Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಟ್ಟರ ಚಿತ್ರದಲ್ಲಿ ಮತ್ತೆ ಒಂದಾದ ಬಿಗ್ ಬಿ- ನಾನಾ?
ಡ್ರಾಮಾ ಚಿತ್ರದ ಬಳಿಕ ಜನಪ್ರಿಯ ನಿರ್ದೇಶಕ ಯೋಗರಾಜ್ ಭಟ್ ಎಲ್ಲಿ ಮರೆಯಾದರು ಎಂದು ಹುಡುಕುತ್ತಿದ್ದ ಅಭಿಮಾನಿಗಳಿಗೆ ಥ್ರಿಲ್ಲಿಂಗ್ ಸುದ್ದಿಗಳೇ ಸಿಗುತ್ತಿದೆ. ಭಟ್ಟರ ಡೈರೆಕ್ಷನ್ ನಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಸುದೀಪ್ 'ಬಿಗ್ ಬಾಸ್' ಹಿಂದೆ ಬಿದ್ದರೆ, ಭಟ್ಟರು 'ಬಿಗ್ ಬಿ' ಹುಡುಕಿಕೊಂಡು ಮುಂಬೈಗೆ ಹೊರಟರು.
ಬಾಲಿವುಡ್
ಗೆ
ಸ್ಟಾರ್
ನಿರ್ದೇಶಕ
ಯೋಗರಾಜ್
ಭಟ್
ಪ್ರವೇಶ
ಖಚಿತವಾಗುತ್ತಿದ್ದಂತೆ
ಕಥೆ,
ತಾರಾಗಣದ
ಬಗ್ಗೆ
ಕುತೂಹಲ
ಹೆಚ್ಚಾಗತೊಡಗಿದೆ.
ಹದಿಹರೆಯದ
ಮನಸ್ಸಿಗೆ
ಮುದ
ನೀಡುವ
ಚಿತ್ರ
ಕಥೆ
ರೆಡಿ
ಮಾಡಿಕೊಂಡಿರುವ
ಭಟ್ಟರು,
ರೋಮ್ಯಾನ್ಸ್,
ಸೆಂಟಿಮೆಂಟ್
ಮಿಕ್ಸ್
ಮಾಡಿರುವ
ಒಳ್ಳೆ
ಕಥೆ
ನೀಡುತ್ತಾರಂತೆ.
ಸದ್ಯಕ್ಕೆ ಹಿಂದಿ ಚಿತ್ರರಂಗದ ಹೊಸ ಮುಖಗಳಿಗೆ ಹುಡುಕಾಟ ನಡೆಸಿದ್ದಾರೆ. ಈ ನಡುವೆ ಅಮಿತಾಬ್ ಬಚ್ಚನ್ ಅವರಿಗೆ ಪ್ರಧಾನ ಪಾತ್ರ( ಭಟ್ಟರ ಪಂಚರಂಗಿಯ ಅನಂತ್ ನಾಗ್ ಪಾತ್ರದಂತೆ) ನೀಡುವ ಸಾಧ್ಯತೆ ಬಗ್ಗೆ ಸುದ್ದಿ ಹರಡಿತು. ಭಟ್ಟರು ಕೂಡಾ ಬಿಗ್ ಬಿ ಒಳ್ಳೆ ಪಾತ್ರ ಸೃಷ್ಟಿಸಿರುವ ಬಗ್ಗೆ ಹೇಳಿಕೊಂಡಿದ್ದರು.
ಆದರೆ, ಕಥೆ ಕೇಳಿದ ಬಿಗ್ ಬಿ ಕೂಡಾ ಥ್ರಿಲ್ ಆಗಿದ್ದಾರಂತೆ. ಅವರು ಓಕೆ ಎಂದರೆ ಅಮಿತಾಬ್ ಗೆ ಆಕ್ಷನ್ ಕಟ್ ಹೇಳುವುದೊಂದು ಬಾಕಿ ಇರುತ್ತದೆ. ಆಗಸ್ಟ್ ನಲ್ಲಿ ಚಿತ್ರೀಕರಣವಂತೆ. ಕನ್ನಡ ಹಾಗೂ ಹಿಂದಿ ಎರಡೂ ಭಾಷೆಗಳಲ್ಲಿ ಚಿತ್ರ ಏಕಕಾಲಕ್ಕೆ ತೆರೆಕಾಣಲಿದೆಯಂತೆ.
ಈಗ ಬಂದಿರುವ ಹೊಸ ಸುದ್ದಿ ಪ್ರಕಾರ ಬಿಗ್ ಬಿ ಜೊತೆಗೆ ಡೈಲಾಗ್ ಕಿಂಗ್ ನಾನಾ ಪಾಟೇಕರ್ ಅವರನ್ನು ತಾರಾಗಣದಲ್ಲಿ ಸೇರಿಸಿಕೊಳ್ಳಲಾಗಿದೆಯಂತೆ. 1999ರಲ್ಲಿ ಮೆಹುಲ್ ಕುಮಾರ್ ಅವರ ಕೊಹ್ರಾಂ ಚಿತ್ರದಲ್ಲಿ ಬಿಗ್ ಬಿ ಹಾಗೂ ನಾನಾ ಪಾಟೇಕರ್ ಒಟ್ಟಿಗೆ ನಟಿಸಿದ್ದರು. ಅದರೆ, ಚಿತ್ರ ಬಾಕ್ಸಾಫೀಸ್ ನಲ್ಲಿ ಸದ್ದು ಮಾಡಿರಲಿಲ್ಲ.
ಈಗ ಮತ್ತೊಮ್ಮೆ ಇಬ್ಬರನ್ನು ಒಟ್ಟಿಗೆ ತೆರೆ ಮೇಲೆ ನೋಡುವ ಅವಕಾಶವನ್ನು ಭಟ್ಟರು ಸೃಷ್ಟಿಸುತ್ತಿದ್ದಾರೆ. ನಾನಾ ಪಾಟೇಕರ್ ಅವರಿಗೆ ಕಥೆ ಹೇಳಿದ್ದೇನೆ. ಬನ್ನಿ ಮಾತಾಡೋಣ ಎಂದಿದ್ದಾರೆ. ಕಥೆಯಲ್ಲಿ ಇನ್ನಷ್ಟು ಬದಲಾವಣೆ ಮಾಡುವುದಿದೆ ಎಲ್ಲವೂ ಕೆಲವು ದಿನಗಳಲ್ಲಿ ಫೈನಲ್ ಆಗುವ ಸಾಧ್ಯತೆಯಿದೆ ಎಂದು ಭಟ್ಟರು ಹೇಳಿದ್ದಾರೆ.