Don't Miss!
- News ಬೆಂಗಳೂರಿನಲ್ಲಿ 647 ಎಕರೆಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಕೆಐಎಡಿಬಿ ಯೋಜನೆ
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಟ್ರೋದಲ್ಲಿ ಪ್ರಯಾಣಿಸಿದ ಅಕ್ಷಯ್ ಕುಮಾರ್: ಯಾರೂ ಕಂಡುಹಿಡಿದಿಲ್ಲ
Recommended Video
ಮೆಟ್ರೋ ವಿರೋಧಿಸಿ ಸಾಮಾಜಿಕ ಹೋರಾಟಗಾರರು, ಪರಿಸರ ಪ್ರೇಮಿಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ, ಮೆಟ್ರೋ ಪ್ರಯಾಣ ಮಾಡಿ ಪ್ರತಿಭಟನೆಕಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ನಟ ಅಕ್ಷಯ್ ಕುಮಾರ್.
''ಘಾಟ್ ಕೋಪರ್ ನಿಂದ ವರ್ಸೋವಾಗೆ 'ಬಾಸ್ ರೀತಿ' ಮುಂಬೈ ಮೆಟ್ರೋದಲ್ಲಿ ಪ್ರಯಾಣ ಮಾಡುವ ಮೂಲಕ ಅತಿ ಹೆಚ್ಚು ಟ್ರಾಫಿಕ್ ಗೆ ಸೆಡ್ಡು ಹೊಡೆದೆ'' ಎಂದು ಅಕ್ಷಯ್ ಕುಮಾರ್ ಮೆಟ್ರೋದಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.
''ಘಾಟ್ ಕೋಪರ್ ದಲ್ಲಿ ಚಿತ್ರೀಕರಣ ಮುಗಿಸಿ ವರ್ಸೋವಾಗೆ ಹೋಗಬೇಕಿತ್ತು. 13 ಕಿಮೀ ದೂರ ಇತ್ತು. ನನ್ನ ಮ್ಯಾಪ್ ನಲ್ಲಿ ನೋಡಿದಾಗ 2 ಗಂಟೆ ಸಮಯ ಬೇಕು ಎಂದು ತೋರಿಸುತ್ತಿತ್ತು. ಇಂತಹ ಸಮಯದಲ್ಲಿ ನನ್ನ ನಿರ್ದೇಶಕ ರಾಜ್ ಮೆಹ್ತಾ ಮೆಟ್ರೋದಲ್ಲಿ ಹೋಗು ಎಂದರು. ಜನ ಹೆಚ್ಚು ಇರ್ತಾರೆ ಹೇಗೆ ಎಂದು ಪ್ರಶ್ನಿಸಿದ್ದಕ್ಕೆ ಟ್ರೈ ಮಾಡು ಎಂದರು, ಅದಕ್ಕೆ ಬಂದೆ'' ಎಂದು ಅಕ್ಷಯ್ ಕುಮಾರ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಈ ವಿಡಿಯೋವನ್ನ ಕೂಡ ಮೆಟ್ರೋ ರೈಲಿನ ಒಳಗಡೆಯೇ ಮಾಡಿದ್ದಾರೆ.
ಅಮಿತಾಭ್ ಬಚ್ಚನ್ ಟ್ವೀಟ್ ವಿರೋಧಿಸಿ ಮನೆ ಮುಂದೆ ಪ್ರತಿಭಟನೆ
ಅಕ್ಷಯ್ ಕುಮಾರ್ ಅವರು ಮೆಟ್ರೋದಲ್ಲಿ ಪ್ರಯಾಣ ಮಾಡುವ ಮೂಲಕ ಮುಂಬೈ ಮೆಟ್ರೋಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರರು ಟೀಕಿಸುತ್ತಿದ್ದಾರೆ.
ಮೆಟ್ರೋ ಕಾಮಗಾರಿ ಹಿನ್ನಲೆ ಅರೇ ಕಾಲೋನಿಯಲ್ಲಿ ಸುಮಾರು 2600ಕ್ಕೂ ಅಧಿಕ ಗಿಡಮರಗಳನ್ನ ಕಡಿಯಲು ಮುಂಬೈ ಮಹಾನಗರ ಪಾಲಿಕೆ ಮುಂದಾಗಿದೆ. ಇದನ್ನ ಖಂಡಿಸಿ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಅಮಿತಾಭ್ ಬಚ್ಚನ್ ಕೂಡ ಮುಂಬೈ ಮೆಟ್ರೋ ಬೆಂಬಲಿಸಿದ್ದಕ್ಕೆ ಅವರ ಮನೆ ಮುಂದೆ ಪ್ರತಿಭಟನೆ ಮಾಡಲಾಗಿತ್ತು.