Don't Miss!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿದ್ದ 500 ವಲಸಿಗರನ್ನು ಕರೆತರಲು ವಿಮಾನ ವ್ಯವಸ್ಥೆ ಮಾಡಿದ ಅಮಿತಾಬ್ ಬಚ್ಚನ್
ಸಂಕಷ್ಟದಲ್ಲಿ ಸಿಲುಕಿರುವ ಸುಮಾರು 500 ವಲಸಿಗರನ್ನು ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ಮೂರು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದಾರೆ ಎಂದು ವರದಿಯಾಗಿದೆ.
Recommended Video
ಮೇ 29ರಂದು ಅವರು ಮುಂಬೈನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಉತ್ತರ ಪ್ರದೇಶದ ಅವರ ಊರುಗಳಿಗೆ ತಲುಪಿಸಲು ಹತ್ತು ಬಸ್ಗಳನ್ನು ವ್ಯವಸ್ಥೆ ಮಾಡಿದ್ದರು. ಸಂಕಷ್ಟದಲ್ಲಿರುವ ವಲಸಿಗ ಕೆಲಸಗಾರರ ಮನವಿಗಳನ್ನು ಕೇಳಿ ಕರಗಿದ ಅಮಿತಾಬ್, ಅವರಿಗೆ ಸಹಾಯ ಮಾಡಲು ನಿರ್ಧರಿಸಿದ್ದರು. ಹೀಗಾಗಿ ಬುಧವಾರ ಬೆಳಿಗ್ಗೆ ಇಂಡಿಗೋ ಏರ್ಲೈನ್ಸ್ನ ವಾರಣಾಸಿಗೆ ತೆರಳುವ ವಿಮಾನವನ್ನು ಬುಕ್ ಮಾಡಿದ್ದರು.
ಯಾರೂ ದಾರಿ ತಪ್ಪದಂತೆ 'ಮಾರ್ಗದರ್ಶನ' ಮಾಡಲಿದ್ದಾರೆ ಅಮಿತಾಬ್ ಬಚ್ಚನ್!
ಸುಮಾರು 180 ವಲಸಿಗರನ್ನು ಬೆಳಿಗೆ ವಿಮಾನದ ಮೂಲಕ ವಾರಣಾಸಿಗೆ ಕಳುಹಿಸಲಾಯಿತು. ಬಳಿಕ ಮತ್ತೆರಡು ವಿಮಾನಗಳಲ್ಲಿ ವಲಸಿಗ ಕಾರ್ಮಿಕರನ್ನು ಕಳುಹಿಸಲಾಯಿತು. ಮೊದಲು ರೈಲ್ವೆ ಟಿಕೆಟ್ ಖರೀದಿಸಿ ರೈಲಿನಲ್ಲಿ ಕಳುಹಿಸಲು ಉದ್ದೇಶಿಸಲಾಗಿತ್ತು. ಆದರೆ ಅದು ಕಷ್ಟವೆನಿಸಿ ಕೈಬಿಡಲಾಯಿತು. ಇಡೀ ಕಾರ್ಯವನ್ನು ಅಮಿತಾಬ್ ಅವರ ಆಪ್ತರು ನಿಭಾಯಿಸಿದ್ದರು.
ಈ ಸ್ಟಾರ್ ನಟನ ಕಾರಣಕ್ಕಾಗಿ ಅಮಿತಾಬ್ ಜೊತೆ ಮಾಧುರಿ ದೀಕ್ಷಿತ್ ಕೊನೆಗೂ ಸಿನಿಮಾ ಮಾಡಲೇ ಇಲ್ಲ
ಪಶ್ಚಿಮ ಬಂಗಾಳ, ಬಿಹಾರ, ತಮಿಳು ನಾಡು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಬಂದು ಮುಂಬೈನಲ್ಲಿ ಸಿಲುಕಿರುವ ಇನ್ನಷ್ಟು ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಮತ್ತಷ್ಟು ವಿಮಾನಗಳನ್ನು ವ್ಯವಸ್ಥೆ ಮಾಡಲು ಅವರು ಉದ್ದೇಶಿಸಿದ್ದಾರೆ ಎನ್ನಲಾಗಿದೆ.