Don't Miss!
- News ಹೈಕಮಾಂಡ್, ವಿಜಯೇಂದ್ರ ಕರೆ; ಆಫರ್ ಒಪ್ಪದ ಡಿವಿಎಸ್!
- Sports ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುವುದು ಯಾವಾಗ? ಎಲ್ಲಿ ನಡೆಯಲಿದೆ ಈ ಬಾರಿಯ ಸರಣಿ
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯದ ಕಿಕ್ಕೇರಿ ಗ್ರಾಮದ ಜನರಿಗೆ ಬೆಳಕಾದ ನಟಿ ಅಲಿಯಾ ಭಟ್
ಸಿನಿಮಾ ನಟ ನಟಿಯರು ತಮ್ಮ ಸಮಾಜಮುಖಿ ಕೆಲಸಗಳ ಮೂಲಕ ಜನರಿಗೆ ಹತ್ತಿರ ಆಗುತ್ತಾರೆ. ಈಗ ಬಾಲಿವುಡ್ ನಟಿ ಅಲಿಯಾ ಭಟ್ ಕೂಡ ಕನ್ನಡಿಗರ ಪ್ರೀತಿಗೆ ಪಾತ್ರವಾಗಿದ್ದಾರೆ. ಅವರ ಕೆಲಸವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ.
ನಟಿ ಅಲಿಯಾ ಭಟ್ ಇದೀಗ ಮಂಡ್ಯದ ಕಿಕ್ಕೇರಿ ಗ್ರಾಮಕ್ಕೆ ಬೆಳಕು ನೀಡಿದ್ದಾರೆ. ಬೆಂಗಳೂರಿನ ಎ.ಆರ್.ಓ.ಎಚ್.ಎ ಸಂಸ್ಥೆ ಪ್ಲಾಸ್ಟಿಕ್ ಬಾಟಲ್ಗಳನ್ನ ಮರುಬಳಕೆ ಮಾಡಿ ವಿದ್ಯುತ್ ಇಲ್ಲದ ಹಳ್ಳಿಯ ಮನೆಗಳಿಗೆ ಸೋಲಾರ್ ಲೈಟ್ ಅನ್ನು ಒದಗಿಸುತ್ತಿದೆ. ಈ ಸಂಸ್ಥೆ ಇತ್ತೀಚೆಗಷ್ಟೆ 'ಲಿಟರ್ ಆಫ್ ಲೈಟ್' ಎಂಬ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಅಲಿಯಾ ಚಾರಿಟಿ ನೀಡಿದ್ದರು.
'ಮಿ ವಾರ್ಡ್ ರೋಬ್ ಈಸ್ ಸು ವಾರ್ಡ್ ರೋಬ್' ಕಾರ್ಯಕ್ರಮದಲ್ಲಿ ಆಲಿಯಾ ಭಟ್ ತಮ್ಮ ಡಿಸೈನರ್ ಬಟ್ಟೆಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿದ್ದರು. ಇದರಿಂದ ಬಂದ ಹಣವನ್ನು ಚಾರಿಟಿಗೆ ನೀಡಿದ್ದಾರೆ.
ಅಲಿಯಾ ಭಟ್ ನೀಡಿದ್ದ ಹಣದಿಂದ ಎ.ಆರ್.ಓ.ಎಚ್.ಎ ಸಂಸ್ಥೆ ಮಂಡ್ಯದ ಕಿಕ್ಕೇರಿ ಗ್ರಾಮಕ್ಕೆ ಸೋಲಾರ್ ದೀಪವನ್ನು ಒದಗಿಸಿದೆ. ಇದರಿಂದ ಕತ್ತಲಿನಲ್ಲಿ ಇದ್ದ 40 ಕುಟುಂಬಗಳಿಗೆ ಬೆಳಕು ಸಿಕ್ಕಿದೆ.