Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾನು ಧರಿಸಿದ್ದ ಬಟ್ಟೆಯನ್ನು ಹರಾಜಿಗೆ ಇಟ್ಟ ಅಕ್ಷಯ್ ಕುಮಾರ್
ಸಿನಿಮಾದಲ್ಲಿ ನಟ, ನಟಿಯರು ಬಳಸಿರುವ ಬಟ್ಟೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇರುತ್ತದೆ. ಅದೇ ರೀತಿ ಅಭಿಮಾನಿಗಳು ಬೆಲೆ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸ್ಟಾರ್ ಗಳ ವಸ್ತುಗಳನ್ನು ಖರೀದಿಸುತ್ತಾರೆ. ಈಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾವು ತೊಟ್ಟಿದ್ದ ಬಟ್ಟೆಯನ್ನು ಹಾರಾಜಿಗೆ ಇಟ್ಟಿದ್ದಾರೆ.
ಅಕ್ಷಯ್ ಕುಮಾರ್ ಬಟ್ಟೆ ಹಾರಾಜಿಗೆ ಇಟ್ಟಿರುವ ಹಿಂದೆ ಒಂದು ಒಳ್ಳೆಯ ಉದ್ದೇಶ ಇದೆ. ಪ್ರಾಣಿಗಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಅಕ್ಷಯ್ ಕುಮಾರ್ ಈ ಕೆಲಸ ಮಾಡುತ್ತಿದ್ದಾರೆ. 'ರುಸ್ತುಂ' ಚಿತ್ರದಲ್ಲಿ ತಾವು ಧರಿಸಿದ್ದ ನೇವಿ ಆಫೀಸರ್ ಯೂನಿಫಾರಂ ಅನ್ನು ಅಕ್ಷಯ್ ಈಗ ಬಿಡ್ ಮಾಡಿದ್ದಾರೆ. ಹರಾಜಿನಿಂದ ಬರುವ ಹಣವನ್ನು ಪ್ರಾಣಿಗಳ ರಕ್ಷಣೆಗಾಗಿ ಬಳಸಲಾಗುವುದಾಗಿ ಅಕ್ಷಯ್ ಹೇಳಿದ್ದಾರೆ.
ಇತ್ತೀಚಿಗೆ ಒಂದರ ನಂತರ ಒಂದರಂತೆ ಸಾಮಾಜಿಕ ಸಂದೇಶ ಹೊಂದಿರುವ ಸಿನಿಮಾ ಮಾಡುತ್ತಿರುವ ಅಕ್ಷಯ್ ಅದೇ ರೀತಿ ಸಮಾಜಮುಖಿ ಕೆಲಸ ಮಾಡುತ್ತಾರೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಬರಪೀಡಿತ ಪ್ರದೇಶದ ರೈತರ ನೆರವಿಗೆ 90 ಲಕ್ಷ ರೂ. ಧನ ಸಹಾಯ, ಅಭಿಮಾನಿಯೊಬ್ಬರ ತಂದೆಯ ಆಸ್ಪತ್ರೆ ಖರ್ಚಿಗಾಗಿ 25 ಲಕ್ಷ ರೂ ಸಹಾಯ, ಮಹಿಳೆಯರ ಆತ್ಮರಕ್ಷಣೆಗಾಗಿ ಮಾರ್ಷಲ್ ಆರ್ಟ್ ಸ್ಕೂಲ್ ಸ್ಥಾಪನೆ ಸೇರಿದಂತೆ ಸಾಕಷ್ಟು ಒಳ್ಳೆ ಒಳ್ಳೆಯ ಕೆಲಸವನ್ನು ಅಕ್ಷಯ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ' ಸೆಟ್ ನಲ್ಲಿ ಅಗ್ನಿ ಅವಘಡ.!
ಅಕ್ಷಯ್ ಕುಮಾರ್ 'ಪ್ಯಾಡ್ ಮ್ಯಾನ್' ಸಿನಿಮಾದ ಗೆಲುವಿನ ನಂತರ ನಾಲ್ಕು ಹೊಸ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅಕ್ಷಯ್ ಮತ್ತು ರಜನಿಕಾಂತ್ ಕಾಂಬಿನೇಶನ್ ನಲ್ಲಿ ಬರುತ್ತಿರುವ '2.0' ಇದೇ ವರ್ಷ ಬಿಡುಗಡೆಯಾಗಲಿದೆ.