Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಾವು ಅಸಾಮಾನ್ಯ, ದೇಹ ಹಳದಿ ಬಣ್ಣಕ್ಕೆ ತಿರುಗಿತ್ತು: ಆಂಬ್ಯುಲೆನ್ಸ್ ಸಹಾಯಕ ಬಿಚ್ಚಿಟ್ಟ ಸತ್ಯ
ಸುಶಾಂತ್ ಸಿಂಗ್ ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಅನುಮಾನ ಅನೇಕರನ್ನು ಕಾಡುತ್ತಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಪೊಲೀಸರು ಮತ್ತು ಮರಣೋತ್ತರ ವರದಿ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ. ಆದರೆ ಸುಶಾಂತ್ ಸಿಂಗ್ ಅವರದ್ದು ಕೊಲೆ ಎನ್ನುವ ಅನುಮಾನ ಕೂಡ ವ್ಯಕ್ತವಾಗುತ್ತಿದೆ.
Recommended Video
ಸುಶಾಂತ್ ಸಿಂಗ್ ಸಾವಿನ ಬಳಿಕ ಮೃತ ದೇಹ ನೋಡಿದ ಆಂಬ್ಯುಲೆನ್ಸ್ ಸಹಾಯಕ ಸುಶಾಂತ್ ಸಿಂಗ್ ಸಾವು ಅಸಾಮಾನ್ಯ ಎಂದು ಹೇಳಿದ್ದಾರೆ. ಖಾಸಗಿ ವಾಹಿನಿ ಜೊತೆ ಮಾತನಾಡಿದ ಆಂಬ್ಯುಲೆನ್ಸ್ ಸಹಾಯಕ "ಒಬ್ಬ ವ್ಯಕ್ತಿ ನೇಣು ಹಾಕಿಕೊಂಡರೆ, ಅವರ ದೇಹವು ಹಳದಿ ಬಣ್ಣಕ್ಕೆ ತಿರುಗುವುದಿಲ್ಲ, ಆದರೆ ಸುಶಾಂತ್ ಸಿಂಗ್ ದೇಹ ಹಳದಿ ಬಣ್ಣಕ್ಕೆ ತಿರುಗಿತ್ತು" ಎಂದಿದ್ದಾರೆ.
ಅವಳಿ ಮಕ್ಕಳನ್ನು ಸ್ವಾಗತಿಸಿದ ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ
"ನೇಣು ಹಾಕಿಕೊಂಡಾಗ, ಕುತ್ತಿಗೆಯ ಸುತ್ತ ಗುರುತು ಇರುತ್ತದೆ. ಆದರೆ ಸುಶಾಂತ್ ಸಿಂಗ್ ಕುತ್ತಿಗೆ ಅರ್ಧಂಬರ್ದ ಆಗಿತ್ತು. ಕಾಲುಗಳು ವಿಚಿತ್ರವಾಗಿ ಬಾಗಿದ್ದವು, ಒದೆಯುವ ಸ್ಥಿತಿಯಲ್ಲಿ ಇತ್ತು. ಕಾಲಿನಲ್ಲಿಯೂ ಕಲೆಗಳು ಆಗಿದ್ದವು" ಎಂದು ಬಹಿರಂಗ ಪಡಿಸಿದ್ದಾರೆ.
ಇದೀಗ ಸುಶಾಂತ್ ಸಿಂಗ್ ಪ್ರಕರಣ, ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿದೆ. ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋಯಿಕ್ ಮತ್ತು ಆಕೆಯ ತಂದೆ ಜಾರಿ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನೂ ಫರೀದಾಬಾದ್ ನಲ್ಲಿ ಅವರ ಕೆಕೆ ಸಿಂಗ್ ಅಳಿಯ ಒಪಿ ಸಿಂಗ್ ಮನೆಯಲ್ಲಿ ಸುಶಾಂತ್ ಅವರ ತಂದೆ ಕೆಕೆ ಸಿಂಗ್, ಹಿರಿಯ ಸಹೋದರಿ ರಾಣಿ ಸಿಂಗ್ ಹೇಳಿಕೆಯನ್ನು ಸಿಬಿಐ ದಾಖಲಿಸಿಕೊಂಡಿದೆ.