Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಂಡಮಾರುತದ ಹೊಡೆತಕ್ಕೆ ಮುಳುಗಿದ ಅಮಿತಾಬ್ ಬಚ್ಚನ್ ಕಚೇರಿ
ಕೊರೊನಾ ವೈರಸ್ ಎರಡನೇ ಅಲೆ ಭೀಕರತೆ ನಡುವೆ ತೌಕ್ತೆ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾತ್ರಿ ಇಡಿ ಸುರಿದ ಮಳೆಯಿಂದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಜನಕ್ ಕಚೇರಿ ಪ್ರವಾಹಕ್ಕೆ ಸಿಲುಕಿದೆ. ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಕೆಲವು ಸಿಬ್ಬಂದಿಯ ಶೆಡ್ ಗಳು ಹಾರಿಹೋಗಿದ್ದು, ಸಿಬ್ಬಂದಿ ನೀರಿನಲ್ಲಿ ಒದ್ದೆಯಾಗಿದ್ದಾರೆ ಎಂದು ಅಮಿತಾಬ್ ಹೇಳಿದ್ದಾರೆ.
ಈ ಬಗ್ಗೆ ನಟ ಅಮಿತಾಬ್ ತನ್ನ ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ. 'ಚಂಡಮಾರುತದ ನಡುವೆ ವಿಪರೀತ ಮೌನವಿದೆ. ದಿನವಿಡಿ ಮಳೆಯಾಗಿದೆ. ಮರಗಳು ಧರೆಗೆ ಉರುಳಿವೆ. ಎಲ್ಲಾ ಕಡೆ ಮಳೆ ಬೀಳುತ್ತಿದೆ. ಜನಕ್ ಕಚೇರಿ ಪ್ರವಾಹಕ್ಕೆ ಸಿಲುಕಿದೆ. ಮನ್ಸೂನ್ ಮಳೆಗೆ ಇನ್ನು ಸಿದ್ಧವಾಗಿಲ್ಲ. ಪ್ಲಾಸ್ಟಿಕ್ ಕವರ್ಗಳು ಹಾರೆಹೋಗಿವೆ. ಕೆಲವು ಸಿಬ್ಬಂದಿಗಳ ಶೆಡ್ ಕೂಡ ಹಾರಿಹೋಗಿದೆ' ಎಂದು ಬರೆದುಕೊಂಡಿದ್ದಾರೆ.
ಪೋಲೆಂಡ್ ನಿಂದ 50 ಆಕ್ಸಿಜನ್ ಸಾಂದ್ರಕ ಖರೀದಿಸಿದ ಬಿಗ್ ಬಿ ಅಮಿತಾಬ್ ಬಚ್ಚನ್
ನೀರಿನಲ್ಲಿ ಒದ್ದೆಯಾಗಿದ್ದರು ಸಿಬ್ಬಂದಿ ಇನ್ನು ಕೆಲಸ ಮಾಡುತ್ತಿದ್ದಾರೆ ಎಂದು ತನ್ನ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ. 'ನಾನು ತಕ್ಷಣ ಅವರಿಗೆ ಬಟ್ಟೆಗಳನ್ನು ಬದಲಾಯಿಸಲು ಹೇಳಿದೆ. ನನ್ನ ವಾಡ್ ರೂಮ್ನಿಂದ ಬಟ್ಟೆಗಳನ್ನು ಕೊಟ್ಟಿದ್ದೇನೆ' ಎಂದು ಹೇಳಿದ್ದಾರೆ. ತೌಕ್ತೆ ಚಂಡಮಾರುತವನ್ನು 'ಅಹ್ವಾನಿಸದ ಅತಿಥಿ' ಎಂದು ಕರೆದಿದ್ದಾರೆ.
ಕೊರೊನಾ ವಿರುದ್ಧ ಹೋರಾಟಕ್ಕೆ ನೆರವಾಗಿದ್ದ ಅಮಿತಾಬ್ 2 ಕೋಟಿ ರೂ. ಪರಿಹಾರ ನೀಡದ್ದಲ್ಲದೆ, ವಿದೇಶದಿಂದ ಆಕ್ಸಿಜನ್ ಸಾಂದ್ರಕಗಳನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ. ಆಸ್ಪತ್ರೆಗಳಿಗೆ ವೆಂಟಿಲೇಟರ್ ವ್ಯವಸ್ಥೆಗಳನ್ನು ಮಾಡಿದ್ದಾರೆ. ಇತ್ತೀಚಿಗಷ್ಟೆ ಅಮಿತಾಬ್ ಎರಡನೇ ಡೋಸ್ ಕೊರೊನಾ ಲಸಿಕೆಯನ್ನು ಪಡೆದರು.
Recommended Video
ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಚೆಹ್ರೆ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಅಂದಕೊಂಡಂತೆ ಆಗಿದ್ದರೆ ಸಿನಿಮಾ ಕಳೆದ ತಿಂಗಳು ರಿಲೀಸ್ ಆಗಬೇಕಿತ್ತು ಆದರೆ ಕೊರೊನಾ ವೈರಸ್ ನಿಂದ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಸದ್ಯ ಗುಡ್ ಬೈ ಸಿನಿಮಾ ಅಮಿತಾಬ್ ಬಳಿ ಇದೆ. ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ.