Don't Miss!
- News Voter Guide: ಮತದಾನ ಮಾಡುವ ಮುನ್ನ ಈ ಅಂಶಗಳ ಬಗ್ಗೆ ಗಮನವಿರಲಿ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀರು ಮಿತಬಳಕೆ ಜಾಗೃತಿ ಮೂಡಿಸಲು 21 ಕಿ.ಮೀ ನಡೆದ ಅಕ್ಷಯ್ ಕುಮಾರ್
ನಟ ಅಕ್ಷಯ್ ಕುಮಾರ್ ಸಿನಿಮಾಗಳ ಜೊತೆಗೆ ಹಲವು ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸರ್ಕಾರದ ಕೆಲವು ಜನೋಪಯೋಗಿ ಕಾರ್ಯಗಳಿಗೆ ರಾಯಭಾರಿ ಸಹ ಆಗಿದ್ದಾರೆ ಅಕ್ಷಯ್ ಕುಮಾರ್.
ಇದೀಗ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಬರೋಬ್ಬರಿ 21 ಕಿ.ಮೀ ನಡೆದಿದ್ದಾರೆ ನಟ ಅಕ್ಷಯ್ ಕುಮಾರ್.
ನೀರಿನ ಅಭಾವ ಎಂಬುದು ಬಹು ಭೀಕರವಾಗಿರುತ್ತದೆ. ಇಂದು ನೀರಿನ ಸಂರಕ್ಷಣೆ ಮಾಡದಿದ್ದಲ್ಲಿ ನಮ್ಮ ಭವಿಷ್ಯ ಭೀಕರವಾಗಲಿದೆ ಎಂದಿರುವ ನಟ ಅಕ್ಷಯ್ ಕುಮಾರ್. ನೀರಿನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲೆಂದು ಟ್ರೆಡ್ಮೀಲ್ ಮೇಲೆ 21 ಕಿ.ಮೀ ಕ್ರಮಿಸಿದ್ದಾರೆ.
ಮಹಿಳೆಯರು ಕುಡಿಯುವ ನೀರಿಗಾಗಿ ಹಲವಾರು ಕಿಲೋ ಮೀಟರ್ ಕ್ರಮಿಸುವ ಪರಿಸ್ಥಿತಿ ಹಲವು ಗ್ರಾಮಗಳಲ್ಲಿ ಇದೆ ಮಹಿಳೆಯರ ಆ ಶ್ರಮವನ್ನು ಪ್ರತಿನಿಧಿಸಲು ಅಕ್ಷಯ್ ಕುಮಾರ್ ಟ್ರೆಡ್ಮಿಲ್ ಮೇಲೆ 21 ಕಿ.ಮೀ ನಡೆದಿದ್ದಾರೆ.
ಆದರೆ ನಟ ಅಕ್ಷಯ್ ಕುಮಾರ್ ಅವರ ಈ ಟ್ರೆಡ್ ಮಿಲ್ ನಡಿಗೆಗೆ ಹಲವರು ಟೀಕೆಯನ್ನೂ ಮಾಡಿದ್ದಾರೆ. ನಾಲ್ಕು ಗೋಡೆ ಟ್ರೆಡ್ಮಿಲ್ ಮೇಲೆ ನಡೆಯುವುದರಿಂದ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. ಅಕ್ಷಯ್, ತಮ್ಮ ಅನುಕೂಲಕ್ಕೆ ತಕ್ಕಂತೆ 'ಜಾಗೃತಿ ಕಾರ್ಯಕ್ರಮ' ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಕೆಲವು ನೆಟ್ಟಿಗರು.
Recommended Video
ಬಾಲಿವುಡ್ ನ ಹಲವು ನಟರು ನೀರಿನ ಮಿತಬಳಕೆ ಹಾಗೂ ಜನಮೂಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ನಟ ಅಮೀರ್ ಖಾನ್ ನಡೆಸುವ 'ವಾಟರ್ ಕಪ್' ನೀರು ಕುರಿತ ಜಾಗೃತಿ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಕಾರ್ಯಕ್ರಮ ಎನ್ನಲಾಗುತ್ತದೆ.