಟ್ಟಿದ ಕನ್ನಡದ ನಟ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದು, ಸರ್ವರೂ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿರುವ ಅಕ್ಷಯ್ ಕುಮಾರ್, ರಾಮ ಸೇತು ನಿರ್ಮಾಣ ಸಮಯದಲ್ಲಿ ಅಳಿಲು ಮಾಡಿದ ಸೇವೆಯ ಕತೆ ಹೇಳಿ. ವಾನರರು ಕಲ್ಲು ತಂದು ಸೇತುವೆ ಕಟ್ಟುವ ಸಮಯದಲ್ಲಿ ಅಳಿಲು ತನ್ನ ಕೈಲಾದ ಮಟ್ಟಿಗೆ ಮರಳು ಹೊತ್ತು ತಂದು ರಾಮಸೇತು ಕಟ್ಟಲು ನೆರವಾಯ್ತು, ಹಾಗೆಯೇ ನಾವು ಸಹ ವಾನರರಾಗೋಣ, ಅಳಿಲಾಗೋಣ ರಾಮ ಮಂದಿರ ನಿರ್ಮಾಣದಲ್ಲಿ ನಮ್ಮ ಕೈಜೋಡಿಸೋಣ ಎಂದು ಹೇಳಿದ್ದಾರೆ.
ಕನ್ನಡತಿ, ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಕೆಲವು ದಿನಗಳ ಹಿಂದಷ್ಟೆ 1 ಲಕ್ಷ ರೂಪಾಯಿ ಹಣ ದೇಣಿಗೆ ನೀಡಿದ್ದರು. ಉಳ್ಳವರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿ ಎಂದು ಮನವಿ ಮಾಡಿಕೊಂಡಿದ್ದರು.
ಮಹಾನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ
Recommended Video
ಮಾಧ್ಯಮ ಸಂಸ್ಥೆ ಎಎನ್ಐ ಹೇಳಿರುವಂತೆ ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ 100 ಕೋಟಿ ರೂಪಾಯಿ ಹಣ ಕ್ರೂಡೀಕರಣ ಆಗಿದೆಯಂತೆ.