Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾನು ಧರಿಸಿದ್ದ ಬಟ್ಟೆಯನ್ನು ಹರಾಜಿಗೆ ಇಟ್ಟ ಅಕ್ಷಯ್ ಕುಮಾರ್
ಸಿನಿಮಾದಲ್ಲಿ ನಟ, ನಟಿಯರು ಬಳಸಿರುವ ಬಟ್ಟೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇರುತ್ತದೆ. ಅದೇ ರೀತಿ ಅಭಿಮಾನಿಗಳು ಬೆಲೆ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸ್ಟಾರ್ ಗಳ ವಸ್ತುಗಳನ್ನು ಖರೀದಿಸುತ್ತಾರೆ. ಈಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾವು ತೊಟ್ಟಿದ್ದ ಬಟ್ಟೆಯನ್ನು ಹಾರಾಜಿಗೆ ಇಟ್ಟಿದ್ದಾರೆ.
ಅಕ್ಷಯ್ ಕುಮಾರ್ ಬಟ್ಟೆ ಹಾರಾಜಿಗೆ ಇಟ್ಟಿರುವ ಹಿಂದೆ ಒಂದು ಒಳ್ಳೆಯ ಉದ್ದೇಶ ಇದೆ. ಪ್ರಾಣಿಗಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಅಕ್ಷಯ್ ಕುಮಾರ್ ಈ ಕೆಲಸ ಮಾಡುತ್ತಿದ್ದಾರೆ. 'ರುಸ್ತುಂ' ಚಿತ್ರದಲ್ಲಿ ತಾವು ಧರಿಸಿದ್ದ ನೇವಿ ಆಫೀಸರ್ ಯೂನಿಫಾರಂ ಅನ್ನು ಅಕ್ಷಯ್ ಈಗ ಬಿಡ್ ಮಾಡಿದ್ದಾರೆ. ಹರಾಜಿನಿಂದ ಬರುವ ಹಣವನ್ನು ಪ್ರಾಣಿಗಳ ರಕ್ಷಣೆಗಾಗಿ ಬಳಸಲಾಗುವುದಾಗಿ ಅಕ್ಷಯ್ ಹೇಳಿದ್ದಾರೆ.
ಇತ್ತೀಚಿಗೆ ಒಂದರ ನಂತರ ಒಂದರಂತೆ ಸಾಮಾಜಿಕ ಸಂದೇಶ ಹೊಂದಿರುವ ಸಿನಿಮಾ ಮಾಡುತ್ತಿರುವ ಅಕ್ಷಯ್ ಅದೇ ರೀತಿ ಸಮಾಜಮುಖಿ ಕೆಲಸ ಮಾಡುತ್ತಾರೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಬರಪೀಡಿತ ಪ್ರದೇಶದ ರೈತರ ನೆರವಿಗೆ 90 ಲಕ್ಷ ರೂ. ಧನ ಸಹಾಯ, ಅಭಿಮಾನಿಯೊಬ್ಬರ ತಂದೆಯ ಆಸ್ಪತ್ರೆ ಖರ್ಚಿಗಾಗಿ 25 ಲಕ್ಷ ರೂ ಸಹಾಯ, ಮಹಿಳೆಯರ ಆತ್ಮರಕ್ಷಣೆಗಾಗಿ ಮಾರ್ಷಲ್ ಆರ್ಟ್ ಸ್ಕೂಲ್ ಸ್ಥಾಪನೆ ಸೇರಿದಂತೆ ಸಾಕಷ್ಟು ಒಳ್ಳೆ ಒಳ್ಳೆಯ ಕೆಲಸವನ್ನು ಅಕ್ಷಯ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ' ಸೆಟ್ ನಲ್ಲಿ ಅಗ್ನಿ ಅವಘಡ.!
ಅಕ್ಷಯ್ ಕುಮಾರ್ 'ಪ್ಯಾಡ್ ಮ್ಯಾನ್' ಸಿನಿಮಾದ ಗೆಲುವಿನ ನಂತರ ನಾಲ್ಕು ಹೊಸ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅಕ್ಷಯ್ ಮತ್ತು ರಜನಿಕಾಂತ್ ಕಾಂಬಿನೇಶನ್ ನಲ್ಲಿ ಬರುತ್ತಿರುವ '2.0' ಇದೇ ವರ್ಷ ಬಿಡುಗಡೆಯಾಗಲಿದೆ.