Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ಗೆ ಕೊರೊನಾ ವೈರಸ್ ಪಾಸಿಟಿವ್
ಬಾಲಿವುಡ್ನ ಖ್ಯಾತ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಶನಿವಾರ ಅನಾರೋಗ್ಯಕ್ಕೆ ಒಳಗಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
77 ವರ್ಷದ ನಟ ಅಮಿತಾಬ್ ಅವರನ್ನು ಶನಿವಾರ ಸಂಜೆ ಮುಂಬೈನ ನಾನಾವತಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಮಾಹಿತಿಯನ್ನು ಸ್ವತಃ ಅಮಿತಾಬ್ ಬಚ್ಚನ್ ಖಚಿತಪಡಿಸಿದ್ದಾರೆ. ತಂದೆಯ ಜತೆಗೆ ಕೊರೊನಾ ವೈರಸ್ ಪರೀಕ್ಷೆಗೆ ಒಳಪಟ್ಟ ಅಭಿಷೇಕ್ ಬಚ್ಚನ್ ಅವರಲ್ಲಿಯೂ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರಿಂದ ಜಯಾ ಬಚ್ಚನ್, ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ ಸೇರಿದಂತೆ ಬಚ್ಚನ್ ಅವರ ಇಡೀ ಕುಟುಂಬ ಆತಂಕಕ್ಕೆ ಸಿಲುಕಿದೆ.
ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾದ ಸಂಗತಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ಬಳಿಕ ಅಭಿಮಾನಿಗಳು ಆತಂಕಗೊಂಡಿದ್ದರು. ಅವರ ಅನಾರೋಗ್ಯಕ್ಕೆ ಕಾರಣ ಗೊತ್ತಾಗಿರಲಿಲ್ಲ. ಆದರೆ ರಾತ್ರಿ ವೇಳೆ ಅಮಿತಾಬ್ ಟ್ವೀಟ್ ಮಾಡಿದ್ದು, ತಮಗೆ ಕೊರೊನಾ ವೈರಸ್ ಸೋಂಕು ಇರುವುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ. ಮುಂದೆ ಓದಿ...
ನನಗೆ ಪಾಸಿಟಿವ್ ಬಂದಿದೆ
'ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಕುಟುಂಬದವರು ಮತ್ತು ಸಿಬ್ಬಂದಿ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಆಸ್ಪತ್ರೆಯವರು ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಅವರ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ' ಎಂದು ಅಮಿತಾಬ್ ತಿಳಿಸಿದ್ದಾರೆ.
ಅಮಿತಾಬ್ ಬಚ್ಚನ್ ಈ ಎರಡು 'ಸ್ಟೈಲ್' ಹಿಂದೆ ಇರೋದು ನೋವಿನ ಕಥೆ
ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿ
'ಕಳೆದ ಹತ್ತು ದಿನಗಳಿಂದ ನನ್ನ ನಿಕಟ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ದಯವಿಟ್ಟು ಸ್ವತಃ ತೆರಳಿ ಕೊರೊನಾ ವೈರಸ್ ತಪಾಸಣೆಗೆ ಒಳಪಡುವಂತೆ ಮನವಿ ಮಾಡುತ್ತೇನೆ' ಎಂದು ಅಮಿತಾಬ್ ಬಚ್ಚನ್ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
ಅಮಿತಾಬ್ ಅವರಲ್ಲಿ ಕೊರೊನಾ ವೈರಸ್ನ ತೀವ್ರ ಲಕ್ಷಣಗಳು ಕಂಡುಬಂದಿಲ್ಲ. ಸಣ್ಣಪುಟ್ಟ ಲಕ್ಷಣಗಳು ಮಾತ್ರ ಕಾಣಿಸಿವೆ ಎಂದು ವರದಿಯಾಗಿದ್ದು, ಅವರ ಅಭಿಮಾನಿಗಳಲ್ಲಿ ನೆಮ್ಮದಿ ಮೂಡಿಸಿದೆ.
ಈ ಸ್ಟಾರ್ ನಟನ ಕಾರಣಕ್ಕಾಗಿ ಅಮಿತಾಬ್ ಜೊತೆ ಮಾಧುರಿ ದೀಕ್ಷಿತ್ ಕೊನೆಗೂ ಸಿನಿಮಾ ಮಾಡಲೇ ಇಲ್ಲ
ಅಭಿಮಾನಿಗಳು ಹಾರೈಕೆ
ಅಮಿತಾಬ್ ಬಚ್ಚನ್ ಅವರ ಕುಟುಂಬದ ಸದಸ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಕೊರೊನಾ ವೈರಸ್ ತಪಾಸಣೆಗೆ ಒಳಗಾಗಿದ್ದಾರೆ. ಅಮಿತಾಬ್ ಅವರಿಗೆ ಕೊರೊನಾ ವೈರಸ್ ಇರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮಕ್ಕಳ ಜತೆಗೆ ಫೋಟೊ
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಅಮಿತಾಬ್, ಶುಕ್ರವಾರವಷ್ಟೇ ಮಗಳು ಶ್ವೇತಾ ಮತ್ತು ಮಗ ಅಭಿಷೇಕ್ ಜತೆಗಿನ ಫೋಟೊ ಹಂಚಿಕೊಂಡಿದ್ದರು. ಅಮಿತಾಬ್ ಬಚ್ಚನ್ ಅವರು ಆಯುಷ್ಮಾನ್ ಖುರಾನಾ ಜತೆ ಕೊನೆಯದಾಗಿ 'ಗುಲಾಬೋ ಸಿತಾಬೋ' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ, ಕೊರೊನಾ ವೈರಸ್ ಕಾರಣದಿಂದ ಒಟಿಟಿ ಮೂಲಕ ತೆರೆಕಂಡಿತ್ತು.
ಕರೋಡ್ ಪತಿ ಕಾರ್ಯಕ್ರಮ
ರಣಬೀರ್
ಕಪೂರ್
ಮತ್ತು
ಆಲಿಯಾ
ಭಟ್
ಮುಖ್ಯ
ಪಾತ್ರಗಳಲ್ಲಿರುವ
ಅಯಾನ್
ಮುಖರ್ಜಿ
ನಿರ್ದೇಶನದ
'ಬ್ರಹ್ಮಾಸ್ತ್ರ'
ಚಿತ್ರದಲ್ಲಿ
ಅವರು
ನಟಿಸುತ್ತಿದ್ದರು.
ಚೆಹ್ರೆ
ಮತ್ತು
ಝುಂಡ್
ಚಿತ್ರಗಳಲ್ಲಿಯೂ
ಅವರು
ಅಭಿನಯಿಸುತ್ತಿದ್ದಾರೆ.
ಇದರ
ಜತೆಗೆ
ಜನಪ್ರಿಯ
ಕಾರ್ಯಕ್ರಮ
'ಕೌನ್
ಬನೇಗಾ
ಕರೋಡ್ಪತಿ'ಯ
12ನೇ
ಸೀಸನ್ಗೆ
ಕೆಲಸ
ಮಾಡಲು
ಅಮಿತಾಬ್
ತಯಾರಿ
ಮಾಡಿಕೊಳ್ಳುತ್ತಿದ್ದರು.
ಆದರೆ
ಹಿರಿಯ
ನಾಗರಿಕರ
ಮೇಲೆ
ಸರ್ಕಾರದ
ಲಾಕ್
ಡೌನ್
ನಿಯಮಗಳು
ಅನ್ವಯವಾಗುವುದರಿಂದ
ಅವರು
ಅಲ್ಲಿಗೆ
ತೆರಳಿ
ಚಿತ್ರೀಕರಣದಲ್ಲಿ
ಪಾಲ್ಗೊಳ್ಳಲು
ಸಾಧ್ಯವಾಗಿರಲಿಲ್ಲ.