Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾಕಾಳೇಶ್ವರ ದೇವಾಲಯ ಪ್ರವೇಶಿಸದಂತೆ ಆಲಿಯಾ-ರಣ್ಬೀರ್ಗೆ ತಡೆ
'ಬ್ರಹ್ಮಾಸ್ತ್ರ' ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಆಲಿಯಾ ಭಟ್ ಹಾಗೂ ರಣ್ಬೀರ್ ಕಪೂರ್ ಅವರು ನಿನ್ನೆ (ಸೆಪ್ಟೆಂಬರ್ 06) ರ ರಾತ್ರಿ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಅವರುಗಳು ದೇವಾಲಯ ಪ್ರವೇಶದಂತೆ ಹಿಂದು ಸಂಘಟನೆಗಳ ಕಾರ್ಯಕರ್ತರು ತಡೆದಿದ್ದಾರೆ.
ರಣ್ಬೀರ್ ಕಪೂರ್, ಆಲಿಯಾ ಭಟ್ ಹಾಗೂ ನಿರ್ದೇಶಕ ಅಯಾನ್ ಮುಖರ್ಜಿ ಒಟ್ಟಿಗೆ ನಿನ್ನೆ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ದೇವಾಲಯದ ಆವರಣದಲ್ಲಿಯೇ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು ರಣ್ಬೀರ್ ಹಾಗೂ ಆಲಿಯಾ ಭಟ್ ದೇವಾಲಯ ಪ್ರವೇಶದಂತೆ ತಡೆದರು.
ರಣ್ಬೀರ್ ಕಪೂರ್ ಈ ಹಿಂದೆ ತಾವು ಬೀಫ್ ತಿನ್ನುವುದಾಗಿ ನೀಡಿದ್ದ ಹೇಳಿಕೆಯಿಂದಾಗಿ ಅವರು ಮಹಾಕಾಳೇಶ್ವರ ದೇವಾಲಯ ಪ್ರವೇಶಿಸಬಾರದು ಎಂದು ಭಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ರಣ್ಬೀರ್ ಹಾಗೂ ಆಲಿಯಾ ವಿರುದ್ಧ ಘೋಷಣೆಗಳನ್ನು ಕೂಗಿರುವ ಭಜರಂಗದಳ ಕಾರ್ಯಕರ್ತರು, 'ಜೈ ಶ್ರೀರಾಮ್' ಘೋಷಣೆಗಳನ್ನು ಸಹ ಕೂಗಿದ್ದಾರೆ.
ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ರಣ್ಬೀರ್ ಕಪೂರ್, ತಮಗೆ, ಚಿಕನ್, ಮಟನ್ ಹಾಗೂ ಬೀಫ್ ಆಹಾರಗಳು ತಿನ್ನಲು ಇಷ್ಟವೆಂದು ಹೇಳಿಕೊಂಡಿದ್ದರು. ದನದ ಮಾಂಸ ತಿನ್ನುವ ವ್ಯಕ್ತಿ ದೇವಾಲಯಕ್ಕೆ ಪ್ರವೇಶಿಸಬಾರದು ಎಂದು ಭಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಲಿಯಾ ಭಟ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಭಜರಂಗ ದಳ ಕಾರ್ಯಕರ್ತರು, ಆಲಿಯಾ ಭಟ್ ಕೆಲವು ದಿನಗಳ ಹಿಂದೆ, 'ನಾನು ಇಷ್ಟ ಇಲ್ಲದಿದ್ದರೆ ನನ್ನ ಸಿನಿಮಾ ನೋಡಬೇಡಿ' ಎಂದು ಹೇಳಿದ್ದನ್ನು ವಿರೋಧಿಸಿದ್ದಾರೆ.
ಆಲಿಯಾ ಹಾಗೂ ರಣ್ಬೀರ್ಗೆ ದೇವಾಲಯ ಪ್ರವೇಶಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 'ಬ್ರಹ್ಮಾಸ್ತ್ರ' ಸಿನಿಮಾದ ನಿರ್ದೇಶಕ ಅಯಾನ್ ಮುಖರ್ಜಿ ಮಾತ್ರವೇ ದೇವಾಲಯ ಪ್ರವೇಶಿಸಿದ್ದು, ದೇವರ ದರ್ಶನ ಪಡೆದಿದ್ದಾರೆ. ತಾವು ದೇವರ ದರ್ಶನ ಪಡೆದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ''ಇಂದು ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ತುಂಬಾ ಸಂತೋಷ ಮತ್ತು ಚೈತನ್ಯವನ್ನು ಅನುಭವಿಸಿದೆ. ಅತ್ಯಂತ ಸಂತೃಪ್ತಿಕರ ದರ್ಶನವನ್ನು ಪಡೆದುಕೊಂಡೆ. ಬ್ರಹ್ಮಾಸ್ತ್ರ ಚಲನಚಿತ್ರ ನಿರ್ಮಾಣದ ಪ್ರಯಾಣವನ್ನು ಮುಗಿಸಲು ಹಾಗೂ ನಮ್ಮ ಸಿನಿಮಾದ ಬಿಡುಗಡೆಗೆ ಸಕಾರಾತ್ಮಕ ಶಕ್ತಿ ಮತ್ತು ಆಶೀರ್ವಾದವನ್ನು ಪಡೆಯಲು ಈ ಭೇಟಿ ಅವಶ್ಯಕವಾಗಿತ್ತು'' ಎಂದಿದ್ದಾರೆ.
'ಬ್ರಹ್ಮಾಸ್ತ್ರ' ಸಿನಿಮಾವು ಶಿವನ ಶಕ್ತಿಯ ಕುರಿತಾದ ಸಿನಿಮಾ ಆಗಿದ್ದು ಸಿನಿಮಾದಲ್ಲಿ ರಣ್ಬೀರ್ ಕಪೂರ್, ಆಲಿಯಾ ಭಟ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಅಮಿತಾಬ್ ಬಚ್ಚನ್, ತೆಲುಗು ನಟ ನಾಗಾರ್ಜು, ಕೆಜಿಎಫ್ ಸುಂದರಿ ಮೌನಿ ರಾಯ್, ಅತಿಥಿ ಪಾತ್ರದಲ್ಲಿ ಶಾರುಖ್ ಖಾನ್ ನಟಿಸಿದ್ದಾರೆ. ಸಿನಿಮಾವು ಸೆಪ್ಟೆಂಬರ್ 09 ರಂದು ಬಿಡುಗಡೆ ಆಗಲಿದೆ.